Budget 2023; ಮೋದಿ ಸರ್ಕಾರದಿಂದ ಸಾವಯವ ಕೃಷಿಗೆ ಒತ್ತು: ಸಂಸದ ಈರಣ್ಣ ಕಡಾಡಿ
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ನಲ್ಲಿ 5,300 ಕೋಟಿ ರೂ.ಗಳ ಅನುದಾನ ನೀಡಿರುವುದು ರಾಜ್ಯದ ರೈತರಿಗೆ ವರದಾನವಾಗಲಿದೆ ಎಂದು ಸಂಸದ ಈರಣ್ಣ ಕಡಾಡಿ ಹೇಳಿದರು.
ದೆಹಲಿ,ಫೆಬ್ರವರಿ1: ದೇಶದಾದ್ಯಂತ ಸಾವಯವ ಕೃಷಿಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿ ಕ್ಷೇತ್ರಕ್ಕೆ ಬಜೆಟ್ನಲ್ಲಿ ಹಲವಾರು ಯೋಜನೆಗಳನ್ನು ನೀಡುವ ಮೂಲಕ ರೈತರಿಗೆ ಆದ್ಯತೆ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.
ಕೇಂದ್ರ ಬಜೆಟ್ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ನಲ್ಲಿ 5,300 ಕೋಟಿ ರೂ.ಗಳ ಅನುದಾನ ನೀಡಿರುವುದು ರಾಜ್ಯದ ರೈತರಿಗೆ ವರದಾನವಾಗಲಿದೆ. 2023-24ನೇ ಸಾಲಿನ ಬಜೆಟ್ ಕೃಷಿ, ಶಿಕ್ಷಣ, ಆರೋಗ್ಯ, ಕೈಗಾರಿಕೆ, ತಂತ್ರಜ್ಞಾನ, ಕೌಶಲ್ಯ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಪೂರಕವಾಗಿದೆ ಎಂದಿದ್ದಾರೆ.
ರಾಗಿ ಸೇರಿದಂತೆ ಸಿರಿಧಾನ್ಯಗಳ ಬೆಳೆ ಪದ್ಧತಿ ಸುಧಾರಣೆಗಾಗಿ ಕ್ರಮ ವಹಿಸಲಾಗಿದೆ. ಸಂಶೋಧನೆ ನಡೆಸಲು ಹಾಗೂ ಉತ್ತಮ ಬೆಳೆ ಪದ್ಧತಿಯ ದಾಖಲಾತಿಗಾಗಿ 'ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮಿಲೆಟ್ ರೀಸರ್ಚ್' ಸಂಸ್ಥೆಗೆ ಅಗತ್ಯ ನೆರವು ನೀಡಲಾಗಿದೆ. ತೋಟಗಾರಿಕೆ ಬೆಳೆಗಳ ಇಳುವರಿ ಹೆಚ್ಚಳ ಹಾಗೂ ಬೆಳೆಪದ್ಧತಿ ಸುಧಾರಣೆಗಾಗಿ ಶುದ್ಧ ಸಸಿ ಕಾರ್ಯಕ್ರಮ, ಕೃಷಿ ಕ್ಷೇತ್ರದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಪರಿಚಯ ಮಾಡುವ ಗುರಿ, ಯುವ ಉದ್ಯಮಿಗಳಿಂದ ಕೃಷಿ-ಸ್ಟಾರ್ಟಪ್ಗಳನ್ನು ಉತ್ತೇಜಿಸಲು ಕೃಷಿ ವೇಗವರ್ಧಕ ನಿಧಿ ಸ್ಥಾಪನೆ, ಅಗ್ರಿ ಸ್ಟಾರ್ಟಪ್ಗಳನ್ನು ಉತ್ತೇಜಿಸಲು ಹೊಸ ನಿಧಿಯ ಘೋಷಣೆ ಮಾಡಿದ್ದಾರೆ.

ಮುಂದಿನ 3 ವರ್ಷಗಳಲ್ಲಿ ಒಂದು ಕೋಟಿ ರೈತರಿಗೆ ನೈಸರ್ಗಿಕ ಕೃಷಿ ಅಳವಡಿಸಿಕೊಳ್ಳಲು ನೆರವು ಸಿಗಲಿದೆ. ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆಗೆ ಒತ್ತು ನೀಡುವ ಮೂಲಕ ಕೃಷಿ ಸಾಲದ ಗುರಿಯನ್ನು 20 ಲಕ್ಷ ಕೋಟಿ ರೂ.ಗೆ ಹೆಚ್ಚಿಸಲು ಸರ್ಕಾರ ಪ್ರಸ್ತಾಪಿಸಿದೆ. ಕಳೆದ ಆರು ವರ್ಷಗಳಲ್ಲಿ ದೇಶದ ಕೃಷಿ ಕ್ಷೇತ್ರವು ಸರಾಸರಿ ವಾರ್ಷಿಕ ಶೇ.4.6 ಬೆಳವಣಿಗೆ ದರದಲ್ಲಿ ಬೆಳೆಯುತ್ತಿದೆ ಎಂದು ತಿಳಿಸಿದ್ದಾರೆ.
63,000 ಪ್ರಾಥಮಿಕ ಕೃಷಿ ಕ್ರೆಡಿಟ್ ಸೊಸೈಟಿಗಳನ್ನು 2,561 ಕೋಟಿ ರೂಪಾಯಿಗಳ ಹೂಡಿಕೆಯೊಂದಿಗೆ ಗಣಕೀಕರಣಗೊಳಿಸಲಾಗುತ್ತಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಂದ ರೈತರಿಗೆ ರೂ 2 ಲಕ್ಷದಷ್ಟು ಸಾಲವನ್ನು ನಗದು ರೂಪದಲ್ಲಿ ನೀಡಲು ಮತ್ತು ರೂ 2 ಲಕ್ಷದಷ್ಟು ಹಣವನ್ನು ನಗದು ರೂಪದಲ್ಲಿ ಕಟ್ಟಿಸಿಕೊಳ್ಳಲು ಅವಕಾಶ. ಪ್ರಧಾನಮಂತ್ರಿ ವಿಶ್ವಕರ್ಮ ಕೌಶಲ್ ಸಮ್ಮಾನ್-ಪಾರಂಪರಿಕ ಕುಶಲಕರ್ಮಿಗಳಿಗೆ ಸಹಾಯದ ಪ್ಯಾಕೇಜ್ ಎಂದು ಹೇಳಿದ್ದಾರೆ.
ವಸತಿ ಕ್ಷೇತ್ರಕ್ಕೆ ಈ ವರ್ಷ ರೂ 79,000 ಕೋಟಿ ಅನುದಾನ ಘೋಷಣೆ. ರೈಲ್ವೆ ಇಲಾಖೆಯಲ್ಲಿ ರೂ 2.40 ಲಕ್ಷ ಕೋಟಿ ಬಂಡವಾಳ ಹೂಡಿಕೆ. ಮಧ್ಯಮ ವರ್ಗದವರಿಗೆ ತೆರಿಗೆ ವಿನಾಯತಿ ನೀಡಿ, ಮಹಿಳೆಯರು, ಎಸ್ಸಿ, ಎಸ್ಟಿ ವರ್ಗದವರಿಗೆ, ಯುವಕರಿಗೆ ಪ್ರಮುಖ ಆದ್ಯತೆ ನೀಡಿ ಸಶಕ್ತ, ಸ್ವಾವಲಂಬಿ ನವಭಾರತ ನಿರ್ಮಾಣದ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಅಮೃತ ಕಾಲ ಬಜೆಟ್ ಅತ್ಯಂತ ಆಶಾದಾಯಕವಾಗಿದೆ ಎಂದು ತಿಳಿಸಿದ್ದಾರೆ.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು












Click it and Unblock the Notifications