4 ಕೋಟಿ ಸದಸ್ಯರಿಗೆ ಶುಭ ಸುದ್ದಿ ಕೊಟ್ಟ ಸಚಿವ ಬಂಡಾರು!
ಇನ್ಮುಂದೆ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಇಪಿಎಫ್ ಕ್ಲೇಮ್ ಗಳನ್ನು UMANG ಅಪ್ಲಿಕೇಷನ್ ಮೂಲಕ ಪಡೆದುಕೊಳ್ಳಬಹುದು ಎಂದು ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಹೇಳಿದ್ದಾರೆ.
ನವದೆಹಲಿ, ಏಪ್ರಿಲ್ 10: ಇಪಿಎಫ್ (ಎಂಪ್ಲೋಯಿಸ್ ಪ್ರಾವಿಡೆಂಟ್ ಫಂಡ್) ಯೋಜನೆಗೆ ಸೇರ್ಪಡೆಗೊಳ್ಳಲು ಸಂಬಳ ಮಿತಿಯನ್ನು 21,000 ರೂಪಾಯಿಗೆ ಹೆಚ್ಚಿಸಿದ ಬಳಿಕ ಮತ್ತೊಂದು ಶುಭ ಸುದ್ದಿಯನ್ನು ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ನೀಡಿದ್ದಾರೆ.
ಇನ್ಮುಂದೆ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಇಪಿಎಫ್ ಕ್ಲೇಮ್ ಗಳನ್ನು UMANG ಅಪ್ಲಿಕೇಷನ್ ಮೂಲಕ ಪಡೆದುಕೊಳ್ಳಬಹುದು ಎಂದು ಹೇಳಿದ್ದಾರೆ.
ಆನ್ ಲೈನ್ ಕ್ಲೇಮ್ ಗಳ ಜತೆಗೆ ಮೊಬೈಲ್ ಅಪ್ಲಿಕೇಷನ್ ಜೋಡಣೆ ಮಾಡಲಾಗುತ್ತಿದ್ದು, Unified Mobile App for new-age governance, (UMANG) App ಮೂಲಕ ಆನ್ ಲೈನ್ ನಲ್ಲೇ ಕ್ಲೇಮ್ ಪಡೆದುಕೊಳ್ಳಬಹುದು.[ಪಿಎಫ್ ಪಿಂಚಣಿ ಪಡೆಯಲು ಆಧಾರ್ ಕಾರ್ಡ್ ಬೇಕಿಲ್ಲ!]

ಮಾರ್ಚ್ 31, 2016ರ ಅನ್ವಯ 3.76 ಕೋಟಿ ರು ಸದಸ್ಯರ ಪೈಕಿ 1.68 ಕೋಟಿ ಸದಸ್ಯರು ಮಾತ್ರ UAN ಜತೆಗೆ ಆಧಾರ್ ಲಿಂಕ್ ಮಾಡಿದ್ದಾರೆ. ಬ್ಯಾಂಕ್ ಜತೆ ಆಧಾರ್ ಜೋಡಣೆ ಈಗ ಕಡ್ಡಾಯಗೊಳಿಸಲಾಗಿದೆ.
ಸಂಬಳ ಮಿತಿ ಏರಿಕೆ: ಈಗ ಸಂಬಳ ಮಿತಿ 15,000 ರೂಪಾಯಿ ಆಗಿದೆ. ಇಪಿಎಫ್ಒ ಮತ್ತು ಕೇಂದ್ರ ಟ್ರಸ್ಟ್ ಬೋರ್ಡ್ನ ಸಭೆ ಏಪ್ರಿಲ್ 12ಕ್ಕೆ ನಡೆಯಲಿದ್ದು, ಈ ಸಭೆಯಲ್ಲಿ ಸಂಬಳ ಮಿತಿಯನ್ನು ಹೆಚ್ಚಿಸಲು ಚರ್ಚಿಸಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.[ಭವಿಷ್ಯ ನಿಧಿ (EPFO) ಬಡ್ಡಿದರ ಇಳಿಕೆಗೆ ವಿತ್ತ ಸಚಿವಾಲಯ ಸಮ್ಮತಿ]
ಮಿತಿಯನ್ನು ಹೆಚ್ಚಿಸುವುದರಿಂದ ಖಾಸಗಿ, ಸಾರ್ವಜನಿಕ ಕ್ಷೇತ್ರದಲ್ಲಿ ದುಡಿಯುವ ಲಕ್ಷಾಂತರ ಉದ್ಯೋಗಿಗಳಿಗೆ ಉಪಯುಕ್ತವಾಗಲಿದೆ. 25,000 ರೂಪಾಯಿವರೆಗೆ ಪಿಎಫ್ಗೆ ಸೇರಿಸಬೇಕೆಂದು ಇಪಿಎಫ್ ಒ(ಎಂಪ್ಲಾಯಿಸ್ ಪ್ರಾವಿಡೆಂಟ್ ಫಂಡ್ ಆರ್ಗನೈಝೇಶನ್) ಕೇಂದ್ರ ಸರ್ಕಾರವನ್ನು ಆಗ್ರಹಿಸಿತ್ತು. ಆದರೆ, ಇದನ್ನು ಕಾರ್ಮಿಕ ಸಚಿವಾಲಯ 21ಸಾವಿರ ರೂಪಾಯಿಗೆ ಮಿತಿಗೊಳಿಸಿತು.(ಪಿಟಿಐ)
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications