ಬಿಜೆಪಿ VS ಕಾಂಗ್ರೆಸ್: ಯಾವ ರಾಜ್ಯದಲ್ಲಿ ಯಾವ ಪಕ್ಷಕ್ಕೆ ಎಷ್ಟು ವೋಟ್?
ಕರ್ನಾಟಕದಲ್ಲಿ ಬಿಜೆಪಿ ಹೀನಾಯ ಸೋಲು ಕಂಡ ಬಳಿಕ ಕೇಂದ್ರ ಬಿಜೆಪಿ ನಾಯಕರು ಅಲರ್ಟ್ ಆಗಿದ್ದಾರೆ. ಲೋಕಸಭೆ ಚುನಾವಣೆಗೆ ಮೊದಲು ಕರ್ನಾಟಕ ಸೋಲು ಬಿಜೆಪಿಗೆ ದೊಡ್ಡ ಆಘಾತ ನೀಡಿತ್ತು. ಈ ಆಘಾತವನ್ನು ಇಂದು ಹೊರಬಿದ್ದಿರುವ ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್ಗಢ ಚುನಾವಣಾ ಫಲಿತಾಂಶಗಳು ದೂರ ಮಾಡಿವೆ. ಹಾಗೇ ಬಿಜೆಪಿ ಮತ್ತೆ ಲಯಕ್ಕೆ ಮರಳಿದ್ದು, ಲೋಕಸಭೆಗೆ ರಣಕಹಳೆ ಮೊಳಗಿಸಿದೆ.
ಛತ್ತೀಸ್ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ವಿಧಾನಸಭೆ ಚುನಾವಣೆ ಬಗ್ಗೆ ಬಿಜೆಪಿ ಸೀರಿಯಸ್ ಆಗಿತ್ತು. ಅದರಲ್ಲೂ ಲೋಕಸಭೆ ಚುನಾವಣೆಗೆ ಮೊದಲು ನಡೆಯುವ ಪಂಚರಾಜ್ಯ ಚುನಾವಣೆ ಮುಖ್ಯ ಕೂಡ ಆಗಿತ್ತು. ಹೀಗೆ ದೊಡ್ಡ ನಿರ್ಧಾರ ಕೈಗೊಳ್ಳುವ ಅನಿವಾರ್ಯತೆಯು ಬಿಜೆಪಿಗೆ ಎದುರಾಗಿತ್ತು. ಅಲ್ದೆ ಕಾಂಗ್ರೆಸ್ ಸೇರಿ ವಿರೋಧ ಪಕ್ಷಗಳನ್ನು ಎದುರಿಸಲು ಬಿಜೆಪಿಯ ವರಿಷ್ಠರೇ ಫೀಲ್ಡ್ಗೆ ಇಳಿದಿದ್ದರು. ಈಗ ಇವರ ಹೋರಾಟ ಹಾಗೂ ಕ್ಯಾಂಪೇನ್ ಸಿಕ್ಕಾಪಟ್ಟೆ ವರ್ಕೌಟ್ ಆಗಿದೆ.

4 ರಾಜ್ಯದಲ್ಲಿ ಯಾರಿಗೆ ಎಷ್ಟು ಮತ?
ಹೌದು, ಬಿಜೆಪಿ ನೇತೃತ್ವದ ಎನ್ಡಿಎಗೆ ಈ ಬಾರಿ ಸೋಲಿನ ಕಹಿ ಗ್ಯಾರಂಟಿ ಅಂತಾ ಹೇಳುವಾಗ ಹೊಸ ಅಲೆ ಮೂಡಿದೆ. ಪಂಚರಾಜ್ಯ ಚುನಾವಣೆ ಪೈಕಿ ಸಮೀಕ್ಷೆ ಹೇಳಿದ್ದಂತೆ ಪಕ್ಕಾ ಕಾಂಗ್ರೆಸ್ ಗೆಲ್ಲುತ್ತೆ ಅನ್ನೋ ವಾತಾವರಣ ಸೃಷ್ಟಿ ಆಗಿತ್ತು. ಆದರೂ ಅದನ್ನೆಲ್ಲಾ ಬದಲಾಯಿಸಿ ಇತಿಹಾಸ ಬರೆಯೋಕೆ ಬಿಜೆಪಿ ಕೇಂದ್ರ ನಾಯಕರು ಆಯ್ಕೆ ಮಾಡಿಕೊಂಡಿದ್ದು 'ಕ್ರಾಂತಿಕಾರಿ ಹೆಜ್ಜೆಯನ್ನ. ಇದೇ ಹೆಜ್ಜೆ ಇದೀಗ ಭರ್ಜರಿ ಮತ ತರಿಸಿಕೊಟ್ಟಿದೆ. ಮಧ್ಯಪ್ರದೇಶ ರಾಜ್ಯದಲ್ಲಿ ಬಿಜೆಪಿ ಪಕ್ಷ ಬರೋಬ್ಬರಿ ಶೇಕಡಾ 48.74 ರಷ್ಟು ಮತ ಪಡೆದಿದ್ರೆ ಕಾಂಗ್ರೆಸ್ ಕೇವಲ ಶೇಕಡಾ 40.42 ರಷ್ಟು ಮತ ಪಡೆದಿದೆ. ಈ ಮೂಲಕ 8.30 ರಷ್ಟು ಮತ ಗಳಿಕೆ ಅಂತರ ಇದೆ.
ರಾಜಸ್ಥಾನ ರಾಜ್ಯದಲ್ಲಿ ಬಿಜೆಪಿ ಶೇಕಡಾ 41.79 ರಷ್ಟು ಮತ ಪಡೆದಿದೆ ಹಾಗೂ ಕಾಂಗ್ರೆಸ್ಗೆ ಶೇಕಡಾ 39.50 ರಷ್ಟು ಮತ ಬಿದ್ದಿದೆ. ಹೀಗೆ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ರಾಜಸ್ಥಾನ ರಾಜ್ಯದಲ್ಲಿ ಶೇಕಡಾ 2.29 ರಷ್ಟು ಮತ ಹಂಚಿಕೆ ವ್ಯತ್ಯಾಸ ಕಂಡುಬಂದಿದೆ. ಇನ್ನುಳಿದಂತೆ ಛತ್ತೀಸ್ಗಢ ರಾಜ್ಯದಲ್ಲಿ ಬಿಜೆಪಿ ಶೇಕಡಾ 46.30 ರಷ್ಟು ಮತ ಪಡೆದ್ರೆ, ಕಾಂಗ್ರೆಸ್ಗೆ ಶೇಕಡಾ 42.12 ರಷ್ಟು ವೋಟ್ ಬಿದ್ದಿದೆ. ಈ ಮೂಲಕ ಮತ ಗಳಿಕೆ ಪ್ರಮಾಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಶೇಕಡಾ 2.29 ರಷ್ಟು ವ್ಯತ್ಯಾಸ ಕಂಡುಬಂದಿದೆ.
-
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ












Click it and Unblock the Notifications