ಅಬ್ಬಬ್ಬಾ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
ಭಾರತೀಯ ಷೇರು ಮಾರುಕಟ್ಟೆ ಹೊಸ ದಾಖಲೆಯ ಬರೆದಿದ್ದು ರಾಕೆಟ್ ವೇಗದಲ್ಲಿ ಮುನ್ನುಗ್ಗುತ್ತಿದೆ. ಭಾರತೀಯ ಷೇರು ಮಾರುಕಟ್ಟೆಗೆ ಹುಮ್ಮಸ್ಸು ಬಂದಿದೆ. ಸಾರ್ವತ್ರಿಕ ಚುನಾವಣೆ ಬಂದ ಸಮಯಕ್ಕೆ ಷೇರು ಪೇಟೆ ಮತ್ತಷ್ಟು ಏರಿಕೆ ಕಂಡಿದೆ. 1 ವಾರದಿಂದ ಷೇರು ಮಾರುಕಟ್ಟೆಯಲ್ಲಿ ಭರ್ಜರಿ ಲಾಭವೆ ಮಾಡುತ್ತಿದ್ದಾರೆ ಜನ. ಇಂದು ಒಂದೇ ದಿನ ಸೆನ್ಸೆಕ್ಸ್ ದಾಖಲೆಯ ಪ್ರಮಾಣದಲ್ಲಿ ಏರಿಕೆ ಕಂಡಿದೆ.
ಷೇರು ಮಾರುಕಟ್ಟೆಯಲ್ಲಿ ಪ್ರಮುಖ ಸೂಚ್ಯಂಕ ಬಿಎಸ್ಇ ಸೆನ್ಸೆಕ್ಸ್ (BSE Sensex) & ಎನ್ಎಸ್ಇ ನಿಫ್ಟಿ ಐತಿಹಾಸಿಕ ಹಂತ ತಲುಪಿವೆ. ಬಿಎಸ್ಇ ಸೆನ್ಸೆಕ್ಸ್ ಇಂದು ಗರಿಷ್ಠವಾಗಿ, 1,000 ಅಂಕ ಏರಿಕೆ ಕಂಡು 74,000 ಗಡಿ ದಾಟಿತ್ತು. ಈ ನಡುವೆ ಎನ್ಎಸ್ಇ ನಿಫ್ಟಿ ಅಥವಾ ನಿಫ್ಟಿ-50 300ಕ್ಕೂ ಹೆಚ್ಚು ಅಂಕಗಳ ಏರಿಕೆ ಕಂಡು 22,400 ಅಂಕಕ್ಕೂ ತಲುಪಿತ್ತು. ಇದು ಹೊಸ ದಾಖಲೆಯನ್ನ ಸೃಷ್ಟಿಸಿದೆ ಅಲ್ಲದೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೂಡ ಭಾರತದ ಷೇರು ಪೇಟೆ ಹೊಸ ಸಾಧನೆ ಮಾಡಲು ಕಾರಣವಾಗಿದೆ.

ಹೂಡಿಕೆದಾರರಿಗೆ ಹೇಗೆ ಲಾಭ?
ದೇಶದ ಆರ್ಥಿಕತೆಯಲ್ಲಿ ಹೆಚ್ಚು ದುಡ್ಡು ಓಡಾಡುವ ಜಾಗ ಷೇರು ಮಾರುಕಟ್ಟೆ ಅಂತಾರೆ. ಆದರೆ ಈ ಮಾತು ಅದೆಷ್ಟು ನಿಜಾನೋ ಅಥವಾ ಅದೆಷ್ಟು ಸುಳ್ಳೋ ಗೊತ್ತಿಲ್ಲ. ಆದರೂ ಷೇರು ಮಾರುಕಟ್ಟೆಯ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಈಗ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದ್ದು, ಭಾರತದ ಷೇರು ಮಾರುಕಟ್ಟೆ ಮತ್ತೆ ಸಾರ್ವಕಾಲಿಕ ದಾಖಲೆ ಬರೆದಿದೆ. ಹೂಡಿಕೆದಾರರಿಗೆ, ಕೇವಲ 1 ದಿನದಲ್ಲಿ ಲಕ್ಷ ಲಕ್ಷ ಕೋಟಿ ರೂಪಾಯಿ ಲಾಭ ಆಗಿದೆ. ಇಂದು ನಿಫ್ಟಿ 50 ಭರ್ತಿ 300ಕ್ಕೂ ಹೆಚ್ಚು ಅಂಕ ಏರಿಕೆ ಕಂಡು ಇತಿಹಾಸ ನಿರ್ಮಾಣ ಮಾಡಿತ್ತು. ಕೊನೆಗೆ ಒಂದಷ್ಟು ಅಂಕ ಕುಸಿತ ಕಂಡರೂ ಅಂತಿಮವಾಗಿ 203 ಅಂಕ ಏರಿಕೆ ಮೂಲಕ 22,326ಕ್ಕೆ ತನ್ನ ದಿನದ ವಹಿವಾಟು ಮುಗಿಸಿದೆ ನಿಫ್ಟಿ-50.
ಏರಿಕೆ ಕಂಡು ಹೂಡಿಕೆದಾರರು ಖುಷ್!
ಸಾಮಾನ್ಯವಾಗಿ ಷೇರುಪೇಟೆ ಮೇಲೆ ಲೋಕಸಭೆ ಚುನಾವಣೆ ಪರಿಣಾಮ ಬೀರುತ್ತೆ ಎಂಬ ಮಾತುಗಳು ಇವೆ. ಆದ್ರೆ ಇಂದಿನ ಮಾರುಕಟ್ಟೆ ಏರಿಕೆಗೆ ನಿಖರ ಕಾರಣಗಳು ಇನ್ನೂ ಸ್ಪಷ್ಟವಾಗಿಲ್ಲ. ಆದ್ರೆ ವಿದೇಶಿ ಷೇರು ಮಾರುಕಟ್ಟೆಗಳು ಈಗ ಭಯದಲ್ಲಿ ಇರುವಾಗ ಭಾರತ ಷೇರು ಪೇಟೆ, ಉತ್ತಮವಾಗಿ ವಹಿವಾಟು ನಡೆಸುತ್ತಿದೆ. ಅಲ್ಲದೆ ಹೂಡಿಕೆ ಮಾಡಿದ ಜನರಿಗೂ ಉತ್ತಮ ಲಾಭವನ್ನೇ ತಂದುಕೊಡುತ್ತಿದೆ. ಇದು ಹೂಡಿಕೆದಾರರಿಗೆ ಲಾಟರಿ ಬಂದಂತೆ ಆಗಿದೆ. ಅಲ್ಲದೆ ಈ ಮೂಲಕ ಭಾರತೀಯ ಷೇರು ಪೇಟೆಯ ಮೇಲೆ ಹೂಡಿಕೆದಾರರ ನಂಬಿಕೆ ಕೂಡ ಹೆಚ್ಚಾಗಿದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications