ಬಿಜೆಪಿ VS ಕಾಂಗ್ರೆಸ್: ಚುನಾವಣೆಯಲ್ಲಿ ಯಾರೂ ಬೇಡ ಎಂದ ಮತದಾರ!
ಇಂದು ಹೊರಬಿದ್ದ 4 ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಭರ್ಜರಿ ಗೆಲುವನ್ನ ದಾಖಲಿಸಿದೆ. ಮಧ್ಯಪ್ರದೇಶ ರಾಜ್ಯದಲ್ಲಿ 160ಕ್ಕೂ ಹೆಚ್ಚು ಸ್ಥಾನ ಪಡೆದಿರುವ ಬಿಜೆಪಿ ಅಧಿಕಾರ ಗದ್ದುಗೆಗೆ ಏರಲು ಸಿದ್ಧವಾಗಿದೆ. ರಾಜಸ್ಥಾನದಲ್ಲಿ 115 ಸ್ಥಾನ ಪಡೆದು ಛತ್ತೀಸ್ಗಢ ರಾಜ್ಯದಲ್ಲಿ 54 ಸ್ಥಾನ ಪಡೆದಿದೆ ಬಿಜೆಪಿ. ಹೀಗೆ 3 ರಾಜ್ಯದಲ್ಲಿ ಭರ್ಜರಿ ಜಯ ಸಾಧಿಸಿದೆ ಬಿಜೆಪಿ. ಕಾಂಗ್ರೆಸ್ ತೆಲಂಗಾಣದಲ್ಲಿ ಗೆದ್ದು ಬೀಗಿದ್ದು, ಈ 4 ರಾಜ್ಯದಲ್ಲಿ ಯಾವ ಪಕ್ಷಕ್ಕೂ ವೋಟ್ ಹಾಕದಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ?
ಒಂದು ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಅಥವಾ ಯಾವುದೇ ಅಭ್ಯರ್ಥಿಗೂ ಮತವನ್ನ ಹಾಕದೇ ಇರುವವರು, ನೋಟಾ ಮತ ಚಲಾವಣೆ ಮಾಡಬಹುದು. ಹೀಗೆ ನೋಟಾ ಬಗ್ಗೆ ಈ ಹಿಂದೆ ಸಾಕಷ್ಟು ಜ್ಞಾನದ ಕೊರತೆ ಇತ್ತು. ಆದರೆ ಆಧುನಿಕ ಭಾರತದಲ್ಲಿ 'ನೋಟಾ'ಗೆ ಸಾಕಷ್ಟು ಮತದಾರರು ಒಲವು ವ್ಯಕ್ತಪಡಿಸುತ್ತಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಕೂಡ ಸಾಕಷ್ಟು ಮತದಾರರು 'ನೋಟಾ'ಗೆ ವೋಟ್ ಹಾಕಿದ್ದರು. ಇದೀಗ 4 ರಾಜ್ಯ ಚುನಾವಣೆಯಲ್ಲಿ ನೋಟಾ ಪರ ಮತ ಚಲಾವಣೆ ಮಾಡಿರುವ ಮತದಾರರ ಸಂಖ್ಯೆ ಎಷ್ಟು ಗೊತ್ತಾ?

'ನೋಟಾ' ಮತದಾರರ ಸಂಪೂರ್ಣ ವಿವರ!
ಇಂದು ಹೊರಬಿದ್ದಿರುವ 4 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ 'ನೋಟಾ' ಅಬ್ಬರ ಜೋರಾಗಿದೆ. ಈಗ ಅಖಾಡದಲ್ಲಿ ಇದ್ದ ಎಲ್ಲ ಪಕ್ಷದ & ಸ್ವತಂತ್ರ ಅಭ್ಯರ್ಥಿಗಳನ್ನ ಮತದಾರರು ನೋಟಾ ಆಯ್ಕೆ ಮೂಲಕ ತಿರಸ್ಕರಿಸಿದ್ದಾರೆ. ಛತ್ತೀಸ್ಗಢ ರಾಜ್ಯದಲ್ಲಿ ಒಟ್ಟು ಶೇಕಡಾ 1.28 ರಷ್ಟು ಜನ 'ನೋಟಾ' ಪರವಾಗಿ ಮತ ಚಲಾವಣೆ ಮಾಡಿದ್ದಾರೆ. ಹಾಗೂ ಮಧ್ಯಪ್ರದೇಶ ರಾಜ್ಯದಲ್ಲಿ ಶೇಕಡಾ 0.99 ರಷ್ಟು ಮತದಾರರು, ರಾಜಸ್ಥಾನದಲ್ಲಿ ಶೇಕಡಾ 0.97 ರಷ್ಟು, ತೆಲಂಗಾಣ ರಾಜ್ಯದಲ್ಲಿ ಶೇಕಡಾ 0.73 ರಷ್ಟು ಮತದಾರರು ನೋಟಾ ಪರ ಮತ ಹಾಕಿದ್ದಾರೆ.
ಹೊಸ ಬದಲಾವಣೆಯತ್ತ ದೇಶ?
ಒಟ್ನಲ್ಲಿ ದೇಶದಲ್ಲಿ ಈಗ ನೋಟಾ ಮತ ಹಾಕುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗೆ ದೇಶ ನೋಟಾ ಮತದಾನದ ಬಗ್ಗೆ ಜಾಗೃತವಾಗುತ್ತಿದೆ ಎನ್ನುವ ಮಾತು ಕೂಡ ಕೇಳಿಬಂದಿದೆ. ಈ ಮೂಲಕ, ಮುಂಬರುವ ದಿನಗಳಲ್ಲಿ ಮತದಾನದಲ್ಲಿ ಮತ್ತಷ್ಟು ಸುಧಾರಣೆ ಸಾಧ್ಯ ಅಂತಾ ಹೇಳಬಹುದು. ಹಾಗೆ ಹಲವು ರಾಜ್ಯಗಳಲ್ಲಿ ಮತದಾನದ ಪ್ರಮಾಣ ಕೂಡ ಹೆಚ್ಚಾಗುತ್ತಿದೆ. ಅದರಲ್ಲೂ ಉತ್ತರ ಭಾರತದ ರಾಜ್ಯಗಳಲ್ಲಿ, ಮತದಾನದ ಪ್ರಮಾಣ ಹೆಚ್ಚಾಗುತ್ತಿರುವುದು ಈಗ ಹೊಸ ಬದಲಾವಣೆಯ ಸಂಕೇತ ಎನ್ನಬಹುದು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ?












Click it and Unblock the Notifications