ಹಿಮಾಚಲದಲ್ಲಿ ಖಾಸಗಿ ಕಾರಿನಲ್ಲಿ ಇವಿಎಂ ಸಾಗಾಟ: ಕಾಂಗ್ರೆಸ್ ದೂರು
ಶಿಮ್ಲಾ, ನವೆಂಬರ್ 13: ಹಿಮಾಚಲ ಪ್ರದೇಶದಲ್ಲಿ ನಿಯಮ ಉಲ್ಲಂಘಿಸಿ ಖಾಸಗಿ ವಾಹನಗಳಲ್ಲಿ ಇವಿಎಂ ಸಾಗಿಸುವುದನ್ನು ವಿರೋಧಿಸಿ ಕಾಂಗ್ರೆಸ್ ಶನಿವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಇವಿಎಂ ಯಂತ್ರಗಳನ್ನು ಅನಧಿಕೃತ ಖಾಸಗಿ ವಾಹನಗಳಲ್ಲಿ ತಮ್ಮ ಕೇಂದ್ರಗಳಿಗೆ (ಸ್ಟ್ರಾಂಗ್ ರೂಂ) ಕೊಂಡೊಯ್ಯುತ್ತಿರುವುದು ಕಂಡು ಬಂದಿದೆ ಎಂದು ರಾಜ್ಯ ಕಾಂಗ್ರೆಸ್ನ ಕಾನೂನು ಮತ್ತು ಮಾನವ ಹಕ್ಕುಗಳ ಇಲಾಖೆ ಹಿಮಾಚಲದ ಮುಖ್ಯ ಚುನಾವಣಾ ಅಧಿಕಾರಿಗೆ ನೀಡಿದ ದೂರಿನಲ್ಲಿ ತಿಳಿಸಿದೆ.
ತಮ್ಮ ವಿಧಾನಸಭಾ ಕ್ಷೇತ್ರವಾದ ರಾಂಪುರದಲ್ಲಿ ಇದೊಂದು ದುರದೃಷ್ಟಕರ ಘಟನೆ ಎಂದು ಬಣ್ಣಿಸಿರುವ ಕಾಂಗ್ರೆಸ್ ಕಾನೂನು ಘಟಕದ ಕಾರ್ಯಾಧ್ಯಕ್ಷ ಪ್ರಣಯ್ ಪ್ರತಾಪ್ ಸಿಂಗ್ ಅವರು, ಪ್ರೋಟೋಕಾಲ್ ಪ್ರಕಾರ ಇವಿಎಂ ಯಂತ್ರಗಳನ್ನು ಸ್ಟ್ರಾಂಗ್ ರೂಮ್ಗಳಿಗೆ ಸಾಗಿಸಲು ಬಾಡಿಗೆಗೆ ಪಡೆದಿರುವ ವಾಹನಗಳನ್ನು ಆಯೋಗ ಅಥವಾ ಚುನಾವಣಾಧಿಕಾರಿಗಳು ಚುನಾವಣೆಗೆ ಮುನ್ನವೇ ವಶಪಡಿಸಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಯಂತ್ರಗಳನ್ನು ಖಾಸಗಿ ವಾಹನದಲ್ಲಿ ವರ್ಗಾಯಿಸಲಾಯಿತು. ಅದು ಚುನಾವಣಾ ಅಧಿಕಾರಿ ಅಥವಾ ಚುನಾವಣಾ ಆಯೋಗದಿಂದ ಯಾವುದೇ ಪೂರ್ವಾನುಮತಿ ಅಥವಾ ಕೋರಿಕೆಯನ್ನು ಹೊಂದಿರಲಿಲ್ಲ ಎಂದು ಹೇಳಿದರು. ಭಾರತದ ಚುನಾವಣಾ ಆಯೋಗದ ಅಧಿಕಾರಗಳು ಮತ್ತು ಕಾರ್ಯಗಳನ್ನು ಆಡಳಿತಾರೂಢ ಬಿಜೆಪಿ ಪಕ್ಷವು ಚುನಾವಣೆಯನ್ನು ಅಪಹಾಸ್ಯ ಮಾಡುತ್ತಿದೆ. ಇದು ನಾಗರಿಕರ ಮೂಲಭೂತ ಹಕ್ಕುಗಳನ್ನು ಮಾತ್ರವಲ್ಲದೆ ಸ್ವತಂತ್ರವನ್ನು ಮೊಟಕುಗೊಳಿಸುತ್ತದೆ ಎಂದು ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರನ್ನು ನೀಡಿದೆ.
ಮಾದರಿ ನೀತಿ ಸಂಹಿತೆಯ ಉಲ್ಲಂಘನೆಗೆ ಸಂಬಂಧಿಸಿದಂತೆ ಅಗತ್ಯ ಕ್ರಮಗಳನ್ನು ತಕ್ಷಣವೇ ತೆಗೆದುಕೊಳ್ಳಬೇಕು ಮತ್ತು ಅಪರಾಧಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಯನ್ನು ಆದಷ್ಟು ಬೇಗ ದಾಖಲಿಸಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದಕ್ಕೂ ಮುನ್ನ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತ ಯಂತ್ರಗಳ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಹಿಮಾಚಲದ ಎಐಸಿಸಿ ಉಸ್ತುವಾರಿ ರಾಜೀವ್ ಶುಕ್ಲಾ ಅವರ ಹೆಸರಿನಲ್ಲಿ ಬಿಜೆಪಿ ನಕಲಿ ಲೆಟರ್ಹೆಡ್ ಅನ್ನು ಪ್ರಸಾರ ಮಾಡುತ್ತಿದೆ ಎಂದು ಹಿಮಾಚಲ ಕಾಂಗ್ರೆಸ್ ಮತ್ತೊಂದು ದೂರಿನಲ್ಲಿ ಆರೋಪಿಸಿದೆ. ಆದರೆ ರಾಜೀವ್ ಶುಕ್ಲಾ ಅಂತಹ ಯಾವುದೇ ಪತ್ರವನ್ನು ಬರೆದಿಲ್ಲ ಅಥವಾ ಸಹಿ ಮಾಡಿಲ್ಲ ಎಂದು ಹೇಳಿದ್ದಾರೆ.

ಈ ಪತ್ರ ಬಿಜೆಪಿಯ ಹತಾಶೆಯ ಮಟ್ಟವನ್ನು ತೋರಿಸುತ್ತಿದೆ. ಈ ನಕಲಿ ಪತ್ರವು ಕಾಂಗ್ರೆಸ್ಗೆ ಹಾನಿ ಮಾಡುವ ದುರ್ಬಲ ಪ್ರಯತ್ನವಲ್ಲದೇ ಬೇರೇನೂ ಅಲ್ಲ. ಆದರೆ ಹಿಮಾಚಲ ಪ್ರದೇಶದ ಜನರು ತಮ್ಮ ದುರುದ್ದೇಶವನ್ನು ಅರ್ಥೈಸಿಕೊಳ್ಳುವಷ್ಟು ಬುದ್ಧಿವಂತರು ಎಂಬುದು ಬಿಜೆಪಿಗೆ ತಿಳಿದಿಲ್ಲ ಈ ಬಗ್ಗೆ ಬಿಜೆಪಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ಮತ್ತು ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರಲಾಗಿದೆ.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications