ಪಿ ಚಿದಂಬರಂ ಪುತ್ರ ಕಾರ್ತಿ ಕಚೇರಿ ಮೇಲೆ 'ಇಡಿ' ದಾಳಿ
ಬೆಂಗಳೂರು, ಡಿ.01: ಕೇಂದ್ರದ ಮಾಜಿ ಸಚಿವ ಪಿ ಚಿದಂಬರಂ ಅವರ ಪುತ್ರ ಕಾರ್ತಿ ಅವರ ಮನೆ ಕಚೇರಿ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ ಹಠಾತ್ ದಾಳಿ ನಡೆಸಿದ್ದಾರೆ.
ಏರ್ ಸೆಲ್ ಹಾಗೂ ಮ್ಯಾಕ್ಸಿಸ್ ನಡುವಿನ ಪರಭಾರೆ ಒಪ್ಪಂದದಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆಸಲಾಗಿದೆ. ಕಾರ್ತಿ ಚಿದಂಬರಂಗೆ ಸಂಬಂಧಿಸಿದ ಅಡ್ವಾನ್ಟೇಜ್ ಸ್ಟ್ರಾಟೆಜಿಕ್ ಕನ್ಸಲ್ಟಿಂಗ್ ಸಂಸ್ಥೆಯ ಇಬ್ಬರು ನಿರ್ದೇಶಕರನ್ನು ಕಳೆದ ಆಗಸ್ಟ್ ನಲ್ಲಿ ವಿಚಾರಣೆಗೊಳಪಡಿಸಲಾಗಿತ್ತು. [ಮಾರನ್ ಪರಮಾಪ್ತರಿಗೆ ಸಿಬಿಐ ಹೊಡೆತ]

ಪಿ ಚಿದಂಬರಂ ಅವರು 2006ರಲ್ಲಿ ವಿತ್ತ ಸಚಿವರಾಗಿದ್ದಾಗ ಏರ್ ಸೆಲ್ ನಲ್ಲಿ ಮ್ಯಾಕ್ಸಿಸ್ ಬಂಡವಾಳ ಹೂಡಿಕೆಗೆ ಅನುಮತಿ ನೀಡಿದ್ದರು. 2004 ಹಾಗೂ 2007ರಲ್ಲಿ ಕೇಂದ್ರ ಟೆಲಿಕಾಂ ಸಚಿವರಾಗಿದ್ದ ದಯಾನಿಧಿ ಮಾರನ್ ಅವರು ಏರ್ ಸೆಲ್ ಗೆ ತರಂಗ ಗುಚ್ಛ ಗುತ್ತಿಗೆ ಸಿಗುವಂತೆ ಮಾಡಿದ್ದರು. ಇದಕ್ಕೆ ಬದಲಾಗಿ ಮಲೇಷಿಯಾ ಮೂಲದ ಮ್ಯಾಕ್ಸಿಸ್ ಕಮ್ಯೂನಿಕೇಷನ್ ಸಂಸ್ಥೆ ಸನ್ ನೆಟ್ವರ್ಕ್ ಮಾರಲು ಮಾರನ್ ಮುಂದಾಗಿದ್ದರು.
My family and I are quite prepared to face the "malicious onslaught" launched by government: Chidambaram.
— Press Trust of India (@PTI_News) December 1, 2015 ಚೆನ್ನೈನ ತಮ್ಮ ನಿವಾಸಕ್ಕೆ ಅಕ್ರಮವಾಗಿ 300 ದೂರವಾಣಿ ಸಂಪರ್ಕ ಪಡೆದು ನಂತರ ಸೋದರ ಕಲಾನಿಧಿ ಮಾರನ್ ಒಡೆತನದ ಸನ್ ನೆಟ್ವರ್ಕ್ ಕಚೇರಿಗೆ ನೀಡಲಾಗಿತ್ತು ಎಂಬ ಆರೋಪ ಮಾರನ್ ಸೋದರರು ಹೊತ್ತಿದ್ದರು.
ಇದರ ಜೊತೆಗೆ ಏರ್ ಸೆಲ್ ಹಾಗೂ ಮಾಕ್ಸಿಸ್ ಒಪ್ಪಂದ, 2ಜಿ ಹಗರಣ, ಟೆಲಿಕಾಂ ನಿಯಮ ಉಲ್ಲಂಘನೆ ಮುಂತಾದ ಆರೋಪಗಳು ಮಾರನ್ ವಿರುದ್ಧ ಕೇಳಿ ಬಂದಿದೆ. ಏರ್ ಸೆಲ್ ಮ್ಯಾಕ್ಸಿಸ್ ಒಪ್ಪಂದದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ದಯಾನಿಧಿ ಮಾರನ್ ಅವರ 742 ಕೋಟಿ ರು ಮೌಲ್ಯದ ಆಸ್ತಿ ಜಪ್ತಿ ಮಾಡಿಕೊಂಡಿದ್ದರು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications