Volcano Eruption: ಜ್ವಾಲಾಮುಖಿ ಸ್ಫೋಟದ ಪರಿಣಾಮ ಹಲವು ವಿಮಾನಗಳ ಹಾರಾಟ ರದ್ದು!
12,000 ವರ್ಷಗಳ ನಂತರ ಇಥಿಯೋಪಿಯಾ ಹೈಲಿ ಗುಬ್ಬಿ ಪರ್ವತದಲ್ಲಿ ಜ್ವಾಲಾಮುಖಿ ಸ್ಫೋಟದ ನಂತರ ಜಗತ್ತಿನಲ್ಲಿ ನಾನಾ ರೀತಿಯ ಸಮಸ್ಯೆ ಎದುರಾಗಿದೆ. ಭೀಕರವಾಗಿ ಸ್ಫೋಟಗೊಂಡಿರುವ ಈ ಜ್ವಾಲಾಮುಖಿ ಭಾರಿ ದೊಡ್ಡ ಪ್ರಮಾಣದಲ್ಲಿ ಬೂದಿ ಹೊರಗೆ ಹಾಕುತ್ತಿದೆ. ಹೀಗಾಗಿ ಈಗ ಹಲವು ರೀತಿಯ ಸಮಸ್ಯೆಗಳು ಎದುರಾಗಿದ್ದು, ಜ್ವಾಲಾಮುಖಿ ಸ್ಫೋಟ ಪರಿಣಾಮ ಭಾರತದಲ್ಲೂ ಮಾಲಿನ್ಯ ಸೇರಿದಂತೆ ವಿಷಗಾಳಿ ಭೀತಿ ಎದುರಾಗಿದೆ. ಅದರಲ್ಲೂ ಉತ್ತರ ಭಾರತದಲ್ಲಿ ಬೂದಿಯ ಪರಿಣಾಮ ಹಲವು ವಿಮಾನಗಳ ಓಡಾಟವೇ ರದ್ದಾಗಿದೆ.
ಒಂದಾದ ನಂತರ ಒಂದೊಂದು ಪ್ರಾಕೃತಿಕ ವಿಕೋಪಗಳು ಭಯದ ವಾತಾವರಣ ಸೃಷ್ಟಿಸುತ್ತಿವೆ. ಇಥಿಯೋಪಿಯಾ ಹೈಲಿ ಗುಬ್ಬಿ ಪರ್ವತದಲ್ಲಿ ಜ್ವಾಲಾಮುಖಿ ದಿಢೀರ್ ಸ್ಫೋಟಗೊಂಡ ಬಳಿಕ ರಾಷ್ಟ್ರ ರಾಜಧಾನಿ ದೆಹಲಿ ಜನರು ನಿದ್ದೆ ಮಾಡಿಲ್ಲ. ಏಕೆಂದರೆ ಆಫ್ರಿಕಾದ ಇಥಿಯೋಪಿಯಾ ದೇಶದಲ್ಲಿ ಇರುವ ಹೈಲಿ ಗುಬ್ಬಿ ಪರ್ವತದ ಜ್ವಾಲಾಮುಖಿ ಮುನಿಸು ನಮ್ಮ ದೇಶಕ್ಕೂ ಸಮಸ್ಯೆ ಮಾಡುತ್ತಿದೆ. ಈ ಜ್ವಾಲಾಮುಖಿ ದಿಢೀರ್ ಸ್ಫೋಟಗೊಂಡ ಬಳಿಕ ಉತ್ತರ ಭಾರತದಲ್ಲಿ ಸಾಲು ಸಾಲು ಸಮಸ್ಯೆ ಶುರು ಆಗಿವೆ.

ವಿಮಾನ ಹಾರಟಕ್ಕೂ ಸಾಕಷ್ಟು ತೊಂದರೆ
ಪ್ರಮುಖವಾಗಿ ದೆಹಲಿ ಆಕಾಶದಲ್ಲಿ ದಟ್ಟ ಬೂದಿ ಆವರಿಸಿದ್ದು, ಇದರ ಪರಿಣಾಮವಾಗಿ ವಿಮಾನ ಹಾರಾಟ ಸೇರಿದಂತೆ ಹಲವು ಪ್ರಮುಖ ಚಟುವಟಿಕೆಗೆ ಬ್ರೇಕ್ ಹಾಕಲಾಗಿತ್ತು. ಹೀಗಿದ್ದಾಗ ಜನರು ಕೂಡ ತಮ್ಮ ಕೆಲಸ ಬಿಟ್ಟು ಮನೆಯಲ್ಲಿ ಕೂರುವಂತೆ ಆಗಿತ್ತು. ಪ್ರಮುಖವಾದ ವಿಮಾನಯಾನ ಸಂಸ್ಥೆಗಳೇ ವಿಮಾನಗಳ ಹಾರಾಟ ರದ್ದು ಮಾಡಿದ್ದವು.
ಬೂದಿ ಆವರಿಸಿದ ಪ್ರದೇಶಗಳಿಗೆ ತೆರಳುವ ಬಹುತೇಕ ವಿಮಾನಗಳು ಕ್ಯಾನ್ಸಲ್ ಆಗಿವೆ. ಹೀಗಿದ್ದಾಗ ಮಂಗಳವಾರ ರಾತ್ರಿಯಿಂದ ಬೂದಿಯು ಸಂಪೂರ್ಣ ಭಾರತ ಬಿಟ್ಟು ಹೊರಗೆ ಹೋಗಿದ್ದು, ಈಗ ದೆಹಲಿ ಜನ ಒಂದಷ್ಟು ನಿಟ್ಟುಸಿರನ್ನು ಬಿಟ್ಟಿದ್ದಾರೆ. ಆದರೂ ಮಾಲಿನ್ಯ ಮಾತ್ರ ಕಡಿಮೆ ಆಗಿಲ್ಲ, ಇದು ಚಿಂತೆಯನ್ನ ಹೆಚ್ಚು ಮಾಡಿದ್ದು ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿ ವಾತಾವರಣ ಇರಲಿದೆ ಎನ್ನಲಾಗಿದೆ.
ಸಾಲು ಸಾಲು ಪ್ರಾಕೃತಿಕ ವಿಕೋಪ
ಪ್ರಕೃತಿಗೆ ಮನುಷ್ಯರು ನೀಡುತ್ತಿರುವ ತೊಂದರೆ ಈಗ ನಾನಾ ಸಮಸ್ಯೆಗೆ ದಾರಿ ಮಾಡಿಕೊಡುತ್ತಿದೆ. ಅದರಲ್ಲೂ ಪದೇ, ಪದೇ ಪ್ರಾಕೃತಿಕ ವಿಕೋಪ ಸಂಭವಿಸುತ್ತಿರುವ ಕಾರಣ, ಈಗಾಗಲೇ ಸಾವಿರಾರು ಸಮಸ್ಯೆ ಸುಳಿಗೆ ಸಿಲುಕಿದ್ದಾರೆ ಮಾನವರು. ಇಂತಹ ಪರಿಸ್ಥಿತಿ ಇರುವಾಗ ವಿಪರೀತ ಮಳೆ, ವಿಪರೀತ ಚಳಿ, ವಿಪರೀತ ಬಿಸಿಲು ಮನುಷ್ಯರನ್ನ ಕಾಡುತ್ತಿದೆ. ಇದೇ ವೇಳೆ ತಣ್ಣಗೆ ಮಲಗಿದ್ದ ಜ್ವಾಲಾಮುಖಿ ಕೂಡ ಸ್ಫೋಟವಾಗಿ ಭಯವನ್ನ ಹೆಚ್ಚು ಮಾಡಿದೆ. ಅಲ್ಲದೆ ಮನುಷ್ಯರಿಗೆ ಮತ್ತೊಂದು ಎಚ್ಚರಿಕೆ ಸಂದೇಶ ರವಾನೆಯಾಗಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications