Budget 2024: ಭವಿಷ್ಯದ ಭಾರತದ ಯುವಕರ ಬಜೆಟ್: ಬಸವರಾಜ ಬೊಮ್ಮಾಯಿ
ನವದೆಹಲಿ, ಜುಲೈ 23: ಮಂಗಳವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರದ ಬಜೆಟ್ ಭವಿಷ್ಯದ ಭಾರತದ ಯುವಕರ ಬಜೆಟ್ ಆಗಿದೆ. ಪಧಾನಿ ಮೋದಿ ನೇತೃತ್ವದ ಸರ್ಕಾರದ ಹತ್ತು ವರ್ಷದ ಆರ್ಥಿಕತೆಯ ಸುಧಾರಣೆಯಿಂದ ವಿಶ್ವದಲ್ಲಿಯೇ ಭಾರತ ಬೆಳೆಯುತ್ತಿರುವ ರಾಷ್ಟ್ರ ಎನ್ನುವುದನ್ನು ಈ ಬಜೆಟ್ ತೋರಿಸುತ್ತದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬಜೆಟ್ ಕುರಿತು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಹಣದುಬ್ಬರ ಸೀಮಿತಗೊಳಿಸಿರುವುದು, ಹೆಚ್ಚು ಜನರಿಗೆ ಕೆಲಸ ಕೊಡಿಸಿರುವುದು ಹತ್ತು ವರ್ಷದಲ್ಲಿ ಮಾಡಿರುವುದರ ಫಲವಾಗಿ ವಿಕಸಿತ ಭಾರತ ಮಾಡುವ ಹತ್ತು ವರ್ಷದ ಫಲವನ್ನು ಬರುವ ದಿನಗಳಲ್ಲಿ ಹೆಚ್ಚಿಗೆ ಮಾಡುವ ನಿಟ್ಟಿನಲ್ಲಿ ಅಭಿವೃದ್ಧಿ ಪರವಾದ ಬಜೆಟ್ ಇದಾಗಿದೆ ಎಂದರು.

ಬಜೆಟ್ನಲ್ಲಿ ಕೃಷಿ ವಲಯಕ್ಕೆ 1.5 ಲಕ್ಷ ಕೋಟಿ, ಉದ್ಯೋಗ, ಕೌಶಲ್ಯಾಬಿವೃದ್ಧಿಗೆ 1.5 ಲಕ್ಷ ಕೋಟಿ, ಮುದ್ರಾ ಯೋಜನೆಯಲ್ಲಿ ಸಾಲ ನೀಡುವ ಪ್ರಮಾಣವನ್ನು 10 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಳ ಮಾಡಿರುವುದು, ಗ್ರಾಮೀಣಾಭಿವೃದ್ಧಿ ಅಭಿವೃದ್ಧಿಗೆ 1 ಲಕ್ಷ ಕೋಟಿ, ಬಡವರಿಗೆ 3 ಕೋಟಿ ಮನೆ ಕೊಡುವುದು, ಕೃಷಿ ವಲಯಕ್ಕೆ ಬಹಳ ಒತ್ತು ಕೊಟ್ಟಿದ್ದು, ಕೃಷಿ ಉತ್ಪಾದನೆ ಹೆಚ್ಚಳ ಮತ್ತು ಸಂಸ್ಕರಣೆಗೆ ಆದ್ಯತೆ ನೀಡಿದ್ದಾರೆ ಎಂದು ಹೇಳಿದರು.
ಸೇವಾ ವಲಯದ ಬೆಳವಣಿಗೆಗೆ ಆದ್ಯತೆ
ಉತ್ಪಾದನಾ ವಲಯದಲ್ಲಿ ವಿಶೇಷವಾಗಿ ಸಣ್ಣ ಕೈಗಾರಿಕೆಗೆ ಹೆಚ್ಚಿನ ಒತ್ತು ಕೊಟ್ಟಿದ್ದಾರೆ. ಸೇವಾ ವಲಯವೂ ದೊಡ್ಡ ಪ್ರಮಾಣದಲ್ಲಿ ಬೆಳೆಯಲು ಅನುಕೂಲ ಮಾಡಿಕೊಟ್ಟಿದ್ದಾರೆ. ಮೂರು ವಲಯದಲ್ಲಿ ಹೆಚ್ಚಿಗೆ ಹಣ ಹೂಡಿಕೆ ಮಾಡಲು ದೇಶದ ಆರ್ಥಿಕತೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ಕೆಲಸ ಮಾಡುತ್ತಿದ್ದಾರೆ.

ಸಾಮಾಜಿಕ ವಲಯಗಳಾದ ಶಿಕ್ಷಣ, ಆರೋಗ್ಯ ಉದ್ಯೋಗಕ್ಕೆ ಹೆಚ್ಚಿನ ಹಣ ನೀಡಿರುವುದು ಸ್ವಾಗತಾರ್ಹ ವಿಷಯ. ಮೂಲ ಸೌಕರ್ಯ ಅಭಿವೃದ್ಧಿಗೆ ಕಳೆದ ಬಾರಿಗಿಂತ ಹೆಚ್ಚು ಹಣ ನೀಡಿದ್ದಾರೆ. ಮಹಿಳೆಯ ಸಬಲೀಕರಣಕ್ಕೆ ವಿಶೇಷ ಕಾನೂನು ಮಾಡಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆ ಎಂದು ತಿಳಿಸಿದರು.
ಕೋಟಿ ಜನರಿಗೆ ಉಚಿತ ವಿದ್ಯುತ್ ಯೋಜನೆ
ವಿದ್ಯುತ್ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ನವೀಕರಣ ಇಂಧನಕ್ಕೆ ಮಹತ್ವ ನೀಡಿದ್ದು, ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಸುಮಾರು ಒಂದು ಕೋಟಿ ಜನರಿಗೆ ಉಚಿತ ವಿದ್ಯುತ್ ನೀಡುವ ಯೋಜನೆಗೆ ಈಗಾಗಲೇ ಒಂದು ಲಕ್ಷ ಜನರು ಹೆಸರು ನೋಂದಾಯಿಸಿರುವುದು ದಾಖಲಾಗಿದೆ.
ಸಾಮಾನ್ಯ ಜನರ ತೆರಿಗೆ ಕಡಿಮೆ ಮಾಡಿದ್ದು, ಮೂರು ಲಕ್ಷದವರೆಗೂ ಯಾವುದೇ ತೆರಿಗೆಯಿಲ್ಲ. ಮೂರು ಲಕ್ಷದಿಂದ 5 ಲಕ್ಷದವರೆಗೆ ಶೇ 5% ರಷ್ಟು ತೆರಿಗೆ ವಿಧಿಸಿ ತೆರಿಗೆ ಕಡಿಮೆ ಮಾಡಿದ್ದಾರೆ. ಇದರಿಂದ ಮಧ್ಯಮ ವರ್ಗದ ಜನರಿಗೆ ಬಹಳ ಅನುಕೂಲವಾಗಲಿದೆ. ಎಲ್ಲಕ್ಕಿಂತ ಹೆಚ್ಚಾಗಿ ಆರ್ಥಿಕ ಶಿಸ್ತು ಕಾಪಾಡಿರುವುದು ಮುಖ್ಯವಾಗಿದೆ ಎಂದರು.
ವಿತ್ತಿಯ ಕೊರತೆ ಇಳಿಕೆ
ವಿತ್ತಿಯ ಕೊರತೆ 5.3% ರಿಂದ 4.7 ಕ್ಕೆ ಇಳಿಸಿದ್ದು, ಮುಂದಿನ ವರ್ಷ 4.5% ಕ್ಕೆ ಇಳಿಸುವಂಥದ್ದು ಹಾಗೂ ವಿದೇಶಿ ನೇರ ಬಂಡವಾಳ ಹೆಚ್ಚಿನ ಪ್ರಮಾಣದಲ್ಲಿ ಹರಿದು ಬರುವಂತೆ ಅನುಕೂಲ ಮಾಡಿದೆ. ಸರ್ಕಾರದ ಸಾಲ ಕಡಿಮೆ ಮಾಡಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ಬದಲಾವಣೆಗೆ ಕಾರಣವಾಗಲಿದೆ. ಇದು ಭವಿಷ್ಯದ ಭಾರತದ ಯುವಕರ ಬಜೆಟ್ ಆಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications