ಮೋದಿ ಬೆಂಬಲಿಗರ ವಿರುದ್ಧ ಆಯೋಗಕ್ಕೆ ದೂರು ನೀಡಿದ ರಮ್ಯಾ
ನವದೆಹಲಿ, ಮಾರ್ಚ್ 29: ಪ್ರಧಾನಿ ನರೇಂದ್ರ ಮೋದಿ ಬೆಂಬಲಿಗರ ಹೆಸರಿನಲ್ಲಿರುವ ಫೇಸ್ ಬುಕ್ ಮತ್ತಿತ್ತರ ಸಾಮಾಜಿಕ ಜಾಲ ತಾಣ ಖಾತೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡಲಾಗುತ್ತಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಉಚಿತ ಕೊಡುಗೆ, ಫ್ರೀ ಗಿಫ್ಟ್ ಹಂಚಿಕೆ ಬಗ್ಗೆ ಉಲ್ಲೇಖಿಸಲಾಗಿದೆ. ಇದರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಕಾಂಗ್ರೆಸ್ ಸಾಮಾಜಿಕ ಜಾಲ ತಾಣ ವಿಭಾಗದ ಮುಖ್ಯಸ್ಥೆ ರಮ್ಯಾ ಅವರು ಆರೋಪಿಸಿದ್ದಾರೆ. ಈ ಕುರಿತಂತೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಈ ರೀತಿ ಉಡುಗೊರೆಗಳನ್ನು ನೀಡುವ ಮೂಲಕ ಮತದಾರರನ್ನು ಓಲೈಕೆ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂದು ಆರೋಪ ಹೊರೆಸಿ, ಜಾಲ ತಾಣ ಖಾತೆಗಳ ವಿವರವನ್ನು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮೈ ಫಸ್ಟ್ ವೋಟ್ ಫಾರ್ ಮೋದಿ 2019 ಎಂಬ ಫೇಸ್ ಬುಕ್ ಖಾತೆ ಮೂಲಕ ಮತದಾರರನ್ನು ಸೆಳೆಯಲು ಯತ್ನಿಸಲಾಗುತ್ತಿದೆ.
ಮೋದಿ ಹೆಸರಿನಲ್ಲಿ ಟೀ ಶರ್ಟ್, ಬ್ಯಾಗ್, ಬ್ಯಾಡ್ಜ್, ಫೋನ್ ಕವರ್, ಟೋಪಿ ಮುಂತಾದ ಉಡುಗೊರೆ ನೀಡಿ ಮೋದಿಗೆ ವೋಟ್ ಮಾಡಿ ಎಂದು ಫುಸಲಾಯಿಸಲಾಗುತ್ತಿದೆ ಎಂದು ವರದಿ ಬಂದಿದೆ.
Congress leader Divya Spandana writes to Election Commission of India against social media pages for allegedly "offering free gifts to voters enticing them to support Modi" (file pic) pic.twitter.com/qMqE3a3XUp
— ANI (@ANI) March 28, 2019
ನರೇಂದ್ರಮೋದಿ ಅಧಿಕೃತ ವೆಬ್ ಸೈಟಿನಲ್ಲಿ ಈ ಗಿಫ್ಟ್ ಗಳು ಲಭ್ಯವಿದೆ. ಹೀಗಾಗಿ ಇದನ್ನು ಅಭ್ಯರ್ಥಿ ಮೋದಿ ಅವರ ಚುನಾವಣಾ ವೆಚ್ಚಕ್ಕೆ ಸರಿದೂಗಿಸಬೇಕು, ಆಮಿಷ ನೀಡಿ ಮತ ಹಾಕಿ ಎನ್ನುವದನ್ನು ತಡೆಗಟ್ಟಬೇಕು ಎಂದಿದ್ದಾರೆ.
ಉಡುಗೊರೆಗಳನ್ನು ನೀಡುವುದು, ರಾಜಕೀಯ ಪ್ರೇರಿತ ಜಾಹೀರಾತು ನೀಡುವುದಕ್ಕಾಗಿ ಒಂದು ವಾರದಲ್ಲಿ 53 ಲಕ್ಷ ರು ವೆಚ್ಚ ಮಾಡಲಾಗಿದೆ. ಆದರೆ, ಉಡುಗೊರೆ ನೀಡುವ ಆಮಿಷವೊಡ್ಡುವುದು ಜನಪ್ರತಿನಿಧಿ ಕಾಯ್ದೆ 123(1)2 ರ ಅನ್ವಯ ಲಂಚ ಎಂದು ಪರಿಗಣಿಸಲಾಗುತ್ತದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications