ಮೋದಿ ಹುಟ್ಟುಹಬ್ಬದ ದಿನ 6 ಕೋಟಿ ನೌಕರರಿಗೆ ಕೇಂದ್ರದಿಂದ ಶುಭ ಸುದ್ದಿ
ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಆದಾಯ ತೆರಿಗೆ ಮೇಲಿನ ವಿನಾಯಿತಿಯ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಮಧ್ಯಮ ವರ್ಗದ ನೌಕರರಿಗೆ ಖುಷಿ ನೀಡಿದ್ದ ಕೇಂದ್ರ ಸರ್ಕಾರ, ಮತ್ತೊಂದು ಸಿಹಿ ಸುದ್ದಿ ನೀಡಿದೆ. ಪ್ರಧಾನಿ ಮೋದಿ ಹುಟ್ಟುಹಬ್ಬದ ದಿನದಂದು ನೌಕರರ ಭವಿಷ್ಯ ನಿಧಿಯ (ಇಪಿಎಫ್) ಮೇಲಿನ ಬಡ್ಡಿದರವನ್ನು ಏರಿಕೆ ಮಾಡಲಾಗಿದೆ. ಇಪಿಎಫ್ ಬಡ್ಡಿದರವನ್ನು ಶೇ 0.10ರಷ್ಟು ಹೆಚ್ಚಳ ಮಾಡಿರುವುದನ್ನು ಕೇಂದ್ರ ಕಾರ್ಮಿಕ ಖಾತೆ ಸಚಿವ ಸಂತೋಷ್ ಗಾಂಗ್ವರ್ ಖಚಿತ ಪಡಿಸಿದ್ದಾರೆ.
2016ರ ಬಳಿಕ ಇದೇ ಮೊದಲ ಬಾರಿಗೆ ನೌಕರರ ಭವಿಷ್ಯ ನಿಧಿಯ ಬಡ್ಡಿದರದಲ್ಲಿ ಏರಿಕೆ ಮಾಡಲಾಗಿದೆ. ಇದುವರೆಗೂ ಶೇ 8.55ರಷ್ಟಿದ್ದ ಇಪಿಎಫ್ ಬಡ್ಡಿದರವು ಶೇ 8.65ಕ್ಕೆ ಹೆಚ್ಚಳವಾಗಲಿದ್ದು, 2018-19ನೇ ಸಾಲಿನಿಂದಲೇ ಜಾರಿಯಾಗಲಿದೆ ಎಂದು ವಿತ್ತ ಸಚಿವಾಲಯ ಪ್ರಕಟವಾಗಿದೆ.
ಬಡ್ಡಿದರದಲ್ಲಿ 10 ಮೂಲಾಂಶ ಏರಿಕೆ ಈ ನಿರ್ಧಾರದಿಂದ ಆರು ಕೋಟಿ ಗ್ರಾಹಕರಿಗೆ ಅನುಕೂಲವಾಗಲಿದ್ದು, ಕೇಂದ್ರ ಸರ್ಕಾರಕ್ಕೆ 151 ಕೋಟಿ ರೂಪಾಯಿ ಹೆಚ್ಚುವರಿ ಹೊರೆಯಾಗಲಿದೆ.

ಕಾರ್ಮಿಕ ಸಚಿವರ ನೇತೃತ್ವದ ಕೇಂದ್ರ ಟ್ರಸ್ಟಿಗಳ ಮಂಡಳಿಯು ಪ್ರಸಕ್ತ ಹಣಕಾಸು ವರ್ಷದ ಇಪಿಎಫ್ ಬಡ್ಡಿದರದ ನಿರ್ಧಾರ ತೆಗೆದುಕೊಂಡು ವಿತ್ತ ಸಚಿವಾಲಯಕ್ಕೆ ಕಳಿಸಿದ್ದರು. ಆದರೆ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿರಲಿಲ್ಲ
ಪಿಎಫ್ ಲೆಕ್ಕಾಚಾರ: ಮೂಲ ವೇತನ ಮತ್ತು ತುಟ್ಟಿಭತ್ಯೆ(ಡಿಎ) ಒಟ್ಟು ಮೊತ್ತದ ಶೇ 12ರಷ್ಟು ಪರಿಗಣಿಸಲಾಗುತ್ತದೆ. ಈ ಪೈಕಿ ಉದ್ಯೋಗದಾತರ ವಂತಿಗೆ ಶೇ 3.67ರಷ್ಟು ಪಿಎಫ್ ಗೆ ಹಾಗೂ ಶೇ 8.33ರಷ್ಟು ಪಿಎಫ್ ಪಿಂಚಣಿ ನಿಧಿಗೆ ಹಾಗೂ ಶೇ 0.5% ಉದ್ಯೋಗಿಗಳ ವಿಮಾ ಯೋಜನೆಗೆ ಸೇರಲಿದೆ. ನೌಕರನ ಸಂಬಳ 15 ಸಾವಿರಕ್ಕಿಂತ ಕಡಿಮೆಯಿದ್ರೆ ಆತನ ಸಂಬಳದಲ್ಲಿ ಪ್ರತಿ ತಿಂಗಳು ಶೇಕಡಾ 12ರಷ್ಟು ಭಾಗ ಪಿಎಫ್ ಖಾತೆ ಸೇರುತ್ತದೆ. ಕಂಪನಿ ಶೇಕಡಾ 8.33ರಷ್ಟು ಪಿಂಚಣಿ ಯೋಜನೆಗೆ ಹಾಗೂ ಶೇಕಡಾ 3.67ರಷ್ಟು ಇಪಿಎಫ್ ಗೆ ಹಣ ನೀಡುತ್ತದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications