ಇಪಿಎಫ್ಒ ಸಭೆ: ಉದ್ಯೋಗಿಗಳ ಭವಿಷ್ಯ ನಿಧಿ ಠೇವಣಿ ಮೇಲೆ 8.15% ಬಡ್ಡಿ ದರ ನಿಗದಿ
ನವದೆಹಲಿ, ಮಾರ್ಚ್. 28: ಉದ್ಯೋಗಿಗಳ ಭವಿಷ್ಯ ನಿಧಿ ಖಾತೆಯ ಬಡ್ಡಿ ದರವನ್ನು ನಿಗದಿಪಡಿಸುವ ನಿವೃತ್ತಿ ನಿಧಿ ಸಂಸ್ಥೆ ಇಪಿಎಫ್ಒ (ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ) 2022-23ರ ಇಪಿಎಫ್ ಠೇವಣಿಗಳ ಮೇಲೆ ಶೇಕಡಾ 8.15 ಬಡ್ಡಿ ದರವನ್ನು ನಿಗದಿಪಡಿಸಿದೆ.
ಮಾರ್ಚ್ 2022 ರಲ್ಲಿ, ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ತನ್ನ ಸುಮಾರು ಆರು ಕೋಟಿ ಸಕ್ರಿಯ ಚಂದಾದಾರರಿಗೆ 2020-21 ರಲ್ಲಿ ಶೇಕಡಾ 8.5 ರಷ್ಟಿದ್ದ ಬಡ್ಡಿ ದರವನ್ನು 2021-22 ರ ರಲ್ಲಿ ನಾಲ್ಕು ದಶಕಗಳ ಕಡಿಮೆ ಅಂದರೆ ಶೇಕಡಾ 8.1 ಕ್ಕೆ ಇಳಿಸಿತ್ತು. ಆದರೆ, ಈ ವರ್ಷದ ಸಭೆಯ ಬಳಿಕ ಹಣಕಾಸು ವರ್ಷ 2022-23ಕ್ಕೆ ಪಿಎಫ್ ಬಡ್ಡಿದರವನ್ನು ಶೇಕಡಾ 8.15 ಕ್ಕೆ ನಿಗದಿಪಡಿಸಲಾಗಿದೆ.

1977 - 78ರಲ್ಲಿ ಇಪಿಎಫ್ ಬಡ್ಡಿ ದರ ಶೇ 8ರಷ್ಟಿದ್ದ ನಂತರ 2021 - 22 ರ ಬಡ್ಡಿ ದರ ಪರಿಷ್ಕರಣೆ ಅತ್ಯಂತ ಕಡಿಮೆ ಎಂದು ಹೇಳಲಾಗಿದೆ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಬೋರ್ಡ್ ಸಭೆ ಮಾರ್ಚ್ 27 ಮತ್ತು 28ರಂದು ನಡೆದಿದ್ದು ಸಭೆಯಲ್ಲಿ ಬಡ್ಡಿದರವನ್ನು ಪರಿಷ್ಕರಣೆ ಮಾಡಲಾಗಿದೆ.
"ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯ ಅಪೆಕ್ಸ್ ನಿರ್ಧಾರ - ನಿರ್ಮಾಣ ಸಂಸ್ಥೆ ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟಿಗಳು (CBT) ಮಂಗಳವಾರ ನಡೆದ ತನ್ನ ಸಭೆಯಲ್ಲಿ 2022-23 ಕ್ಕೆ ಇಪಿಎಫ್ನಲ್ಲಿ ಶೇಕಡಾ 8.15 ಬಡ್ಡಿದರವನ್ನು ಒದಗಿಸಲು ನಿರ್ಧರಿಸಿದೆ" ಎಂದು ಮೂಲವೊಂದು ತಿಳಿಸಿದೆ.
2020 - 21ರ ಪಿಎಫ್ ಠೇವಣಿಗಳ ಮೇಲಿನ 8.5 ಶೇಕಡಾ ಬಡ್ಡಿ ದರವನ್ನು ಸೆಂಟ್ರಲ್ ಬೋರ್ಡ್ ಆಫ್ ಟ್ರಸ್ಟ್ ಮಾರ್ಚ್ 2021 ರಲ್ಲಿ ನಿರ್ಧರಿಸಿದೆ. ಸಿಬಿಟಿಯ ನಿರ್ಧಾರದ ನಂತರ, 2022-23 ರ ಉದ್ಯೋಗಿಗಳ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಒಪ್ಪಿಗೆಗಾಗಿ ಹಣಕಾಸು ಸಚಿವಾಲಯಕ್ಕೆ ಕಳುಹಿಸಲಾಗುತ್ತದೆ. ಸರ್ಕಾರದ ಅನುಮೋದನೆಯ ನಂತರ, 2022-23 ರ ಮೇಲಿನ ಬಡ್ಡಿ ದರವನ್ನು ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯ ಆರು ಕೋಟಿಗೂ ಅಧಿಕ ಸಕ್ರಿಯ ಚಂದಾದಾರರ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.

ಹಣಕಾಸು ಸಚಿವಾಲಯದ ಮೂಲಕ ಸರ್ಕಾರವು ಅನುಮೋದಿಸಿದ ನಂತರವೇ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ಬಡ್ಡಿದರವನ್ನು ಒದಗಿಸುತ್ತದೆ. ಮಾರ್ಚ್ 2020 ರಲ್ಲಿ, ಇಪಿಎಫ್ಒ ಭವಿಷ್ಯ ನಿಧಿ ಠೇವಣಿಗಳ ಮೇಲಿನ ಬಡ್ಡಿ ದರವನ್ನು 2018 - 19ಕ್ಕೆ ಒದಗಿಸಿದ 8.65 ಪ್ರತಿಶತದಿಂದ 2019 - 20ಕ್ಕೆ ಏಳು ವರ್ಷಗಳ ಕನಿಷ್ಠ 8.5 ಪ್ರತಿಶತಕ್ಕೆ ಇಳಿಸಿದೆ.
ಇಪಿಎಫ್ಒ ತನ್ನ ಚಂದಾದಾರರಿಗೆ 2016 - 17ರಲ್ಲಿ ಶೇ 8.65 ಮತ್ತು 2017 - 18ರಲ್ಲಿ ಶೇ 8.55 ಬಡ್ಡಿ ದರವನ್ನು ಒದಗಿಸಿದೆ. 2015 - 16ರಲ್ಲಿ ಬಡ್ಡಿ ದರವು ಶೇಕಡ 8.8 ರಷ್ಟಿತ್ತು. ನಿವೃತ್ತಿ ನಿಧಿ ಸಂಸ್ಥೆಯು 2013 - 14 ಮತ್ತು 2014 - 15 ರಲ್ಲಿ 8.75 ಪರ್ಸೆಂಟ್ ಬಡ್ಡಿದರವನ್ನು ನೀಡಿದೆ. ಇದು 2012-13 ರ 8.5 ಶೇಕಡಾಕ್ಕಿಂತ ಹೆಚ್ಚಾಗಿದೆ. 2011 - 12ರಲ್ಲಿ ಬಡ್ಡಿ ದರ ಶೇ.8.25ರಷ್ಟಿತ್ತು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications