ಕೊರೊನಾ ವೈರಸ್ ಲಸಿಕೆ: ಕಾರ್ಯಪಡೆಯ ಸಭೆ ನಾಳೆ
ಲಸಿಕೆ ನಿರ್ವಹಣೆಗೆ ನೇಮಕ ಮಾಡಿರುವ ತಜ್ಞರ ಸಮಿತಿಯು ನೀತಿ ಆಯೋಗದ ಡಾ. ವಿ.ಕೆ. ಪೌಲ್ ನೇತೃತ್ವದಲ್ಲಿ ಬುಧವಾರ ಸಭೆ ಸೇರಲಿದ್ದು, ಕೊರೊನಾ ವೈರಸ್ ಕಾಯಿಲೆಗೆ ರೂಪಿಸುವ ಲಸಿಕೆಗಳನ್ನು ಪಡೆದುಕೊಳ್ಳವ ಹಾಗೂ ಅವುಗಳನ್ನು ನಿರ್ವಹಣೆ ಮಾಡುವ ವ್ಯವಸ್ಥಾಪನಾ ಮತ್ತು ನೈತಿಕ ಅಂಶಗಳನ್ನು ಪರಿಗಣಿಸುವ ಸಂಬಂಧ ಚರ್ಚಿಸಲಿದೆ.
Recommended Video
ರಾಜ್ಯ ಸರ್ಕಾರಗಳು ಮತ್ತು ಲಸಿಕೆ ಉತ್ಪಾದಕರ ವಲಯದ ಪ್ರತಿನಿಧಿಗಳೊಂದಿಗೆ ಈ ಸಮಿತಿ ಸಮಾಲೋಚನೆ ನಡೆಸಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ಮಾಹಿತಿ ನೀಡಿದೆ.
ಎಲ್ಲ ಸಂಬಂಧಿತ ಸಚಿವಾಲಯಗಳು ಮತ್ತು ಸಂಸ್ಥೆಗಳ ಪ್ರತಿನಿಧಿಗಳನ್ನು ಒಳಗೊಂಡ ಪರಿಣತರ ಸಮಿತಿಯನ್ನು ಸ್ಥಾಪಿಸಿರುವ ಕೇಂದ್ರ ಸರ್ಕಾರ, ಅದರ ಮೂಲಕ ಕೊರೊನಾ ವೈರಸ್ ಲಸಿಕೆ ತಯಾರಿಸುವ ಯೋಜನೆಯ ವಿವಿಧ ಆಯಾಮಗಳನ್ನು ಪರಿಶೀಲಿಸುತ್ತಿದೆ. ಖರೀದಿ ಮಾಡಬಹುದಾದ ಲಸಿಕೆಗಳನ್ನು ಗುರುತಿಸುವ, ಅವುಗಳನ್ನು ಹಂಚಿಕೆ ಮಾಡುವ ಹಾಗೂ ನಿರ್ವಹಣೆ ಮಾಡುವ ಜವಾಬ್ದಾರಿ ಸಮಿತಿಯ ಮೇಲೆ ಇದೆ.

ಭಾರತವು ಬಳಸಬಹುದಾದ ಲಸಿಕೆಗಳನ್ನು ಆಯ್ಕೆ ಮಾಡುವ, ಲಕ್ಷಾಂತರ ಡಾಲರ್ ವೆಚ್ಚದ ಲಸಿಕೆಗಳಾದರೆ ಅದಕ್ಕೆ ಸೂಕ್ತ ಹಣಕಾಸು ಯೋಜನೆ ಮಾಡುವ ಹಾಗೂ ಅವುಗಳ ಆಡಳಿತ ನಿರ್ವಹಣೆಯ ಆದ್ಯತೆಯನ್ನು ಗುರುತಿಸುವ ಕಾರ್ಯ ಮಾಡಲಿದೆ. ಈ ಉನ್ನತ ಮಟ್ಟದ ಸಮಿತಿಯನ್ನು ಸಂಪುಟ ಕಾರ್ಯದರ್ಶಿಗಳು ಕಳೆದ ಶುಕ್ರವಾರ ರಚಿಸಿದ್ದರು.
ಇದರಲ್ಲಿ ಎಐಎಂಎಸ್ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ, ವಿದೇಶಾಂಗ ವ್ಯವಹಾರಗಳು, ಜೈವಿಕ ತಂತ್ರಜ್ಞಾನ, ಮಾಹಿತಿ ತಂತ್ರಜ್ಞಾನ, ಆರೋಗ್ಯ ಸೇವೆಗಳ ಮಹಾ ನಿರ್ದೇಶಕರು, ಭಾರತೀಯ ಏಡ್ಸ್ ಸಂಶೋಧನಾ ಸಂಸ್ಥೆ, ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ಮತ್ತು ರಾಜ್ಯಗಳ ಪ್ರತಿನಿಧಿಗಳು ಇದ್ದಾರೆ.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ












Click it and Unblock the Notifications