ಖಾಲಿ ಕೈಯಲ್ಲಿ ಬಂದ ಪ್ರಧಾನಿ ನಮಗೆ ಏನೂ ಮಾಡಲ್ಲ: ಕೆಸಿಆರ್ ಪುತ್ರಿ

ಹೈದರಾಬಾದ್‌, ನವೆಂಬರ್ 13: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್‌ ರಾವ್‌ ಪುತ್ರಿ ಕೆ. ಕವಿತಾ ಅವರು ರಾಜ್ಯಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, "ಪ್ರಧಾನಿ ಖಾಲಿ ಕೈಯಿಂದ ಬಂದಿದ್ದಾರೆ" ಎಂದು ಹೇಳಿದ್ದಾರೆ.

ಜಗ್ತಿಯಾಲ್ ಜಿಲ್ಲೆಯ ರಾಯ್ಕಲ್‌ನಲ್ಲಿ ನಡೆದ ಸಭೆಯಲ್ಲಿ ಟಿಆರ್‌ಎಸ್ ಎಂಎಲ್‌ಸಿ ಕೆ. ಕವಿತಾ ಭಾಗವಹಿಸಿದ್ದ ಅವರು ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು. ನಮ್ಮ ಮುಖ್ಯಮಂತ್ರಿಗಳ ಪ್ರಶ್ನೆಗಳಿಗೆ ಪ್ರಧಾನಿ ಉತ್ತರಿಸಲಿಲ್ಲ ಎಂದು ಆರೋಪಿಸಿದರು.

ರಾಮಗುಂಡಂ ಫರ್ಟಿಲೈಸರ್ಸ್ ಅಂಡ್ ಕೆಮಿಕಲ್ಸ್ ಲಿಮಿಟೆಡ್ (ಆರ್‌ಎಫ್‌ಸಿಎಲ್) ಸ್ಥಾವರ ಮತ್ತು ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ಭದ್ರಾಚಲಂ ರಸ್ತೆ ಸತ್ತುಪಲ್ಲಿ ರೈಲು ಮಾರ್ಗ ಸೇರಿದಂತೆ ಸುಮಾರು 10,000 ಕೋಟಿ ರುಪಾಯಿ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದರು. ಅವರು 2016ರ ಆಗಸ್ಟ್ 7ರಂದು ರಾಮಗುಂಡಂ ಯೋಜನೆಗೆ ಶಂಕುಸ್ಥಾಪನೆ ಮಾಡಿದ್ದರು. ರಾಮಗುಂಡಂ ಸ್ಥಾವರವು ವಾರ್ಷಿಕ 12.7 ಮೆಟ್ರಿಕ್‌ ಟನ್‌ ಸ್ಥಳೀಯ ಬೇವು ಲೇಪಿತ ಯೂರಿಯಾವನ್ನು ಲಭ್ಯವಾಗುವಂತೆ ಮಾಡುತ್ತದೆ.

Empty-handed PM narendra modi wont do anything for us: KCRs daughter Kavitha

ಶನಿವಾರ ಪ್ರಧಾನಿ ಮೋದಿ ಅವರು ತೆಲಂಗಾಣಕ್ಕೆ ಭೇಟಿ ನೀಡಿದ್ದರು. ಅವರು ರಾಜ್ಯಕ್ಕೆ ಏನನ್ನೂ ತಂದಿಲ್ಲ ಮತ್ತು ಖಾಲಿ ಕೈಯಲ್ಲಿ ಬಂದಿದ್ದಾರೆ. ಅಲ್ಲದೆ ಅವರು ಅರ್ಥವಿಲ್ಲದ ಹೇಳಿಕೆಗಳನ್ನು ನೀಡುತ್ತಾರೆ ಮತ್ತು ಬಿಡುತ್ತಾರೆ. ಅವರು ನಮಗಾಗಿ ಏನನ್ನೂ ಮಾಡುವುದಿಲ್ಲ ಎಂದು ಕೆ. ಕವಿತಾ ಹೇಳಿದರು.

ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರದ ಅಭಿವೃದ್ಧಿಯ ಉಪಕ್ರಮಗಳನ್ನು ಎತ್ತಿ ಹಿಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಪಿಎಂ ಗತಿಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ದೇಶದ ದೂರದ ಪ್ರದೇಶಗಳಿಗೂ ಸಂಪರ್ಕವನ್ನು ಸುಧಾರಿಸಿದೆ ಎಂದು ಹೇಳಿದ್ದರು.

Empty-handed PM narendra modi wont do anything for us: KCRs daughter Kavitha

ತೆಲಂಗಾಣದ ಕೃಷಿ ಮತ್ತು ವ್ಯಾಪಾರದ ವಾತಾವರಣಕ್ಕೆ 10,000 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಯೋಜನೆಗಳು ಉತ್ತೇಜನ ನೀಡಲಿವೆ. ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ಜಾಗತಿಕ ತಜ್ಞರು ಒಪ್ಪುತ್ತಾರೆ. ವಿಶ್ವದ ಅತಿದೊಡ್ಡ ಆರ್ಥಿಕತೆಯಾದ ಭಾರತವು 3ನೇ ಸ್ಥಾನವನ್ನು ಪಡೆಯುವ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಹೇಳಿದರು.

ತೆಲಂಗಾಣದಲ್ಲಿ ಪ್ರಧಾನಿ ಮೋದಿ ಅವರು ಸುಮಾರು 1000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಭದ್ರಾಚಲಂ ರಸ್ತೆ-ಸತ್ತುಪಲ್ಲಿ ರೈಲು ಮಾರ್ಗವನ್ನು ದೇಶಕ್ಕೆ ಸಮರ್ಪಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು 2,200 ಕೋಟಿ ರೂ.ಗಳ ವಿವಿಧ ರಸ್ತೆ ಯೋಜನೆ ಎನ್‌ಎಚ್‌ 765 ಜಿಲ್ಲಾ ಹೆದ್ದಾರಿ ಮೇದಕ್ ಸಿದ್ದಿಪೇಟೆ ಎಲ್ಕತುರ್ಥಿ ವಿಭಾಗ ರಾಷ್ಟ್ರೀಯ ಹೆದ್ದಾರಿ 161 ಬಿಬಿಯ ಬೋಧನ್ ಬಸಾರ್ ಭೈಂಸಾ ವಿಭಾಗದ ಕಾರ್ಯಕ್ರಮದ ಸಂದರ್ಭದಲ್ಲಿ ಎನ್‌ ಎಚ್‌ 353ಯ ಸಿರೊಂಚಾದಿಂದ ಮಹದೇವಪುರ ವಿಭಾಗದ ಕಾಮಗಾರಿಗೆ ಅಡಿಗಲ್ಲು ಹಾಕಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+