Loksabha Elections : ಡಿಸೆಂಬರ್ 2023ರಲ್ಲೇ ಲೋಕಸಭಾ ಚುನಾವಣೆ: ರೋಹಿತ್ ಪವಾರ್
ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್ಸಿಪಿ)ಯ ಶರದ್ ಪವಾರ್ ಮತ್ತು ಸೋದರಳಿಯ ಅಜಿತ್ ಪವಾರ್ ನಡುವೆ ಹಣಾಹಣಿ ನಡೆಯುತ್ತಿರುವ ಸಂದರ್ಭದಲ್ಲೇ, ಶರದ್ ಪವಾರ್ ಅವರ ಮೊಮ್ಮಗ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಲೋಕಸಭಾ ಚುನಾವಣೆ 2024ಕ್ಕೆ ಬದಲಾಗಿ 2023ರ ಡಿಸೆಂಬರ್ ತಿಂಗಳಲ್ಲೇ ನಡೆಯಬಹುದು ಎಂದು ಅಚ್ಚರಿಯ ಹೇಳಿಕೆ ಕೊಟ್ಟಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನವೇ ಲೋಕಸಭಾ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ. ನಾಲ್ಕು ದಿನಗಳ ಹಿಂದೆ ವಿದ್ಯುನ್ಮಾನ ಮತಯಂತ್ರಗಳನ್ನು (ಇವಿಎಂ) ಪರಿಶೀಲಿಸಲು ಅಥವಾ ಇವಿಎಂ ತಯಾರಿಕೆಯನ್ನು ಆರಂಭಿಸಲು ಅಧಿಕಾರಿಗಳಿಗೆ ಸೂಚನೆಗಳು ಬಂದಿವೆ ಎಂದು ರೋಹಿತ್ ಪವಾರ್ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ರೋಹಿತ್ ಪವಾರ್, "ಡಿಸೆಂಬರ್ 2023 ರಲ್ಲಿ ಲೋಕಸಭೆ ಚುನಾವಣೆಗಳು ನಡೆಯಬಹುದು ಎಂದು ಅನಿಸುತ್ತದೆ. ಅಕ್ಟೋಬರ್ 2024 ರಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯು ಲೋಕಸಭೆ ಚುನಾವಣೆಯ ಜೊತೆಗೆ ನಡೆಯಬಹುದು" ಎಂದು ಹೇಳಿದ್ದಾರೆ.
5-6 ತಿಂಗಳ ಮೊದಲು ಇವಿಎಂ ಪರಿಶೀಲನೆ
"ಸಾಮಾನ್ಯವಾಗಿ ಲೋಕಸಭೆ ಅಥವಾ ರಾಜ್ಯ ಚುನಾವಣೆಗಳಿಗೆ 5-6 ತಿಂಗಳ ಮೊದಲು ಇವಿಎಂಗಳನ್ನು ಅಧಿಕಾರಿಗಳು ಪರಿಶೀಲನೆ ಮಾಡುತ್ತಾರೆ. ನಾಲ್ಕು ದಿನಗಳ ಹಿಂದೆ ಕೆಲವು ಮಹಾರಾಷ್ಟ್ರ ಅಧಿಕಾರಿಗಳಿಗೆ ಇವಿಎಂಗಳನ್ನು ದುರಸ್ತಿ ಮಾಡಲು ಮತ್ತು ತಯಾರಿಸಲು ಪ್ರಾರಂಭಿಸಲು ಸೂಚನೆ ನೀಡಲಾಗಿದೆ. ಇದು 2023ರ ಡಿಸೆಂಬರ್ನಲ್ಲಿ ಲೋಕಸಭೆ ಚುನಾವಣೆ ನಡೆಸಬಹುದು ಎಂಬುದನ್ನು ಸೂಚಿಸುತ್ತದೆ ಎಂದು ಅವರು ಹೇಳಿದ್ದಾರೆ.
ಕರ್ನಾಟಕ ಚುನಾವಣೆಯಲ್ಲಿ ಸೋಲು
ಬಿಜೆಪಿಯ ಈ ನಿರ್ಧಾರಕ್ಕೆ ಕರ್ನಾಟಕ ವಿಧಾನಸಭೆ ಚುನಾವಣೆಯ ಸೋಲು ಕಾರಣ ಎಂದು ರೋಹಿತ್ ಪವಾರ್ ಹೇಳಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಸೋಲನುಭವಿಸಿದ್ದು, ಮಧ್ಯಪ್ರದೇಶ, ಹರಿಯಾಣ ಮತ್ತು ಇತರ ರಾಜ್ಯಗಳಲ್ಲೂ ಇದೇ ಪರಿಸ್ಥಿತಿ ಎದುರಾಗಬಹುದು ಎಂದು ಹೇಳಿದ್ದಾರೆ.
ಈ ವರ್ಷದ ಅಂತ್ಯದಲ್ಲಿ ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈಗಾಗಲೇ ಬಂದಿರುವ ಸಮೀಕ್ಷೆಗಳ ಪ್ರಕಾರ ಬಿಜೆಪಿ ಅಧಿಕಾರ ಕಳೆದುಕೊಳ್ಳುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಗೆದ್ದೇ ಗೆಲ್ಲುತ್ತೇವೆ ಎನ್ನುವ ಭರವಸೆಯಲ್ಲಿದ್ದ ಬಿಜೆಪಿಗೆ ಭಾರಿ ಹೊಡೆತ ಬಿದ್ದಿದ್ದು, ಇತರೆ ರಾಜ್ಯಗಳಲ್ಲೂ ಇದೇ ಪರಿಸ್ಥಿತಿ ಎದುರಾಗುವ ಆತಂಕ ಎದುರಾಗಿದೆ. ಈ ಕಾರಣಕ್ಕೆ ಚುನಾವಣೆ ಸಮಯವನ್ನು ಬದಲಾಯಿಸುವ ತಂತ್ರ ಮಾಡಲಾಗುತ್ತಿದೆ ಎನ್ನುವುದು ರೋಹಿತ್ ಪವಾರ್ ಅವರ ಆರೋಪವಾಗಿದೆ.
2024ರಲ್ಲಿ ಲೋಕಸಭಾ ಚುನಾವಣೆ ನಡೆಯಬೇಕಿದೆ. ಈಗಾಗಲೇ ತಮಿಳುನಾಡಿನಲ್ಲಿ ಕೂಡ ಚುನಾವಣಾ ಅಧಿಕಾರಿಗಳು ಇವಿಎಂ ಯಂತ್ರಗಳ ಪರಿಶೀಲನೆಯನ್ನು ಆರಂಭಿಸಿದ್ದಾರೆ ಎಂದು ವರದಿಯಾಗಿದೆ. ಒಂದು ವರ್ಷಗಳವರೆಗೆ ಇವಿಎಂ ಪರಿಶೀಲನೆ ಪ್ರಕ್ರಿಯೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications