ಪಿಎಫ್ ವಿಥ್ ಡ್ರಾ ನಿಯಮಕ್ಕೆ ಜುಲೈ 31ರ ತನಕ ಬ್ರೇಕ್
ನವದೆಹಲಿ, ಏಪ್ರಿಲ್ 19: ಕಾರ್ಮಿಕರ ಭವಿಷ್ಯ ನಿಧಿ(ಇಪಿಎಫ್) ವಿಥ್ ಡ್ರಾ ನಿಯಮಗಳಿಗೆ ಜುಲೈ 31ರ ತನಕ ತಡೆ ಹಿಡಿಯಲಾಗಿದೆ ಎಂದು ಕೇಂದ್ರ ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಅವರು ಮಂಗಳವಾರ ಸಂಜೆ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಕಾರ್ಮಿಕ ಸಂಘಟನೆಗಳಿಂದ ತೀವ್ರ ಹೋರಾಟ, ಪ್ರತಿಭಟನೆ, ಹಿಂಸಾಚಾರದ ಹಿನ್ನಲೆಯಲ್ಲಿ ಸರ್ಕಾರ ಈ ಕ್ರಮ ಕೈಗೊಂಡಿದೆ. [ಗಾರ್ಮೆಂಟ್ಸ್ ಪ್ರತಿಭಟನೆ: ಇಡೀ ದಿನದ ಅಪ್ಡೇಟ್]

ಆದರೆ, ಪಿಎಫ್ ವಿಥ್ ಡ್ರಾ ಹಿಂಪಡೆಯುವುದರಲ್ಲಿ ಮೂಡಿದ್ದ ಗೊಂದಲ ಮುಂದುವರೆದಿದ್ದು, ಸದ್ಯಕ್ಕೆ ಬೀಸುವ ದೊಣ್ಣೆ ಏಟು ತಪ್ಪಿಸಿಕೊಳ್ಳಲು ಸರ್ಕಾರ ಕಾರ್ಮಿಕರ ಕೋಪ ಶಮನಕ್ಕೆ ಮುಂದಾಗಿದೆ. ಪಿಎಫ್ ನಿಯಮಗಳ ತಿದ್ದುಪಡಿಯಲ್ಲಿನ ಉದ್ದೇಶಿತ ಬದಲಾವಣೆಗಳಿಗೆ ಮೂರು ತಿಂಗಳುಗಳ ಕಾಲ ತಡೆ ಹಿಡಿಯಲಾಗಿದೆ. [ಪಿಎಫ್ ನೀತಿ ಖಂಡನೆ, ಪ್ರತಿಭಟನೆ, ಹೊಸೂರು ರಸ್ತೆ ಟ್ರೆಂಡಿಂಗ್]
ಕಾರ್ಮಿಕರ ಭವಿಷ್ಯ ನಿಧಿ ಕಾಯ್ದೆಗೆ ತಿದ್ದುಪಡಿ ಮಾಡಿದ್ದು, ಕಾರ್ಖಾನೆ ಮಾಲೀಕರು ಹಾಗೂ ಕಾರ್ಮಿಕರು ಮಾಸಿಕ ಕಂತುಗಳಲ್ಲಿ ಪಾವತಿಸಿದ ಪಿಎಫ್ ಹಣವನ್ನು 58 ವರ್ಷಗಳ ನಂತರ (ನಿವೃತ್ತಿ ನಂತರ) ಹಿಂಪಡೆಯಬೇಕು ಎಂದು ಹೇಳಲಾಗಿತ್ತು.
ಆದರೆ, ತೀವ್ರ ವಿರೋಧದ ನಂತರ ಆರೋಗ್ಯ, ವಸತಿ ವಿಷಯಕ್ಕಾಗಿ, ಮಕ್ಕಳ ಮದುವೆ, ವೃತ್ತಿಪರ ಕೋರ್ಸ್ ಸೇರಲು ಹಣ ಅಗತ್ಯ ಬಿದ್ದಾಗ ಬೇಕಾದರೆ ಮುಂಚಿತವಾಗಿ ಹಿಂಪಡೆಯುವ ಅವಕಾಶ ನೀಡಲಾಗುವುದು ಎಂದು ಕಾರ್ಮಿಕ ಸಚಿವ ಬಂಡಾರು ದತ್ತಾತ್ರೇಯ ಹೇಳಿದ್ದಾರೆ.
ಮುಂದೇನು?: ಜುಲೈ 31 ರ ತನಕ ಇಪಿಎಫ್ ಒ ಚಂದಾದಾರರಾಗಿದ್ದು ಯಾವುದೇ ಉದ್ಯೋಗದಲ್ಲಿ(2 ತಿಂಗಳುಗಳ ಕಾಲ)ಲ್ಲದವರು ಅಂತಿಮವಾದ ಸೆಟ್ಲ್ ಮೆಂಟ್ ಮಾಡಿಕೊಳ್ಳಲು ಅವಕಾಶವಿದೆ. ಹೊಸ ನಿಯಮದಲ್ಲಿ ಏನೇ ತಿದ್ದುಪಡಿಯಾದರೂ ಅದು ಆಗಸ್ಟ್ 1, 2016ರಿಂದ ಜಾರಿಗೆ ಬರಲಿದೆ. ಇಪಿಎಫ್ ಒ ಕಾರ್ಮಿಕ ಖಾತೆ ಇನ್ನೊಂದಿಷ್ಟು ಕಾಲ ಸಭೆ, ಚರ್ಚೆ ನಡೆಸಿ ಕಾರ್ಮಿಕರ 'ಭವಿಷ್ಯ' ನಿಧಿಗೆ ಹೊಸ ಭಾಷ್ಯ ಬರೆಯಲಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications