Get Updates
Get notified of breaking news, exclusive insights, and must-see stories!

ಯುಪಿಎ ಅವಧಿ ವೈಫಲ್ಯದ ಬಗ್ಗೆ ಇನ್ಫೋಸಿಸ್ ನಾರಾಯಣ ಮೂರ್ತಿ ಮಾತು

ನವದೆಹಲಿ, ಸೆಪ್ಟೆಂಬರ್ 24: ಭಾರತದಲ್ಲಿ ಈ ಹಿಂದಿನ ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಅವಧಿಯ ಸರ್ಕಾರವು ಸೂಕ್ತ ಸಮಯದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳದ ಹಿನ್ನೆಲೆ ದೇಶದಲ್ಲಿ ಈಗ ಆರ್ಥಿಕ ಚಟುವಟಿಕೆಗಳೇ ಸ್ಥಗಿತಗೊಂಡಿವೆ ಎಂದು ಐಟಿ ದೈತ್ಯ ಇನ್ಫೋಸಿಸ್‌ನ ಸಹ-ಸಂಸ್ಥಾಪಕ ಎನ್‌ಆರ್ ನಾರಾಯಣ ಮೂರ್ತಿ ಹೇಳಿದ್ದಾರೆ.
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ - ಅಹಮದಾಬಾದ್ (IIMA) ನಲ್ಲಿ ಯುವ ಉದ್ಯಮಿಗಳು ಮತ್ತು ವಿದ್ಯಾರ್ಥಿಗಳೊಂದಿಗಿನ ಸಂವಾದದ ಸಂದರ್ಭದಲ್ಲಿ ಅವರು ಮಾತನಾಡಿದರು. ಯುವ ಮನಸ್ಸುಗಳು ಭಾರತವನ್ನು ವಿಶ್ವದ ಎರಡನೇ ಅತಿದೊಡ್ಡ ಆರ್ಥಿಕತೆಯಾಗಿರುವ ಚೀನಾದ ಯೋಗ್ಯ ಪ್ರತಿಸ್ಪರ್ಧಿಯನ್ನಾಗಿ ಮಾಡಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

"ನಾನು 2008 ಮತ್ತು 2012 ರ ನಡುವೆ ಲಂಡನ್‌ನ HSBC ಮಂಡಳಿಯಲ್ಲಿ ಇದ್ದೆ. ಮೊದಲ ಕೆಲವು ವರ್ಷಗಳಲ್ಲಿ, ಬೋರ್ಡ್ ರೂಂ ಸಭೆಗಳ ಸಮಯದಲ್ಲಿ ಚೀನಾವನ್ನು ಎರಡರಿಂದ ಮೂರು ಬಾರಿ ಉಲ್ಲೇಖಿಸಿದಾಗ, ಭಾರತದ ಹೆಸರನ್ನು ಒಮ್ಮೆ ಉಲ್ಲೇಖಿಸಲಾಗುತ್ತದೆ," ಎಂದು ಹೇಳಿದರು.

Ex-Prime Minister Manmohan Singh Was Extraordinary, But why India Stalled; Narayana Murthy Explained here

ಯುವ ಪೀಳಿಗೆ ಮತ್ತು ಭವಿಷ್ಯದ ಮಾತು:
"ಆದರೆ ದುರದೃಷ್ಟವಶಾತ್, ನಂತರ ಭಾರತಕ್ಕೆ ಏನಾಯಿತು ಎಂದು ನನಗೆ ತಿಳಿದಿಲ್ಲ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಸಾಧಾರಣ ವ್ಯಕ್ತಿ ಮತ್ತು ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ, ಭಾರತವು ಯುಪಿಎ ಅವಧಿಯಲ್ಲಿ ಸ್ಥಗಿತಗೊಂಡಿತು. ಯಾವುದೇ ನಿರ್ಧಾರವನ್ನು ಸೂಕ್ತ ಸಮಯದಲ್ಲಿ ತೆಗೆದುಕೊಳ್ಳುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ," ಎಂದರು.
2012ರಲ್ಲಿ ನಾರಾಯಣ ಮೂರ್ತಿ ಎಚ್‌ಎಸ್‌ಬಿಸಿ ಅನ್ನು ತೊರೆದಾಗ ಸಭೆಗಳಲ್ಲಿ ಭಾರತದ ಹೆಸರನ್ನು ಅಷ್ಟೇನೂ ಉಲ್ಲೇಖಿಸಲಾಗಿಲ್ಲ, ಆದರೆ ಚೀನಾದ ಹೆಸರನ್ನು ಸುಮಾರು 30 ಬಾರಿ ತೆಗೆದುಕೊಳ್ಳಲಾಗಿದೆ. ಆದ್ದರಿಂದ ಜನರು ಇತರ ಯಾವುದೇ ದೇಶದ ಹೆಸರನ್ನು, ವಿಶೇಷವಾಗಿ ಚೀನಾವನ್ನು ಉಲ್ಲೇಖಿಸಿದಾಗ ಭಾರತದ ಹೆಸರನ್ನು ನಮೂದಿಸುವಂತೆ ಮಾಡುವುದು ಯುವ ಪೀಳಿಗೆ ಜವಾಬ್ದಾರಿ ಎಂದು ನಾನು ಭಾವಿಸುತ್ತೇನೆ. ನೀವು ಅದನ್ನು ಮಾಡಬಹುದು ಎಂದು ನಾನು ಭಾವಿಸುತ್ತೇನೆ," ಎಂದು ಮೂರ್ತಿ ಹೇಳಿದರು.

ಮೇಕ್ ಇನ್ ಇಂಡಿಯಾ ಮತ್ತು ಸ್ಟಾರ್ಟಪ್ ಇಂಡಿಯಾ:
ಹೆಚ್ಚಿನ ಪಾಶ್ಚಿಮಾತ್ಯರು ಭಾರತವನ್ನು ಕೀಳಾಗಿ ಕಾಣುತ್ತಿದ್ದ ಕಾಲವಿತ್ತು, ಆದರೆ ಇಂದು ದೇಶದ ಬಗ್ಗೆ ಒಂದು ನಿರ್ದಿಷ್ಟ ಮಟ್ಟದ ಗೌರವವಿದೆ. ಅದು ಈಗ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಅವರ ಪ್ರಕಾರ, ಮನಮೋಹನ್ ಸಿಂಗ್ ಹಣಕಾಸು ಸಚಿವರಾಗಿದ್ದಾಗ 1991 ರ ಆರ್ಥಿಕ ಸುಧಾರಣೆಗಳು ಮತ್ತು ಪ್ರಸ್ತುತ ಭಾರತೀಯ ಜನತಾ ಪಕ್ಷದ ನೇತೃತ್ವದ ಎನ್‌ಡಿಎ ಸರ್ಕಾರದ 'ಮೇಕ್ ಇನ್ ಇಂಡಿಯಾ' ಮತ್ತು 'ಸ್ಟಾರ್ಟಪ್ ಇಂಡಿಯಾ' ಯೋಜನೆಗಳು ದೇಶವನ್ನು ಮುನ್ನಡೆಸಲು ಸಹಾಯ ಮಾಡಿದೆ ಎಂದು ಹೇಳಿದರು.

ನಾನು ನಿಮ್ಮ ವಯಸ್ಸಿನಲ್ಲಿದ್ದಾಗ, ಹೆಚ್ಚಿನ ಜವಾಬ್ದಾರಿ ಇರಲಿಲ್ಲ. ಏಕೆಂದರೆ ನನ್ನಿಂದ ಅಥವಾ ಭಾರತದಿಂದ ಹೆಚ್ಚು ನಿರೀಕ್ಷಿಸಿರಲಿಲ್ಲ. ಇಂದು ನೀವು ದೇಶವನ್ನು ಮುನ್ನಡೆಸುತ್ತೀರಿ ಎಂಬ ನಿರೀಕ್ಷೆಯಿದೆ. ನೀವು ಭಾರತವನ್ನು ಚೀನಾದ ಯೋಗ್ಯ ಪ್ರತಿಸ್ಪರ್ಧಿಯನ್ನಾಗಿ ಮಾಡಬಹುದು ಎಂದು ನಾನು ಭಾವಿಸುತ್ತೇನೆ. ಕೇವಲ 44 ವರ್ಷಗಳಲ್ಲಿ ಚೀನಾ ಭಾರತವನ್ನು ಭಾರಿ ಅಂತರದಿಂದ ಹಿಂದೆ ಸರಿದಿದೆ. ಚೀನಾ ನಂಬಲು ಅಸಾಧ್ಯವಾಗಿದೆ ಎಂದು ನಾರಾಯಣ ಮೂರ್ತಿ ಉಲ್ಲೇಖಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+