ಬಿಜೆಪಿ VS ಕಾಂಗ್ರೆಸ್: ಯಾವ ರಾಜ್ಯದಲ್ಲಿ ಯಾವ ಪಕ್ಷಕ್ಕೆ ಎಷ್ಟು ವೋಟ್?
ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸೋಲು ಕಂಡ ಬಳಿಕ ಕೇಂದ್ರ ಬಿಜೆಪಿ ನಾಯಕರು ಅಲರ್ಟ್ ಆಗಿದ್ದಾರೆ. ಲೋಕಸಭೆ ಚುನಾವಣೆಗೆ ಮೊದಲು ಕರ್ನಾಟಕ ಸೋಲು ಬಿಜೆಪಿಗೆ ದೊಡ್ಡ ಆಘಾತ ನೀಡಿತ್ತು. ಈ ಆಘಾತವನ್ನು ಇಂದು ಹೊರಬಿದ್ದಿರುವ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್ಗಢ ಚುನಾವಣಾ ಫಲಿತಾಂಶಗಳು ದೂರ ಮಾಡಿವೆ. ಹಾಗೇ ಬಿಜೆಪಿ ಮತ್ತೆ ಲಯಕ್ಕೆ ಮರಳಿದ್ದು, ಲೋಕಸಭೆಗೆ ರಣಕಹಳೆ ಮೊಳಗಿಸಿದೆ.
ಛತ್ತೀಸ್ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ವಿಧಾನಸಭೆ ಚುನಾವಣೆ ಬಗ್ಗೆ ಬಿಜೆಪಿ ಸೀರಿಯಸ್ ಆಗಿತ್ತು. ಅದರಲ್ಲೂ ಲೋಕಸಭೆ ಚುನಾವಣೆಗೆ ಮೊದಲು ನಡೆಯುವ ಪಂಚರಾಜ್ಯ ಚುನಾವಣೆ ಮುಖ್ಯ ಕೂಡ ಆಗಿತ್ತು. ಹೀಗೆ ದೊಡ್ಡ ನಿರ್ಧಾರ ಕೈಗೊಳ್ಳುವ ಅನಿವಾರ್ಯತೆಯು ಬಿಜೆಪಿಗೆ ಎದುರಾಗಿತ್ತು. ಅಲ್ದೆ ಕಾಂಗ್ರೆಸ್ ಸೇರಿ ವಿರೋಧ ಪಕ್ಷಗಳನ್ನು ಎದುರಿಸಲು ಬಿಜೆಪಿಯ ವರಿಷ್ಠರೇ ಫೀಲ್ಡ್ಗೆ ಇಳಿದಿದ್ದರು. ಈಗ ಇವರ ಹೋರಾಟ ಹಾಗೂ ಕ್ಯಾಂಪೇನ್ ಸಿಕ್ಕಾಪಟ್ಟೆ ವರ್ಕೌಟ್ ಆಗಿದೆ.

4 ರಾಜ್ಯದಲ್ಲಿ ಯಾರಿಗೆ ಎಷ್ಟು ಮತ?
ಹೌದು, ಬಿಜೆಪಿ ನೇತೃತ್ವದ ಎನ್ಡಿಎಗೆ ಈ ಬಾರಿ ಸೋಲಿನ ಕಹಿ ಗ್ಯಾರಂಟಿ ಅಂತಾ ಹೇಳುವಾಗ ಹೊಸ ಅಲೆ ಮೂಡಿದೆ. ಪಂಚರಾಜ್ಯ ಚುನಾವಣೆ ಪೈಕಿ ಸಮೀಕ್ಷೆ ಹೇಳಿದ್ದಂತೆ ಪಕ್ಕಾ ಕಾಂಗ್ರೆಸ್ ಗೆಲ್ಲುತ್ತೆ ಅನ್ನೋ ವಾತಾವರಣ ಸೃಷ್ಟಿ ಆಗಿತ್ತು. ಆದರೂ ಅದನ್ನೆಲ್ಲಾ ಬದಲಾಯಿಸಿ ಇತಿಹಾಸ ಬರೆಯೋಕೆ ಬಿಜೆಪಿ ಕೇಂದ್ರ ನಾಯಕರು ಆಯ್ಕೆ ಮಾಡಿಕೊಂಡಿದ್ದು 'ಕ್ರಾಂತಿಕಾರಿ ಹೆಜ್ಜೆಯನ್ನ. ಇದೇ ಹೆಜ್ಜೆ ಇದೀಗ ಭರ್ಜರಿ ಮತ ತರಿಸಿಕೊಟ್ಟಿದೆ. ಮಧ್ಯಪ್ರದೇಶ ರಾಜ್ಯದಲ್ಲಿ ಬಿಜೆಪಿ ಪಕ್ಷ ಬರೋಬ್ಬರಿ ಶೇಕಡಾ 48.74 ರಷ್ಟು ಮತ ಪಡೆದಿದ್ರೆ ಕಾಂಗ್ರೆಸ್ ಕೇವಲ ಶೇಕಡಾ 40.42 ರಷ್ಟು ಮತ ಪಡೆದಿದೆ. ಈ ಮೂಲಕ 8.30 ರಷ್ಟು ಮತ ಗಳಿಕೆ ಅಂತರ ಇದೆ.
ರಾಜಸ್ಥಾನ ರಾಜ್ಯದಲ್ಲಿ ಬಿಜೆಪಿ ಶೇಕಡಾ 41.79 ರಷ್ಟು ಮತ ಪಡೆದಿದೆ ಹಾಗೂ ಕಾಂಗ್ರೆಸ್ಗೆ ಶೇಕಡಾ 39.50 ರಷ್ಟು ಮತ ಬಿದ್ದಿದೆ. ಹೀಗೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ರಾಜಸ್ಥಾನ ರಾಜ್ಯದಲ್ಲಿ ಶೇಕಡಾ 2.29 ರಷ್ಟು ಮತ ಹಂಚಿಕೆ ವ್ಯತ್ಯಾಸ ಕಂಡುಬಂದಿದೆ. ಇನ್ನುಳಿದಂತೆ ಛತ್ತೀಸ್ಗಢ ರಾಜ್ಯದಲ್ಲಿ ಬಿಜೆಪಿ ಶೇಕಡಾ 46.30 ರಷ್ಟು ಮತ ಪಡೆದ್ರೆ, ಕಾಂಗ್ರೆಸ್ಗೆ ಶೇಕಡಾ 42.12 ರಷ್ಟು ವೋಟ್ ಬಿದ್ದಿದೆ. ಈ ಮೂಲಕ ಮತ ಗಳಿಕೆ ಪ್ರಮಾಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಶೇಕಡಾ 2.29 ರಷ್ಟು ವ್ಯತ್ಯಾಸ ಕಂಡುಬಂದಿದೆ.
-
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications