ಬಾಹ್ಯಾಕಾಶ ವಿಜ್ಞಾನಿ, ಇಸ್ರೋ ಮಾಜಿ ಅಧ್ಯಕ್ಷ ಯುಆರ್ ರಾವ್ ನಿಧನ
ಬೆಂಗಳೂರು, ಜುಲೈ 24: ಅಂತರರಾಷ್ಟ್ರೀಯ ಖ್ಯಾತಿಯ ಬಾಹ್ಯಾಕಾಶ ವಿಜ್ಞಾನಿ ಯು.ಆರ್.ರಾವ್ ಅವರು ಸೋಮವಾರ ನಿಧನರಾಗಿದ್ದಾರೆ. ಅವರಿಗೆ ಎಂಬತ್ತೈದು ವರ್ಷ ವಯಸ್ಸಾಗಿತ್ತು. ಇಸ್ರೋ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದ ಅವರು, ಪ್ರಮುಖ ಯೋಜನೆಗಳ ರೂವಾರಿ ಆಗಿದ್ದರು.
ಯು.ಆರ್.ರಾವ್ ಹಲವು ಪ್ರಮುಖ ಹುದ್ದೆಗಳನ್ನು ನಿರ್ವಹಿಸಿದ್ದರು. ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಕೂಡ ಕಾರ್ಯ ನಿರ್ವಹಿಸಿದ್ದ ಅವರಿಗೆ ಹಲವಾರು ಅಂತರರಾಷ್ಟ್ರೀಯ ಹಾಗೂ ರಾಷ್ಟ್ರೀಯ ಗೌರವಗಳು ಸಂದಿದ್ದವು.

ಸತೀಶ್ ಧವನ್ ನಂತರ ಇಸ್ರೋ ಅಧ್ಯಕ್ಷರಾಗಿ ಹತ್ತು ವರ್ಷಗಳ ಕಾಲ ರಾವ್ ಅವರು ಜವಾಬ್ದಾರಿ ವಹಿಸಿದ್ದರು. ಕರ್ನಾಟಕದ ಉಡುಪಿಯಲ್ಲಿನ ಹಳ್ಳಿಯೊಂದರಲ್ಲಿ ಜನಿಸಿದ್ದ ರಾವ್, ಎಂಜಿಕೆ ಮೆನನ್, ಸತೀಶ್ ಧವನ್ ಮತ್ತು ವಿಕ್ರಮ್ ಸಾರಾಭಾಯಿ ಅಂಥವರ ಜತೆಗೆ ಕಾರ್ಯ ನಿರ್ವಹಿಸಿದ್ದರು.
ಆರ್ಯಭಟದಿಂದ ಮೊದಲುಗೊಂಡು ಮಂಗಳ ಯಾನದವರೆಗೆ ರಾವ್ ಅವರ ಕೊಡುಗೆ ಅನನ್ಯವಾದುದು ಎಂಬುದನ್ನು ಇಲ್ಲಿ ಸ್ಮರಿಸಬಹುದು. ಈ ವರ್ಷ ಜನವರಿಯಲ್ಲಿ ರಾವ್ ಅವರಿಗೆ ಪದ್ಮ ವಿಭೂಷಣ ಗೌರವ ನೀಡಲಾಗಿತ್ತು. "ನನಗೆ ಇದು ಮರಣೋತ್ತರವಾಗಿ ಸಿಗಬಹುದು ಅಂದುಕೊಂಡಿದ್ದೆ" ಎನ್ನುವ ಮೂಲಕ ರಾವ್ ಅಚ್ಚರಿಗೆ ದೂಡಿದ್ದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications