ಅಸಾರಾಮ್ ಜತೆ ಮೋದಿ ವಿಡಿಯೋ ಹಂಚಿದ ಕಾಂಗ್ರೆಸ್
ಬೆಂಗಳೂರು, ಏಪ್ರಿಲ್ 26: ಕರ್ನಾಟಕ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಟ್ವೀಟ್ ವಾರ್ ಮುಂದುವರೆದಿದೆ. ವೈಯಕ್ತಿಕ ನಿಂದನೆ, ದ್ವೇಷ, ಕುಹಕವೇ ಅಧಿಕವಾಗಿದ್ದು, ಸಾರ್ವಜನಿಕರಿಗೆ ಅಸಹ್ಯ ಹುಟ್ಟಿಸುತ್ತಿದೆ.
ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯ ಘೋಷಿತ ದೇವಮಾನವ ಅಸಾರಾಮ್ ಬಾಪು ಅವರಿಗೆ ಜೀವಾವಧಿ ಶಿಕ್ಷೆ ಘೋಷಿಸಲಾಗಿದೆ.
ಜೋಧಪುರ್ ವಿಶೇಷ ನ್ಯಾಯಾಲಯದಲ್ಲಿ ಆದೇಶ ಹೊರ ಬಂದ ಬಳಿಕ, ಕಾಂಗ್ರೆಸ್ ಮುಖಂಡರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅಸಾರಾಮ್ ಬಾಪು ಇರುವ ಹಳೆ ವಿಡಿಯೋವೊಂದನ್ನ ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿದೆ.
ವಿಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಅಸಾರಾಮ್ ಬಾಪು ಅವರಿಂದ ಆಶೀರ್ವಾದ ಪಡೆದುಕೊಳ್ಳುತ್ತಿದ್ದಾರೆ. "A man is known by the company he keeps" - Aesop's fables, along with #AsaramVerdict. ಎಂಬ ವಾಕ್ಯದೊಂದಿಗೆ ಟ್ವೀಟ್ ಮಾಡಲಾಗಿದೆ. ಆದರೆ, ತಕ್ಷಣವೇ ಇದಕ್ಕೆ ಪ್ರತಿಕ್ರಿಯಿಸಿರುವ ಸೆಲೆಬ್ರಿಟಿಗಳು, ಸಾರ್ವಜನಿಕರು, ಕಾಂಗ್ರೆಸ್ಸಿಗರಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಟ್ವೀಟ್ ವಾರ್
ಸ್ವಯ ಘೋಷಿತ ದೇವಮಾನವ ಅಸಾರಾಮ್ ಬಾಪು ಅವರಿಗೆ ಜೀವಾವಧಿ ಶಿಕ್ಷೆ ಘೋಷಿಸಲಾಗಿದೆ. ಜೋಧಪುರ್ ವಿಶೇಷ ನ್ಯಾಯಾಲಯದಲ್ಲಿ ಆದೇಶ ಹೊರ ಬಂದ ಬಳಿಕ, ಕಾಂಗ್ರೆಸ್ ಮುಖಂಡರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅಸಾರಾಮ್ ಬಾಪು ಇರುವ ಹಳೆ ವಿಡಿಯೋವೊಂದನ್ನು ಹಂಚಿಕೊಂಡು ಗೇಲಿ ಮಾಡಲು ಆರಂಭಿಸುತ್ತಿದ್ದಂತೆ, ಮೋದಿ ಅಭಿಮಾನಿಗಳು, ಬಿಜೆಪಿಯವರು ಸರಿಯಾಗಿ ಪ್ರತಿಕ್ರಿಯೆ ನೀಡಿದ್ದಾರೆ.
|
ಅಸಾರಾಮ್ ಬಾಪು ಅವರಿಂದ ಆಶೀರ್ವಾದ
"A man is known by the company he keeps" - Aesop's fables, along with #AsaramVerdict. ಎಂಬ ವಾಕ್ಯದೊಂದಿಗೆ ಟ್ವೀಟ್ ಮಾಡಲಾಗಿದೆ.

ಯಾವ ಕಾಲದ ವಿಡಿಯೋ ಇದು
ನರೇಂದ್ರ ಮೋದಿ ಅವರು ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಭಾಷಣ ಮಾಡುತ್ತಾ, ನಾನು ಬಾಪು ಅವರ ಆಶೀರ್ವಾದ ಪಡೆಯುತ್ತಿರುವುದು ನನ್ನ ಸುದೈವ, ಎಂದು ಹೇಳಿ ಅಸಾರಾಮ್ ಅವರನ್ನು ಅಪ್ಪಿಕೊಳ್ಳುವ ದೃಶ್ಯಗಳಿವೆ. ಆ ಕಾಲದಲ್ಲಿ ಅಸಾರಾಮ್ ಅವರು ಇನ್ನೂ ಹೆಚ್ಚು ಜನಪ್ರಿಯಗೊಂಡಿರಲಿಲ್ಲ ಹಾಗೂ ಯಾವುದೇ ಪ್ರಕರಣಗಳು ಅವರ ಮೇಲಿರಲಿಲ್ಲ.
|
ನಟ, ನಿರ್ದೇಶಕ ಫರ್ಹಾನ್ ಅಖ್ತರ್
ಹಿಂದಿ ನಟ, ನಿರ್ದೇಶಕ ಫರ್ಹಾನ್ ಅಖ್ತರ್ ಅವರು, ತಕ್ಷಣವೇ ಈ ವಿಡಿಯೋಗೆ ಪ್ರತಿಕ್ರಿಯಿಸಿ, ಅಸಾರಾಮ್ ಅವರ ಜತೆ ಎಲ್ಲಾ ರಾಜಕೀಯ ನಾಯಕರು ಕಾಣಿಸಿಕೊಂಡಿದ್ದಾರೆ. ಜತೆಗೆ ಕಾಣಿಸಿಕೊಂಡ ತಕ್ಷಣ, ವೇದಿಕೆ ಹಂಚಿಕೊಂಡ ತಕ್ಷಣ ಈ ರೀತಿ ಅಗೌರವವಾಗಿ ಟ್ವೀಟ್ ಮಾಡುವುದು ಸರಿಯಲ್ಲ. ಈ ವಿಡಿಯೋ ಕಾಲದಲ್ಲಿ ಅಸಾರಾಮ್ ಇನ್ನೂ ದೋಷಿಯಾಗಿರಲಿಲ್ಲ. ಕಾನೂನಿಗೆ ಬೆಲೆ ಕೊಡಿ ಎಂದಿದ್ದಾರೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications