ಭಾರತದ ನಿಕೋಬಾರ್ ದ್ವೀಪದಲ್ಲಿಯೂ ನಡುಗಿದ ಭೂಮಿ
ನಿಕೋಬಾರ್, ಆಗಸ್ಟ್ 6: ನಿಕೋಬಾರ್ ದ್ವೀಪದಲ್ಲಿ ಸೋಮವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ರಿಕ್ಟರ್ ಮಾಪನದಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿದೆ.
ಸುನಾಮಿಯ ಬಗ್ಗೆ ಯಾವುದೇ ಎಚ್ಚರಿಕೆ ನೀಡಲಾಗಿಲ್ಲ. ಅಂಡಮಾನ್ ದ್ವೀಪವು ಭೂಕಂಪದ ಕೇಂದ್ರವಾಗಿದ್ದು, ಭೂಮಿಯ ಸುಮಾರು ಹತ್ತು ಕಿ.ಮೀ. ಒಳಭಾಗದಲ್ಲಿ ಕಂಪನ ಉಂಟಾಗಿದೆ.
ಇದುವರೆಗೂ ಯಾವುದೇ ಸಾವುನೋವು ವರದಿಯಾಗಿಲ್ಲ. ಇಂಡೋನೇಷ್ಯಾದ ಲಂಬೋಕ್ ದ್ವೀಪದಲ್ಲಿ ಭಾರಿ ಪ್ರಮಾಣದ ಭೂಕಂಪ ಸಂಭವಿಸಿದ ಕೆಲವೇ ಗಂಟೆಗಳಲ್ಲಿ ನಿಕೋಬಾರ್ನಲ್ಲಿಯೂ ಭೂಮಿ ಕಂಪಿಸಿದೆ.

ಇಂಡೋನೇಷ್ಯಾದ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 91ಕ್ಕೆ ಏರಿದೆ. ಮೃತರೆಲ್ಲರೂ ಇಂಡೋನೇಷ್ಯಾದ ಪ್ರಜೆಗಳಾಗಿದ್ದು, ವಿದೇಶಿಗರು ಸುರಕ್ಷಿತವಾಗಿದ್ದಾರೆ ಎನ್ನಲಾಗಿದೆ. 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಸುಮಾರು 20 ಸಾವಿರ ಮಂದಿಯನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. ಗಿಲಿ ಟ್ರವಾಂಗಾನ್ ದ್ವೀಪದ ಬೀಚ್ನಲ್ಲಿರುವ ವಿದೇಶಿಗರನ್ನು ಮುಂಜಾಗ್ರತೆಯ ಕ್ರಮವಾಗಿ ಬೇರೆಡೆಗೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿದೆ.
Earthquake of Magnitude:5.3, Occurred on:06-08-2018, 10:05:49 IST, Lat:7.5 N & Long: 91.8 E, Depth: 10 Km, Region:Nicobar Islands Region pic.twitter.com/ol8v4rR6tD
— India Met. Dept. (@Indiametdept) 6 August 2018
ಲಂಬೋಕ್ನಲ್ಲಿ ತೀವ್ರ ಪ್ರಮಾಣದಲ್ಲಿ ಭೂಮಿ ನಡುಗಿದ ಬಳಿಕ ಬಾಲಿ ಹಾಗೂ ಸುತ್ತಮುತ್ತಲೂ ನೂರಕ್ಕೂ ಹೆಚ್ಚು ಬಾರಿ ಕಂಪನದ ಅನುಭವಗಳು ಉಂಟಾಗಿವೆ.
ದ್ವೀಪಗಳ ಸುತ್ತಮುತ್ತಲಿನ ನಿವಾಸಿಗಳು, ಪ್ರವಾಸಿಗರಿಗೆ ಮನೆ ಹಾಗೂ ಕಟ್ಟಡಗಳಿಂದ ಹೊರಕ್ಕೆ ಇರುವಂತೆ ಸೂಚಿಸಲಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications