ಭಾರತದಿಂದ ಹೈಡ್ರೋಕ್ಸಿ ಕ್ಲೋರೊಕ್ವಿನ್ ಔಷಧಿ ರಫ್ತು ನಿರ್ಬಂಧ
ನವದೆಹಲಿ, ಜೂನ್.18: ಜಗತ್ತಿಗೆ ಜಗತ್ತು ಕೊರೊನಾವೈರಸ್ ಸೋಂಕಿನಿಂದ ಕಂಗೆಟ್ಟು ಹೋಗಿದ್ದ ಸಂದರ್ಭದಲ್ಲಿ ವಿಶ್ವದ ಎದುರಿಗೆ ರಾಮಬಾಣದಂತೆ ಕಂಡಿದ್ದೇ ಮಲೇರಿಯಾಗೆ ಬಳಸುವ ಹೈಡ್ರೋಕ್ಸಿ ಕ್ಲೋರೊಕ್ವಿನ್ ಔಷಧಿ. ಇದೇ ಔಷಧಿಯನ್ನು ರಫ್ತು ಮಾಡದಿರುವುದಕ್ಕೆ ಭಾರತ ತೀರ್ಮಾನಿಸಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದಿಂದ ಮಲೇರಿಯಾಗೆ ಬಳಸುವ ಹೈಡ್ರೋಕ್ಸಿ ಕ್ಲೋರೊಕ್ವಿನ್ ಔಷಧಿಯನ್ನು ರಫ್ತು ಮಾಡುವುದನ್ನು ತತ್ ಕ್ಷಣದಿಂದಲೇ ಜಾರಿಗೆ ಬರುವಂತೆ ರದ್ದುಗೊಳಿಸಲಾಗಿದೆ. ಈ ಹಿಂದೆ ಕಳೆದ ಮಾರ್ಚ್.24ರಂದು ಕೊರೊನಾವೈರಸ್ ಹರಡುವಿಕೆ ಹಿನ್ನೆಲೆ ಮೊದಲ ಬಾರಿಗೆ ಹೈಡ್ರೋಕ್ಸಿ ಕ್ಲೋರೊಕ್ವಿನ್ ರಫ್ತಿಗೆ ನಿರ್ಬಂಧ ವಿಧಿಸಲಾಗಿತ್ತು.
ಸಕ್ರಿಯ ಔಷಧಿ ಪದಾರ್ಥಗಳ ರಫ್ತು ನೀತಿಯನ್ನು ತಕ್ಷಣದಿಂದಲೇ ಸಡಿಲಗೊಳಿಸಲಾಗಿದೆ. ಹೈಡ್ರಾಕ್ಸಿಕ್ಲೋರೋಕ್ವಿನ್ ಸಕ್ರಿಯ ಷಧೀಯ ಪದಾರ್ಥಗಳು(ಎಪಿಐ) ರಫ್ತು ನೀತಿ ಮತ್ತು ಅದರ ಸೂತ್ರೀಕರಣಗಳನ್ನು ತಕ್ಷಣದಿಂದ ಜಾರಿಗೆ ತರಲು ನಿಷೇಧಿಸಲಾಗಿದೆ "ಎಂದು ವಿದೇಶಾಂಗ ವ್ಯಾಪಾರ ನಿರ್ದೇಶನಾಲಯ (ಡಿಎಫ್ ಎಫ್ಟಿ) ಅಧಿಸೂಚನೆಯಲ್ಲಿ ತಿಳಿಸಿದೆ.

ಕೊರೊನಾವೈರಸ್ ಚಿಕಿತ್ಸೆಗೆ ಹೈಡ್ರೋಕ್ಸಿ ಕ್ಲೋರೊಕ್ವಿನ್ ಬಳಕೆ:
ಭಾರತದಲ್ಲೇ ಅತಿಹೆಚ್ಚು ಉತ್ಪಾದನೆಯಾಗುವ ಹೈಡ್ರೋಕ್ಸಿ ಕ್ಲೋರೊಕ್ವಿನ್ ಔಷಧಿಯನ್ನು ಅಸಲಿಗೆ ಮಲೇರಿಯಾ ರೋಗಿಗಳಿಗೆ ಚಿಕಿತ್ಸೆ ನೀಡುವುದಕ್ಕಾಗಿ ಬಳಕೆ ಮಾಡಲಾಗುತ್ತದೆ. ಆದರೆ ವಿಶ್ವವನ್ನು ಕೊರೊನಾವೈರಸ್ ಕಾಡುತ್ತಿರುವ ಆರಂಭಿಕ ಹಂತದಲ್ಲಿ ಹೈಡ್ರೋಕ್ಸಿ ಕ್ಲೋರೊಕ್ವಿನ್ ಔಷಧಿಯನ್ನೇ ಸೋಂಕಿತರ ಮೇಲೆ ಪ್ರಯೋಗಿಸಲು ತೀರ್ಮಾನಿಸಲಾಗಿತ್ತು. ಗಂಭೀರ ಸ್ಥಿತಿಯಲ್ಲಿರುವ ಹಲವು ಕೊವಿಡ್-19 ಸೋಂಕಿತರಿಗೆ ಇದೇ ಹೈಡ್ರೋಕ್ಸಿ ಕ್ಲೋರೊಕ್ವಿನ್ ಔಷಧಿಯನ್ನು ನೀಡಲಾಗುತ್ತಿತ್ತು. ಮೊದಮೊದಲು ಹೈಡ್ರೋಕ್ಸಿ ಕ್ಲೋರೊಕ್ವಿನ್ ಔಷಧಿಗಾಗಿ ಭಾರತ ಬೆನ್ನು ಬಿದ್ದ ಅಮೆರಿಕಾ ನಂತರದಲ್ಲಿ ಈ ಔಷಧಿಯಿಂದ ಅಡ್ಡ ಪರಿಣಾಮಗಳು ಆಗುತ್ತಿವೆ. ಹೀಗಾಗಿ ಹೈಡ್ರೋಕ್ಸಿ ಕ್ಲೋರೊಕ್ವಿನ್ ಔಷಧಿಯನ್ನು ಕೊರೊನಾವೈರಸ್ ಸೋಂಕಿತರ ಚಿಕಿತ್ಸೆಗೆ ಬಳಸಲು ಆಗುವುದಿಲ್ಲ ಎಂದು ತಿಳಿಸಿತ್ತು.
-
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications