ಮನೆಯಲ್ಲಿ ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕ್ ಸ್ಕೂಟರ್ ಬ್ಯಾಟರಿ ಸ್ಫೋಟ: ಓರ್ವ ಸಾವು
ನಿಜಾಮಾಬಾದ್, ಏಪ್ರಿಲ್ 22: ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಮತ್ತೊಂದು ಎಲೆಕ್ಟ್ರಿಕಲ್ ವಾಹನ(ಇವಿ) ಬೆಂಕಿಗಾಹುತಿ ಘಟನೆ ನಡೆದಿದ್ದು, 80 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾನೆ. ಮಾತ್ರವಲ್ಲದೆ ಮನೆಯಲ್ಲಿ ಚಾರ್ಜಿಂಗ್ಗಾಗಿ ಪ್ಲಗ್ ಮಾಡಿದ ಎಲೆಕ್ಟ್ರಿಕ್ ಸ್ಕೂಟರ್ನ ಬ್ಯಾಟರಿ ಸ್ಫೋಟಗೊಂಡು ಅವರ ಕುಟುಂಬದ ಮೂವರಿಗೆ ಸುಟ್ಟ ಗಾಯಗಳಿಗೆ ಒಳಗಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಇ-ಸ್ಕೂಟರ್ ಪ್ಯೂರ್ ಇವಿಗೆ ಸೇರಿದ್ದಾರೆ. ಇ-ಸ್ಕೂಟರ್ ಸ್ಪೋಟಗೊಂಡು ಬೆಂಕಿಗೆ ಜೀವ ಕಳೆದುಕೊಂಡ ಮೂರನೇ ಘಟನೆ ಇದಾಗಿದೆ. ಇಲ್ಲಿಯವರೆಗೆ ಒಂದು ಓಲಾ, ಎರಡು ಓಕಿನಾವಾ, ಮೂರು ಪ್ಯೂರ್ ಇವಿ ಮತ್ತು 20 ಜಿತೇಂದ್ರ ಇವಿ ಸ್ಕೂಟರ್ಗಳು ಬೆಂಕಿಗೆ ಆಹುತಿಯಾಗಿವೆ.

ಏಪ್ರಿಲ್ 20 ರಂದು ಈ ಘಟನೆ ನಡೆದಿದ್ದು, ಕೊಠಡಿಯೊಂದರಲ್ಲಿ ಚಾರ್ಜ್ನಲ್ಲಿ ಇರಿಸಲಾಗಿದ್ದ ಎಲೆಕ್ಟ್ರಿಕ್ ದ್ವಿಚಕ್ರ ವಾಹನದ ಡಿಟ್ಯಾಚೇಬಲ್ ಬ್ಯಾಟರಿಯು ಸ್ಪೋಟಗೊಂಡು ಒಡೆದಿದ್ದು, ಇದರ ಪರಿಣಾಮವಾಗಿ ಮಲಗಿದ್ದ ಮೂವರಿಗೆ ಸುಟ್ಟ ಗಾಯಗಳಾಗಿವೆ. ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿರುವಾಗ ಮತ್ತೊಬ್ಬ ಕುಟುಂಬದ ಸದಸ್ಯರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ತಕ್ಷಣ ಗಾಯಗೊಂಡವರನ್ನು ನಿಜಾಮಾಬಾದ್ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ವೃದ್ಧನ ಸ್ಥಿತಿ ಗಂಭೀರವಾದ ನಂತರ ಅವರನ್ನು ಹೈದರಾಬಾದ್ನ ಆಸ್ಪತ್ರೆಗೆ ಉಲ್ಲೇಖಲಿಸಲು ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯದಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರ ಪುತ್ರನ ದೂರಿನ ಆಧಾರದ ಮೇಲೆ, ಎಲೆಕ್ಟ್ರಿಕ್ ವಾಹನ ಕಂಪನಿಯ ವಿರುದ್ಧ ಐಪಿಸಿಯ ಸೆಕ್ಷನ್ 304-ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಮತ್ತು 337 (ಜೀವಕ್ಕೆ ಅಪಾಯವನ್ನುಂಟುಮಾಡುವ ಕೃತ್ಯದಿಂದ ನೋವುಂಟುಮಾಡುವುದು) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications