ಇವಿಎಂ: ಭಾರತೀಯರು ಎಚ್ಚೆತ್ತುಕೊಳ್ಳದಿದ್ದರೆ ಪಶ್ಚಾತ್ತಾಪ ಪಡಬೇಕಾದೀತು
ನವದೆಹಲಿ, ಆ 31: ಕಾಂಗ್ರೆಸ್ಸಿನ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್, ಇಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ (ಇವಿಎಂ) ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ, ಭಾರತೀಯರು ಇನ್ನಾದರೂ ಎಚ್ಚೆತ್ತುಕೊಳ್ಳಿ ಎನ್ನುವ ಸಲಹೆಯನ್ನು ನೀಡಿದ್ದಾರೆ.
ಟ್ವೀಟ್ ಒಂದಕ್ಕೆ ಉತ್ತರಿಸುತ್ತಾ ದಿಗ್ವಿಜಯ್ ಸಿಂಗ್, "ಭಾರತೀಯರು ಇನ್ನಾದರೂ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಅಂದರೆ 2024ರಲ್ಲಿ ನಡೆಯುವ ಸಾರ್ವತ್ರಿಕ ಚುನಾವಣೆಯೇ ಕೊನೆ ಚುನಾವಣೆಯಾಗಬಹುದು"ಎಂದು ಹೇಳಿದ್ದಾರೆ.
"ನಿಮ್ಮ ಮಾತು ಸತ್ಯ. ಹೊಸ ತಂತ್ರಜ್ಞಾನದ ಮೂಲಕ ಇವಿಎಂ, ದೇಶದ ಪ್ರಜಾಪ್ರಭುತ್ವ / ಚುನಾವಣಾ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದೆ. ಭಾರತೀಯರು ಇನ್ನಾದರೂ ಎಚ್ಚೆತ್ತುಕೊಂಡು ಬ್ಯಾಲಟ್ ಪೇಪರ್ ಮೂಲಕವೇ ಚುನಾವಣೆಗೆ ಪಟ್ಟು ಹಿಡಿಯದಿದ್ದರೆ, 2024ರಲ್ಲಿ ದೇಶದಲ್ಲಿ ಕೊನೆಯ ಚುನಾವಣೆ ಆಗಬಹುದು" ಎಂದು ದಿಗ್ವಿಜಯ್ ಸಿಂಗ್ ಟ್ವೀಟ್ ಒಂದಕ್ಕೆ ಪ್ರತಿಕ್ರಿಯೆ ಮಾಡಿದ್ದಾರೆ.

ಪ್ರಧಾನಿ ಮೋದಿಯವರ ಮನ್ ಕೀ ಬಾತ್ ಕಾರ್ಯಕ್ರಮಕ್ಕೆ ಡಿಸ್ ಲೈಕ್ ಆಗಿದ್ದೇ ಹೆಚ್ಚು ಎಂದು ಲೇವಡಿ ಮಾಡಿರುವ ದಿಗ್ವಿಜಯ್ ಸಿಂಗ್, ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್ ಸರಕಾರದ ವಿರುದ್ದವೂ ಕಿಡಿಕಾರಿದ್ದಾರೆ.
ಬಿಜೆಪಿಯವರು ನಕಲಿ ಗೋಭಕ್ತರು ಎಂದು ಜರಿದಿರುವ ಸಿಂಗ್, "ಹಿಂದೆ ಕಮಲ್ ನಾಥ್ ಸರಕಾರ ಗೋಶಾಲೆಗೆಂದು ಮೀಸಲಾಗಿಟ್ಟಿದ್ದ ಅನುದಾನವನ್ನು ಶಿವರಾಜ್ ಸಿಂಗ್ ಸರಕಾರ ಕಡಿತಗೊಳಿಸಿದೆ. ಇದು, ಬಿಜೆಪಿಯ ಗೋಪ್ರೇಮ" ಎಂದು ದಿಗ್ವಿಜಯ್ ಸಿಂಗ್ ಲೇವಡಿ ಮಾಡಿದ್ದಾರೆ.
ಬಿಹಾರದ ಅಸೆಂಬ್ಲಿ ಚುನಾವಣೆ ಈ ವರ್ಷದಲ್ಲಿ ನಡೆಯುತ್ತಿರುವುದರಿಂದ, ಇವಿಎಂ ವಿಚಾರ ಮತ್ತೆ ಮುನ್ನಲೆಗೆ ಬರುವ ಸಾಧ್ಯತೆಯಿದೆ. ಕೊರೊನಾ ಕಾಟದ ನಡುವೆಯೂ, ಬಿಹಾರದಲ್ಲಿ ಚುನಾವಣೆ ನಡೆಸುವುದಾಗಿ, ಚುನಾವಣಾ ಆಯೋಗ ಈಗಾಗಲೇ ಸ್ಪಷ್ಟ ಪಡಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications