ಕೊರೊನಾ ಸೋಂಕು ದೂರ ಮಾಡಲು ಪೋಲಿಯೋ ಲಸಿಕೆ ಬಳಕೆ: ತಜ್ಞರು
ಬೆಂಗಳೂರು, ನವೆಂಬರ್ 02: ಕೊವಿಡ್ 19 ರೋಗ ದೂರ ಮಾಡಲು ಪೋಲಿಯೋ ಲಸಿಕೆ ಉತ್ತಮ ಎಂದು ತಜ್ಞರು ತಿಳಿಸಿದ್ದಾರೆ.
ಪೋಲಿಯೋ ಲಸಿಕೆಯು ಮನುಷ್ಯನ ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ವೃದ್ಧಿಸುತ್ತದೆ. ಕೊರೊನಾ ಲಸಿಕೆ ಬರಲು ಇನ್ನಷ್ಟು ಸಮಯ ಬೇಕಾಗಿರುವುದರಿಂದ ಭಾರತ, ಅಮೆರಿಕ, ಇಂಗ್ಲೆಂಡಿನ ತಜ್ಞರು ಹೇಳುವ ಪ್ರಕಾರ ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಲು ಪೋಲಿಯೊ ಲಸಿಕೆಯನ್ನು ಬಳಸಬಹುದು.
ಎಪಿಜೆನೆಟಿಕ್ ಮಾರ್ಪಾಡುಗಳು ಮತ್ತು ಚಯಾಪಚಯ ಪ್ರೋಗ್ರಾಮಿಂಗ್ ಮೂಲಕ ಒಪಿವಿ ತರಬೇತಿ ಪಡೆದ ಸಹಜ ಪ್ರತಿರಕ್ಷೆಯನ್ನು ನಿಯಂತ್ರಿಸುತ್ತದೆ ಎಂದು ಅಧ್ಯಯನ ಹೇಳಿದೆ.

ಬೆಂಗಳೂರಿನ ಎಚ್ಸಿಜಿ ಆಸ್ಪತ್ರೆಯಲ್ಲಿ ಅಧ್ಯಯನ
ಪೋಲಿಯೊ ಲಸಿಕೆ ಮತ್ತು ಕೋವಿಡ್ 19ನ ವೈದ್ಯಕೀಯ ಅಧ್ಯಯನವನ್ನು ಇತ್ತೀಚೆಗೆ ತಜ್ಞರು ಬೆಂಗಳೂರಿನ ಹೆಚ್ ಸಿಜಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಮಾಡಿದ್ದರು. ಕೋವಿಡ್-19 ರೋಗಿಗಳಿಗೆ ಆರಂಭದಲ್ಲಿಯೇ ಪೋಲಿಯೊ ಲಸಿಕೆ ನೀಡಿದರೆ ವೈರಸ್ ನ್ನು ಬೇಗನೆ ಕೊಲ್ಲಲು ಸಹಾಯ ಮಾಡುತ್ತದೆ. ಅಲ್ಲದೆ ವಯಸ್ಸಾದವರಲ್ಲಿ ಸಹ ಕೊರೋನಾ ಸೋಂಕು ತಗಲುವುದನ್ನು ತಡೆಗಟ್ಟುತ್ತದೆ. ಈ ಬಗ್ಗೆ ಪ್ರಾಯೋಗಿಕ ಅಧ್ಯಯನ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಕೊರೊನಾ ವಿರುದ್ಧ ಹೋರಾಡಲು ಪೋಲಿಯೋ ಲಸಿಕೆ
ಕೊರೊನಾ ವಿರುದ್ಧ ಹೋರಾಡಲು 18 ವರ್ಷ ಮೇಲ್ಪಟ್ಟವರಿಗೆ ಪೋಲಿಯೋ ಲಸಿಕೆ ನೀಡಬಹುದು ಎಂದು ವರದಿಯೊಂದು ತಿಳಿಸಿದೆ.

ಜೀವಿತಾವಧಿಯಲ್ಲಿ ಇರುತ್ತದೆ
ಸಾಮಾನ್ಯವಾಗಿ, ಪೋಲಿಯೊ ಲಸಿಕೆ ಜೀವಿತಾವಧಿಯಲ್ಲಿ ಇರುತ್ತದೆ. ಆದರೆ ಪುನಃ ಸಕ್ರಿಯಗೊಳಿಸುವ ಪ್ರಮಾಣವನ್ನು ನೀಡಿದಾಗ, ಇದು ಕೊರೊನಾ ವೈರಸ್ ವಿರುದ್ಧ ರೋಗನಿರೋಧಕ ಶಕ್ತಿಯನ್ನು ನೀಡಲು ಸಹಾಯ ಮಾಡುತ್ತದೆ.

ಅಧ್ಯಯನ ಏನು ಹೇಳುತ್ತೆ?
ಆರಂಭಿಕ ಹಂತದಲ್ಲಿ ಒಬ್ಬ ವ್ಯಕ್ತಿಗೆ ಒಪಿವಿ ನೀಡಿದರೆ, ಅದು ಸೋಂಕಿಗೆ ಒಳಗಾಗುವ ಮೊದಲು, ಅದು ಪ್ರತಿರಕ್ಷಣಾ ವ್ಯವಸ್ಥೆಯನ್ನು ಪುನಃ ಸಕ್ರಿಯಗೊಳಿಸುತ್ತದೆ. ನಮ್ಮ ಅಧ್ಯಯನ ಮತ್ತು ಲಕ್ಷಣಗಳನ್ನು ನೋಡಿದಾಗ ಒಪಿವಿ ಕೆಲಸ ಮಾಡಬಹುದು ಎಂದು ನಮಗನಿಸಿದೆ ಎಂದರು.
ಅಧ್ಯಯನದ ಭಾಗವಾಗಿದ್ದ ಬೆಂಗಳೂರಿನ ಹೆಡ್ ನೆಕ್ ಸರ್ಜಿಕಲ್ ಆಂಕೊಲಾಜಿ ಮತ್ತು ಅಸೋಸಿಯೇಟ್ ಡೀನ್ - ಸೆಂಟರ್ ಆಫ್ ಅಕಾಡೆಮಿಕ್ಸ್ ಅಂಡ್ ರಿಸರ್ಚ್ ಎಚ್ಸಿಜಿ ಕ್ಯಾನ್ಸರ್ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಡಾ. ವಿಶಾಲ್ ರಾವ್ ಮಾತನಾಡಿ ನಾವು ಜೀನೋಮಿಕ್ ಅಧ್ಯಯನವನ್ನು ನೋಡಿದಾಗ, ಒಪಿವಿ ಮತ್ತು ಕೊರೊನಾ ವೈರಸ್ ಎರಡೂ ಆರ್ ಎನ್ ಎ ವೈರಸ್.-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications