ತಾಜ್ಮಹಲ್ ಆವರಣದ ಮಸೀದಿಯಲ್ಲಿ ನಿತ್ಯ ನಮಾಜ್ ಗೆ ನಿಷೇಧ
ಆಗ್ರಾ, ನವೆಂಬರ್ 5: ತಾಜ್ಮಹಲ್ ಆವರಣದಲ್ಲಿರುವ ಮಸೀದಿಯಲ್ಲಿ ಪ್ರತಿನಿತ್ಯ ನಮಾಜ್ ಮಾಡುವುದನ್ನು ನಿಷೇಧಿಸಲಾಗಿದೆ. ಶುಕ್ರವಾರ ಮಾತ್ರ ಹೊರಗಿನವರು ನಮಾಜ್ ಲ್ಲಿ ಪಾಲ್ಗೊಳ್ಳಬಹುದು . ಉಳಿದ ದಿನ ಸ್ಥಳೀಯರನ್ನು ಹೊರತುಪಡಿಸಿ ಹೊರಗಿನವರಿಗೆ ಅವಕಾಶವಿಲ್ಲ ಎಂದು ತಿಳಿಸಲಾಗಿದೆ.
ಈ ಕುರಿತು ಭಾರತದ ಪ್ರಾಚ್ಯವಸ್ತು ಸರ್ವೇಕ್ಷಣಾಲಯ ಆದೇಶ ಒಂದನ್ನು ಹೊರಡಿಸಿದೆ. ಸುಪ್ರೀಂಕೋರ್ಟ್ ಈಗಾಗಲೇ ನೀಡಿರುವ ಆದೇಶಕ್ಕೆ ಅನುಗುಣವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಎಎಸ್ಐ ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಕಾರಣಗಳಿಗಾಗಿ ಸ್ಥಳೀಯರನ್ನು ಹೊರತುಪಡಿಸಿ ಉಳಿದವರನ್ನು ಮಸೀದಿ ಒಳಗೆ ತೆರಳಲು ಅವಕಾಶ ಮಾಡಿಕೊಡುವುದಿಲ್ಲ ಎಂದಿದೆ.

ತಾಜ್ಮಹಲ್ ಶುಕ್ರವಾರ ಸಾರ್ವಜನಿಕರಿಗೆ ಮುಚ್ಚಿರಲಿದೆ
ಶುಕ್ರವಾರ ತಾಜ್ಮಹಲ್ ಸಾರ್ವಜನಿಕರಿಗೆ ಮುಚ್ಚಿರುವುದರಿಂದ ಸ್ಥಳೀಯರು ಮಧ್ಯಾಹ್ನ 2 ಗಂಟೆಯವರೆಗೆ ಯಾವುದೇ ಶುಲ್ಕ ಪಾವತಿಸದೆ ನಮಾಜ್ ನಲ್ಲಿ ಪಾಲ್ಗೊಳ್ಳಬಹುದಾಗಿದೆ.

ಯಾರು ಬೇಕಾದರೂ ಮಸೀದಿಗೆ ತೆರಳಲು ಅವಕಾಶವಿತ್ತು
ಈ ಹಿಂದೆ ಇತರೆ ದಿನಗಳಲ್ಲಿ ತಾಜ್ ಮಹಲ್ ವೀಕ್ಷಣೆಗೆ ಟಿಕೆಟ್ ಪಡೆದವರು ಯಾರು ಬೇಕಾದರೂ ಮಸೀದಿಗೆ ಭೇಟಿ ನೀಡಿ ನಮಾಜ್ ಸಲ್ಲಿಸಲು ಅವಕಾಶವಿತ್ತು. ಇದೀಗ ಟಿಕೆಟ್ ಇದ್ದರೂ ಕೂಡ ಶುಕ್ರವಾರ ಹೊರತುಪಡಿಸಿ ಮಸೀದಿಗೆ ತೆರಳಲು ಅವಕಾಶವಿಲ್ಲ.

ಪ್ರವಾಸಿಗರಿಗೆ ನಿರಾಸೆ
ಭಾನುವಾರ ಅಧಿಕಾರಿಗಳು ವಝ್ ಕೆರೆಯ ಆವರಣವನ್ನು ಮುಚ್ಚಿದ್ದಾರೆ, ಪವಿತ್ರ ನಮಾಜ್ ಸಲ್ಲಿಸುವ ಮುನ್ನ ಇಲ್ಲಿ ಶುಚಿಗೊಂಡು ಪ್ರವಾಸಿಗರು ಪ್ರಾರ್ಥನೆಗೆ ತೆರಳುತ್ತಿದ್ದರು ಇದರಿಂದ ನಿರಾಸೆ ಉಂಟಾಗಿದೆ. ಉಳಿದ ದಿನಗಳಲ್ಲಿ ತಾಜ್ಮಹಲ್ ವೀಕ್ಷಣೆಗೆ ಟಿಕೆಟ್ ಪಡೆದ ಯಾರು ಬೇಕಾದರೂ ಮಸೀದಿಗೆ ಭೇಟಿ ನೀಡಿ ನಮಾಜ್ ಸಲ್ಲಿಸಲು ಅವಕಾಶವಿತ್ತು.

ಮಸೀದಿಯ ಇಮಾಮ್ ಹಾಗೂ ಸಿಬ್ಬಂದಿಗೂ ಕೂಡ ಪ್ರವೇಶವಿಲ್ಲ
ಮಸೀದಿಯ ಇಮಾಮ್ ಹಾಗೂ ಸಿಬ್ಬಂದಿಗೆ ಕೂಡ ಶುಕ್ರವಾರ ಮಾತ್ರ ಬರುವಂತೆ ಸೂಚಿಸಲಾಗಿದೆ. ಮದೀಸಿಯಲ್ಲಿ ಮಪ್ರಾರ್ಥನೆಯ ನೇತೃತ್ವ ವಹಿಸುವ ಇಮಾಮ್ ಸೈಯದ್ ಸಾದಿಕ್ ಅಲಿ ಕುಟುಂಬ ಹಲವು ಸಶಕಗಳಿಂದ ಅಲ್ಲಿದೆ. ಎಎಸ್ಐ ನಿರ್ಧಾರ ಬಗ್ಗೆ ಕುಟುಂಬ ಅಚ್ಚರಿ ವ್ಯಕ್ತಪಡಿಸಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications