Enforcement Directorate: 500 ಕೋಟಿ ರೂ. ಆಸ್ತಿ ಮುಟ್ಟುಗೋಲು ಹಾಕಿಕೊಂಡ ಇಡಿ
ನವದೆಹಲಿ, ಅಕ್ಟೋಬರ್ 29: ಮಹಾರಾಷ್ಟ್ರದ ನಾಗ್ಪುರದ ಜಾರಿ ನಿರ್ದೇಶನಾಲಯ ವಿಭಾಗದ ಬಹುದೊಡ್ಡ ಕಾರ್ಯಾಚರಣೆಯನ್ನು ನಡೆಸಿದೆ. ದೇಶದ ವಿವಿಧ ಕಡೆ ಸುಮಾರು 503.16 ಕೋಟಿ ರೂ. ಮೌಲ್ಯದ ಚರಾಸ್ತಿ ಮತ್ತು ಸ್ಥಿರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಕಾರ್ಪೊರೇಟ್ ಪವರ್ ಲಿಮಿಟೆಡ್ ಮತ್ತು ಅದರ ಪ್ರಮೋಟರ್ಸ್ ನಿರ್ದೇಶಕರಿಗೆ ಸೇರಿದ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಆಸ್ತಿ ಮುಟ್ಟುಗೋಲು ನಡೆದಿದೆ.
ಮಹಾರಾಷ್ಟ್ರ, ಆಂಧ್ರ ಪ್ರದೇಶ, ಪಶ್ಚಿಮ ಬಂಗಾಳ, ಬಿಹಾರ, ಜಾರ್ಖಂಡ್ ರಾಜ್ಯಗಳಲ್ಲಿ ಕಾರ್ಯಾಚರಣೆಯನ್ನು ನಡೆಸಲಾಗಿದ್ದು 503.16 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ನಿರ್ದೇಶಕರಾದ ಮನೋಜ್ ಜೈಸ್ವಾಲ್, ಅಭಿಜಿತ್ ಜೈಸ್ವಾಲ್, ಅಭಿಷೇಕ್ ಜೈಸ್ವಾಲ್ ಮತ್ತು ಇತರರಿಗೆ ಸೇರಿದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

2002ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅನ್ವಯ ಕಾರ್ಯಾಚಣೆ ನಡೆಸಿ ಅಕ್ಟೋಬರ್ 24ರಂದು ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಅಕ್ಟೋಬರ್ 28ರಂದು ಜಾರಿ ನಿರ್ದೇಶನಾಲಯ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿಯನ್ನು ನೀಡಿದೆ.
ಯೂನಿಯನ್ ಬ್ಯಾಂಕ್ ಕಾರ್ಪೊರೇಟ್ ಪವರ್ ಲಿಮಿಟೆಡ್ ಮತ್ತು ಅದರ ಪ್ರಮೋಟರ್ಸ್ ನಿರ್ದೇಶಕರಿಗೆ ಸೇರಿದ ಬ್ಯಾಂಕ್ ವಂಚನೆ ಪ್ರಕರಣದ ಕುರಿತು ಸಿಬಿಐಗೆ ದೂರು ನೀಡಿತ್ತು. ಈ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ನಡೆದ ಕಾರಣಕ್ಕೆ ಜಾರಿ ನಿರ್ದೇಶನಾಲಯ ಸಹ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಕೈಗೊಂಡಿತ್ತು.
4 ಸಾವಿರ ಕೋಟಿ ರೂ. ವಂಚನೆ: ಸುಮಾರು 4 ಸಾವಿರ ಕೋಟಿ ರೂ. ಮೊತ್ತದ ಬ್ಯಾಂಕ್ ವಂಚನೆ ಪ್ರಕರಣವಿದು ಎಂದು ಅಂದಾಜಿಸಲಾಗಿದೆ. ಜಾರಿ ನಿರ್ದೇಶನಾಲಯ ಕಾರ್ಪೊರೇಟ್ ಪವರ್ ಲಿಮಿಟೆಡ್ನ ಕುರಿತು ತನಿಖೆಯನ್ನು ಕೈಗೊಂಡಿತ್ತು. ಆಗಸ್ಟ್ನಲ್ಲಿ ಆರೋಪಿಗಳ ಮನೆಗಳ ಮೇಲೆ ಇಡಿ ದಾಳಿ ನಡೆಸಿತ್ತು. 223 ಕೋಟಿ ರೂ. ಮೌಲ್ಯದ ಶೇರು, ಬಾಂಡ್ಗಳನ್ನು ವಶಕ್ಕೆ ಪಡೆದುಕೊಂಡಿತ್ತು.
ದಾಳಿಯ ವೇಳೆ 56 ಲಕ್ಷ ರೂ. ನಗದು ಹಣ ಪತ್ತೆಯಾಗಿತ್ತು. ಈ ಪ್ರಕರಣದಲ್ಲಿ ದೂರು ನೀಡಿದ್ದ ಯೂನಿಯನ್ ಬ್ಯಾಂಕ್ ಆರೋಪಿಗಳಿಂದ ಬ್ಯಾಂಕ್ಗೆ 11,000 ಕೋಟಿ ರೂ. ಬಾಕಿ ಬರಬೇಕಿದೆ ಎಂದು ಹೇಳಿತ್ತು. ಆಸ್ತಿಗಳನ್ನು ಅಡವಿಟ್ಟು ಆರೋಪಿಗಳು ಬ್ಯಾಂಕ್ನಿಂದ ಸಾಲವನ್ನು ಪಡೆದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.
ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡ ಆಸ್ತಿಯಲ್ಲಿ ಬ್ಯಾಂಕ್ ಠೇವಣಿಗಳು, ಮ್ಯೂಚುವಲ್ ಫಂಡ್ ಹೂಡಿಕೆಗಳು, ಷೇರುಗಳು, ವಾಣಿಜ್ಯ ಸಂಕೀರ್ಣಗಳ ಆಸ್ತಿ, ಹಲವು ಭೂಮಿಯ ದಾಖಲೆಗಳು ಸೇರಿವೆ. ಈ ಎಲ್ಲಾ ಹೂಡಿಕೆಗಳು ಮನೋಜ್ ಜೈಸ್ವಾಲ್ ಮತ್ತು ಅವರ ಕುಟುಂಬಕ್ಕೆ ಸೇರಿದವು.
ಸಿಬಿಐ ಕಾರ್ಪೊರೇಟ್ ಪವರ್ ಲಿಮಿಟೆಡ್ ಮತ್ತು ಅದರ ಪ್ರಮೋಟರ್ಸ್ ನಿರ್ದೇಶಕರು ಒಳಸಂಚು ನಡೆಸಿದ್ದಾರೆ ಎಂದು ಆರೋಪಿಸಿ ಎಫ್ಐಆರ್ ದಾಖಲು ಮಾಡಿತ್ತು. ಸಹಿಯನ್ನು ನಕಲಿ ಮಾಡುವುದು ಮತ್ತು ವಂಚನೆಯನ್ನು ಮಾಡಲಾಗಿದೆ ಎಂದು ತನಿಖೆ ವೇಳೆ ಪತ್ತೆಯಾಗಿತ್ತು.
ಯೂನಿಯನ್ ಬ್ಯಾಂಕ್ನಲ್ಲಿ ಸಾಲವನ್ನು ಪಡೆಯುವಾಗ ಪೋರ್ಜರಿ ಮಾಡಿದ ದಾಖಲೆಗಳನ್ನು ನೀಡಲಾಗಿದೆ. ಸುಮಾರು 4037 ಕೋಟಿ ಸಾಲವನ್ನು ಪಡೆಯಲಾಗಿದ್ದು, ಅದು ಬಡ್ಡಿ ಎಲ್ಲಾ ಸೇರಿ ಈಗ 11,379 ಕೋಟಿ ರೂ. ಆಗಿದೆ ಎಂದು ದೂರಿನಲ್ಲಿ ಬ್ಯಾಂಕ್ ವಿವರಣೆ ನೀಡಿತ್ತು.
ವಂಚನೆ ಮಾಡುವ ಉದ್ದೇಶಕ್ಕಾಗಿಯೇ ಸುಮಾರು 250 ಶೆಲ್ ಕಂಪನಿಗಳು, 20ಕ್ಕೂ ಅಧಿಕ ಚಾರಿಟಬಲ್ ಟ್ರಸ್ಟ್ಗಳನ್ನು ತೋರಿಸಲಾಗಿತ್ತು. ಈ ಎಲ್ಲಾ ಕಂಪನಿಗಳು ಬೋಗಸ್ ಎಂಬುದು ತನಿಖೆ ವೇಳೆ ತಿಳಿದುಬಂದಿತ್ತು. ಹೊಸ ಸಾಲಕ್ಕಾಗಿ ಪದೇ ಪದೇ ಅರ್ಜಿ ಸಲ್ಲಿಸುತ್ತಿದ್ದರಿಂದ ಬ್ಯಾಂಕ್ ಅನುಮಾನಗೊಂಡು ಸಿಬಿಐಗೆ ದೂರು ಕೊಟ್ಟಿತ್ತು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications