Nitin Nabin: ಬಿಜೆಪಿಗೆ ನೂತನ ಸಾರಥಿ, ನಿತಿನ್ ನಬಿನ್ ನಡೆದುಬಂದ ಹಾದಿ
ಭಾರತದ ರಾಜಕೀಯದಲ್ಲಿ 2014 ತನಕ ಒಂದು ಲೆಕ್ಕ, 2014 ಲೋಕಸಭೆ ಚುನಾವಣೆ ನಂತರ ಒಂದು ಲೆಕ್ಕ ಎನ್ನಬಹುದು. ಬಿಜೆಪಿ ನೇತೃತ್ವದಲ್ಲಿ ಎನ್ಡಿಎ ಒಕ್ಕೂಟ ಯಾವಾಗ ಭರ್ಜರಿ ಬಹುಮತ ಪಡೆದು ಗೆದ್ದು ಬಂದು ಅಧಿಕಾರ ಹಿಡಿದಿತ್ತೋ, ಅಲ್ಲಿಂದ ಮುಂದೆ ಭಾರಿ ದೊಡ್ಡ ಸಂಚಲನ ಸೃಷ್ಟಿಯಾಗಿತ್ತು. ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಸಾಲು ಸಾಲು ಸೋಲು ಕಾಣುತ್ತಾ ಬಂದವು. ಬಿಜೆಪಿ ಪ್ರತಿ ಚುನಾವಣೆಗೂ ಮತ್ತಷ್ಟು ಬಲಿಷ್ಠವಾಗುತ್ತಾ ಬಂದಿತ್ತು, ಹೀಗೆ ಸತತ 3 ಬಾರಿ ಲೋಕಸಭಾ ಚುನಾವಣೆ ಗೆದ್ದು ಬಿಜೆಪಿ ಅಧಿಕಾರ ನಡೆಸುತ್ತಿದೆ. ಇಂತಿಪ್ಪ ಬಿಜೆಪಿಗೆ ನೂತನ ಸಾರಥಿ ಆಗಮನವಾಗಿದ್ದು, ನಿತಿನ್ ನಬಿನ್ ಅವರ ರಾಜಕೀಯ ಜೀವನ ರೋಚಕವಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ಆಗಿರುವ ನಿತಿನ್ ನಬಿನ್ ಈ ಹುದ್ದೆಯನ್ನು ಅಲಂಕರಿಸಲಿರುವ ಅತಿ ಚಿಕ್ಕ ವಯಸ್ಸಿನ ನಾಯಕ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ನಿತಿನ್ ನಬಿನ್ 26ನೇ ವಯಸ್ಸಿಗೆ ಶಾಸಕರಾಗಿ ಆಯ್ಕೆಯಾದವರು. ಅಲ್ಪ ಅವಧಿಯಲ್ಲಿಯೇ ಏಳಿಗೆ ಸಾಧಿಸಿ ರಾಷ್ಟ್ರೀಯ ನಾಯಕರ ಗಮನ ಸೆಳೆದು ಹಂತ ಹಂತವಾಗಿ ಮೇಲೆ ಬಂದರು. ಸುಮಾರು ಒಂದು ತಿಂಗಳ ಹಿಂದೆ, ಎಂದರೆ 2025 ಡಿಸೆಂಬರ್ 14ಕ್ಕೆ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷರನ್ನಾಗಿ ನೇಮಿಸಲಾಯಿತು ಇವರನ್ನು. ಇದೀಗ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದ್ದಾರೆ.

ಆರ್ಎಸ್ಎಸ್ ಜೊತೆಗೆ ಉತ್ತಮ ಬಾಂಧವ್ಯ
ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ತಂದೆ ನಬಿನ್ ಕಿಶೋರ್ ಸಿನ್ಹಾ ಅವರು ಆರ್ಎಸ್ಎಸ್ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದ್ದವರು. ತಂದೆ ನಿಧನದ ನಂತರ 2006ರಲ್ಲಿ ಪಟ್ನಾ ವಿಧಾನಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅಖಾಡ ಪ್ರವೇಶ ಮಾಡುವ ಮೂಲಕ, ರಾಜಕೀಯ ಲೋಕದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದರು. 26ನೇ ವಯಸ್ಸಿಗೆ ಶಾಸಕರಾಗಿ ಆಯ್ಕೆಯಾಗಿ ರಾಷ್ಟ್ರದ ಗಮನ ಸೆಳೆದಿದ್ದರು. ಆ ನಂತರ ನಿತಿನ್ ನಬಿನ್ ಅವರನ್ನು ಗುರುತಿಸಲು ಶುರು ಮಾಡಿದ ಬಿಜೆಪಿಯ ರಾಷ್ಟ್ರೀಯ ನಾಯಕರು, ಹಂತ ಹಂತವಾಗಿ ಉನ್ನತ ಹುದ್ದೆಗಳನ್ನು ನೀಡುತ್ತಾ ಬಂದರು.
ನಿತಿನ್ ನಬಿನ್ ಚುನಾವಣಾ ಸಾಧನೆಗಳು
2023 ನವೆಂಬರ್ನಲ್ಲಿ ನಡೆದ ಛತ್ತೀಸ್ಗಢ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಸಹ ಉಸ್ತುವಾರಿಯಾಗಿ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ಸು ಕಂಡಿದ್ದರು. 2024ರ ಲೋಕಸಭಾ ಚುನಾವಣೆಯಲ್ಲೂ ನಿತಿನ್ ನಬಿನ್ ಅವರ ಸಾಧನೆ ದೊಡ್ಡದಾಗಿತ್ತು, ಛತ್ತೀಸ್ಗಢದ 11 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿಗೆ 10 ಸ್ಥಾನ ಸಿಗುವಲ್ಲಿ ನಿತಿನ್ ನಬಿನ್ ಕಾರ್ಯತಂತ್ರ ಫಲ ನೀಡಿತ್ತು. ಇದನ್ನು ಗಮನಿಸಿ ನಿತಿನ್ ನಬಿನ್ ಅವರನ್ನು ಕಳೆದ ತಿಂಗಳು ಎಂದರೆ 2025 ಡಿಸೆಂಬರ್ 14ಕ್ಕೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಲಾಗಿತ್ತು. ಇದೀಗ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ ಮಾಡಿ ಬಿಜೆಪಿ ನಾಯಕರು ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications