EWS Quota: ಶಿಕ್ಷಣ, ಉದ್ಯೋಗಗಳಲ್ಲಿ ಶೇ.10 ರಷ್ಟು ಮೀಸಲಾತಿ ಎತ್ತಿ ಹಿಡಿದ 'ಸುಪ್ರೀಂ'
ನವದೆಹಲಿ, ನವೆಂಬರ್ 7: ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ (ಇಡಬ್ಲ್ಯುಎಸ್) 10 ಪ್ರತಿಶತ ಮೀಸಲಾತಿಯನ್ನು ಸುಪ್ರೀಂ ಕೋರ್ಟ್ ಸೋಮವಾರ 4:1 ಬಹುಮತದೊಂದಿಗೆ ಎತ್ತಿಹಿಡಿದಿದೆ. ಐದರಲ್ಲಿ ನಾಲ್ವರು ನ್ಯಾಯಾಧೀಶರು EWS ಕೋಟಾದ ಪರವಾಗಿ ತೀರ್ಪು ನೀಡಿದ್ದಾರೆ.
ಮುಖ್ಯ ನ್ಯಾಯಮೂರ್ತಿ (ಸಿಜೆಐ) ಯು.ಯು. ಲಲಿತ್ ನೇತೃತ್ವದ ಐವರು ನ್ಯಾಯಾಧೀಶರ ಸುಪ್ರೀಂ ಕೋರ್ಟ್ ಪೀಠವು ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ (ಇಡಬ್ಲ್ಯುಎಸ್) 10 ಪ್ರತಿಶತ ಮೀಸಲಾತಿಯನ್ನು ಒದಗಿಸುವ 103 ನೇ ಸಂವಿಧಾನ ತಿದ್ದುಪಡಿಯನ್ನು ಪ್ರಶ್ನಿಸುವ ಅರ್ಜಿಗಳನ್ನು ವಿಚಾರಣೆ ನಡೆಸಿತು.
ಕೇಂದ್ರ ಸರ್ಕಾರವು 103ನೇ ಸಾಂವಿಧಾನಿಕ ತಿದ್ದುಪಡಿಯ ಅಡಿಯಲ್ಲಿ 2019ರಂದು ಜನವರಿಯಲ್ಲಿ ಇಡಬ್ಲ್ಯೂಎಸ್ (EWS ಆರ್ಥಿಕವಾಗಿ ದುರ್ಬಲ ವಿಭಾಗ) ಈ ಶೇ 10ರಷ್ಟು ಮೀಸಲಾತಿಯ ಕೋಟಾ ಜಾರಿಗೆ ತರಲಾಗಿತ್ತು. ಇದರ ಅಡಿಯಲ್ಲಿ ಸಾಮಾನ್ಯ ವರ್ಗವು ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ 10 ರಷ್ಟು ಮೀಸಲಾತಿಯ ಲಾಭವನ್ನು ಪಡೆಯುತ್ತದೆ. ಈ ಕಾನೂನನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಾಗಿದ್ದು, ಸುಪ್ರೀಂನ ಐವರು ನ್ಯಾಯಮೂರ್ತಿಗಳ ಪೀಠ ವಿಚಾರಣೆ ನಡೆಸುತ್ತಿದೆ.

ಆರ್ಥಿಕವಾಗಿ ದುರ್ಬಲ ವರ್ಗಕ್ಕೆ (ಇಡಬ್ಲ್ಯುಎಸ್) ಶೇ 10ರಷ್ಟು ಮೀಸಲಾತಿಯನ್ನು ನೀಡುವ ಸಾಂವಿಧಾನಿಕ ಸಿಂಧುತ್ವವನ್ನು ಕುರಿತ ವಿಚಾರಣೆಯನ್ನು ಸತತ 7ನೇ ದಿನವೂ ಸುಪ್ರೀಂಕೋರ್ಟ್ ಆಲಿಸಿತು. 103ನೇ ತಿದ್ದುಪಡಿ ಕಾಯಿದೆ, 2019ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳ ಬ್ಯಾಚ್ನ್ನು ಆಲಿಸಿದ ನಂತರ, ನ್ಯಾಯಾಲಯವು ಈ ವಿಷಯದ ಬಗ್ಗೆ ತನ್ನ ತೀರ್ಪನ್ನು ಕಾಯ್ದಿರಿಸಿತ್ತು.
ಸಂವಿಧಾನದಲ್ಲಿ ನೀಡಿರುವ ಯಾವುದೇ ಕಾನೂನಿನಲ್ಲಿ ಬದಲಾವಣೆಯಾದಾಗ, ಹೊಸ ವಿಷಯವನ್ನು ಸೇರಿಸಿದಾಗ ಅಥವಾ ಸಂಪೂರ್ಣ ಹೊಸ ಕರಡನ್ನು ಸಿದ್ಧಪಡಿಸಿ ಮತ್ತು ಕಾನೂನನ್ನು ರಚಿಸಿದಾಗ ಅದನ್ನು ಸಾಂವಿಧಾನಿಕ ತಿದ್ದುಪಡಿ ಎಂದು ಕರೆಯಲಾಗುತ್ತದೆ. ಸಂಸತ್ತು ಈ ಕೆಲಸವನ್ನು ಮಾಡುತ್ತದೆ. 103ನೇ ತಿದ್ದುಪಡಿಯೊಂದಿಗೆ, 15 (6) ಮತ್ತು 16 (6)ನೇ ವಿಧಿಗಳನ್ನು ಸಂವಿಧಾನದಲ್ಲಿ ಸೇರಿಸಲಾಯಿತು, ಇದರಿಂದಾಗಿ EWS ಅಂದರೆ ಆರ್ಥಿಕವಾಗಿ ದುರ್ಬಲ ವಿಭಾಗಕ್ಕೆ 10 ಪ್ರತಿಶತ ಮೀಸಲಾತಿಯನ್ನು ಪಡೆಯಲಿದೆ.
ಕೇಂದ್ರ ಸರ್ಕಾರವು 103ನೇ ಸಾಂವಿಧಾನಿಕ ತಿದ್ದುಪಡಿಯ ಅಡಿಯಲ್ಲಿ ಜನವರಿ 2019ರಲ್ಲಿ EWS ಕೋಟಾವನ್ನು ಜಾರಿಗೆ ತಂದಿತು. ಇದರ ಅಡಿಯಲ್ಲಿ ಸಾಮಾನ್ಯ ವರ್ಗವು ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ 10 ಪ್ರತಿಶತದಷ್ಟು ಮೀಸಲಾತಿಯ ಲಾಭವನ್ನು ಪಡೆಯುತ್ತದೆ. ಈ ಕಾನೂನನ್ನು ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಲಾಗಿದ್ದು, ಐವರು ನ್ಯಾಯಮೂರ್ತಿಗಳ ಪೀಠ ವಿಚಾರಣೆ ನಡೆಸುತ್ತಿದೆ.

ಏಳು ದಿನಗಳಲ್ಲಿ 20 ಕ್ಕೂ ಹೆಚ್ಚು ವಕೀಲರನ್ನು ಆಲಿಸಿದ ನಂತರ ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 27 ರಂದು ತನ್ನ ಆದೇಶವನ್ನು ಕಾಯ್ದಿರಿಸಿತ್ತು. ಹೆಚ್ಚಿನ ಅರ್ಜಿದಾರರು ತಿದ್ದುಪಡಿಯ ಸಿಂಧುತ್ವವನ್ನು ಪ್ರಶ್ನಿಸಿದರು ಮತ್ತು ಅದನ್ನು ರದ್ದುಗೊಳಿಸುವಂತೆ ನ್ಯಾಯಾಲಯವನ್ನು ಒತ್ತಾಯಿಸಿದರು. ಪ್ರತಿವಾದಿ ಕೇಂದ್ರ ಸರ್ಕಾರ ಮತ್ತು ಕೆಲವು ರಾಜ್ಯಗಳು ಮೀಸಲಾತಿಯ ನಿಬಂಧನೆಯನ್ನು ಸಮರ್ಥಿಸಲು ನ್ಯಾಯಾಲಯವನ್ನು ಕೇಳಿದ್ದವು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications