Get Updates
Get notified of breaking news, exclusive insights, and must-see stories!

Budget 2024: ಭವಿಷ್ಯದ ಭಾರತದ ಯುವಕರ ಬಜೆಟ್: ಬಸವರಾಜ ಬೊಮ್ಮಾಯಿ

ನವದೆಹಲಿ, ಜುಲೈ 23: ಮಂಗಳವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಕೇಂದ್ರದ ಬಜೆಟ್ ಭವಿಷ್ಯದ ಭಾರತದ ಯುವಕರ ಬಜೆಟ್ ಆಗಿದೆ. ಪಧಾನಿ ಮೋದಿ ನೇತೃತ್ವದ ಸರ್ಕಾರದ ಹತ್ತು ವರ್ಷದ ಆರ್ಥಿಕತೆಯ ಸುಧಾರಣೆಯಿಂದ ವಿಶ್ವದಲ್ಲಿಯೇ ಭಾರತ ಬೆಳೆಯುತ್ತಿರುವ ರಾಷ್ಟ್ರ ಎನ್ನುವುದನ್ನು ಈ ಬಜೆಟ್ ತೋರಿಸುತ್ತದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬಜೆಟ್ ಕುರಿತು ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಹಣದುಬ್ಬರ ಸೀಮಿತಗೊಳಿಸಿರುವುದು, ಹೆಚ್ಚು ಜನರಿಗೆ ಕೆಲಸ ಕೊಡಿಸಿರುವುದು ಹತ್ತು ವರ್ಷದಲ್ಲಿ ಮಾಡಿರುವುದರ ಫಲವಾಗಿ ವಿಕಸಿತ ಭಾರತ ಮಾಡುವ ಹತ್ತು ವರ್ಷದ ಫಲವನ್ನು ಬರುವ ದಿನಗಳಲ್ಲಿ ಹೆಚ್ಚಿಗೆ ಮಾಡುವ ನಿಟ್ಟಿನಲ್ಲಿ ಅಭಿವೃದ್ಧಿ ಪರವಾದ ಬಜೆಟ್ ಇದಾಗಿದೆ ಎಂದರು.

Ex CM Basavaraj Bommai Reaction about the Union Budget 2024

ಬಜೆಟ್‌ನಲ್ಲಿ ಕೃಷಿ ವಲಯಕ್ಕೆ 1.5 ಲಕ್ಷ ಕೋಟಿ, ಉದ್ಯೋಗ, ಕೌಶಲ್ಯಾಬಿವೃದ್ಧಿಗೆ 1.5 ಲಕ್ಷ ಕೋಟಿ, ಮುದ್ರಾ ಯೋಜನೆಯಲ್ಲಿ ಸಾಲ ನೀಡುವ ಪ್ರಮಾಣವನ್ನು 10 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಳ ಮಾಡಿರುವುದು, ಗ್ರಾಮೀಣಾಭಿವೃದ್ಧಿ ಅಭಿವೃದ್ಧಿಗೆ 1 ಲಕ್ಷ ಕೋಟಿ, ಬಡವರಿಗೆ 3 ಕೋಟಿ ಮನೆ ಕೊಡುವುದು, ಕೃಷಿ ವಲಯಕ್ಕೆ ಬಹಳ ಒತ್ತು ಕೊಟ್ಟಿದ್ದು, ಕೃಷಿ ಉತ್ಪಾದನೆ ಹೆಚ್ಚಳ ಮತ್ತು ಸಂಸ್ಕರಣೆಗೆ ಆದ್ಯತೆ ನೀಡಿದ್ದಾರೆ ಎಂದು ಹೇಳಿದರು.

ಸೇವಾ ವಲಯದ ಬೆಳವಣಿಗೆಗೆ ಆದ್ಯತೆ

ಉತ್ಪಾದನಾ ವಲಯದಲ್ಲಿ ವಿಶೇಷವಾಗಿ ಸಣ್ಣ ಕೈಗಾರಿಕೆಗೆ ಹೆಚ್ಚಿನ ಒತ್ತು ಕೊಟ್ಟಿದ್ದಾರೆ. ಸೇವಾ ವಲಯವೂ ದೊಡ್ಡ ಪ್ರಮಾಣದಲ್ಲಿ ಬೆಳೆಯಲು ಅನುಕೂಲ ಮಾಡಿಕೊಟ್ಟಿದ್ದಾರೆ. ಮೂರು ವಲಯದಲ್ಲಿ ಹೆಚ್ಚಿಗೆ ಹಣ ಹೂಡಿಕೆ ಮಾಡಲು ದೇಶದ ಆರ್ಥಿಕತೆಯನ್ನು ಇನ್ನಷ್ಟು ಗಟ್ಟಿಗೊಳಿಸುವ ಕೆಲಸ ಮಾಡುತ್ತಿದ್ದಾರೆ.

Ex CM Basavaraj Bommai Reaction about the Union Budget 2024

ಸಾಮಾಜಿಕ ವಲಯಗಳಾದ ಶಿಕ್ಷಣ, ಆರೋಗ್ಯ ಉದ್ಯೋಗಕ್ಕೆ ಹೆಚ್ಚಿನ ಹಣ ನೀಡಿರುವುದು ಸ್ವಾಗತಾರ್ಹ ವಿಷಯ. ಮೂಲ ಸೌಕರ್ಯ ಅಭಿವೃದ್ಧಿಗೆ ಕಳೆದ ಬಾರಿಗಿಂತ ಹೆಚ್ಚು ಹಣ ನೀಡಿದ್ದಾರೆ. ಮಹಿಳೆಯ ಸಬಲೀಕರಣಕ್ಕೆ ವಿಶೇಷ ಕಾನೂನು ಮಾಡಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆ ಎಂದು ತಿಳಿಸಿದರು.

ಕೋಟಿ ಜನರಿಗೆ ಉಚಿತ ವಿದ್ಯುತ್ ಯೋಜನೆ

ವಿದ್ಯುತ್ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು, ನವೀಕರಣ ಇಂಧನಕ್ಕೆ ಮಹತ್ವ ನೀಡಿದ್ದು, ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ ಸುಮಾರು ಒಂದು ಕೋಟಿ ಜನರಿಗೆ ಉಚಿತ ವಿದ್ಯುತ್ ನೀಡುವ ಯೋಜನೆಗೆ ಈಗಾಗಲೇ ಒಂದು ಲಕ್ಷ ಜನರು ಹೆಸರು ನೋಂದಾಯಿಸಿರುವುದು ದಾಖಲಾಗಿದೆ.

ಸಾಮಾನ್ಯ ಜನರ ತೆರಿಗೆ ಕಡಿಮೆ ಮಾಡಿದ್ದು, ಮೂರು ಲಕ್ಷದವರೆಗೂ ಯಾವುದೇ ತೆರಿಗೆಯಿಲ್ಲ. ಮೂರು ಲಕ್ಷದಿಂದ 5 ಲಕ್ಷದವರೆಗೆ ಶೇ 5% ರಷ್ಟು ತೆರಿಗೆ ವಿಧಿಸಿ ತೆರಿಗೆ ಕಡಿಮೆ ಮಾಡಿದ್ದಾರೆ. ಇದರಿಂದ ಮಧ್ಯಮ ವರ್ಗದ ಜನರಿಗೆ ಬಹಳ ಅನುಕೂಲವಾಗಲಿದೆ. ಎಲ್ಲಕ್ಕಿಂತ ಹೆಚ್ಚಾಗಿ ಆರ್ಥಿಕ ಶಿಸ್ತು ಕಾಪಾಡಿರುವುದು ಮುಖ್ಯವಾಗಿದೆ ಎಂದರು.

ವಿತ್ತಿಯ ಕೊರತೆ ಇಳಿಕೆ

ವಿತ್ತಿಯ ಕೊರತೆ 5.3% ರಿಂದ 4.7 ಕ್ಕೆ ಇಳಿಸಿದ್ದು, ಮುಂದಿನ ವರ್ಷ 4.5% ಕ್ಕೆ ಇಳಿಸುವಂಥದ್ದು ಹಾಗೂ ವಿದೇಶಿ ನೇರ ಬಂಡವಾಳ ಹೆಚ್ಚಿನ ಪ್ರಮಾಣದಲ್ಲಿ ಹರಿದು ಬರುವಂತೆ ಅನುಕೂಲ ಮಾಡಿದೆ. ಸರ್ಕಾರದ ಸಾಲ ಕಡಿಮೆ ಮಾಡಿದ್ದು, ಮುಂದಿನ ದಿನಗಳಲ್ಲಿ ದೊಡ್ಡ ಬದಲಾವಣೆಗೆ ಕಾರಣವಾಗಲಿದೆ. ಇದು ಭವಿಷ್ಯದ ಭಾರತದ ಯುವಕರ ಬಜೆಟ್ ಆಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+