ಸುಷ್ಮಾ ಟ್ವಿಟ್ಟರ್ ಪರಿಚಯ ಪುಟದಿಂದ 'ಖಾತೆ' ಮಾಯ
ಬೆಂಗಳೂರು, ಜುಲೈ 22: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟ್ಟರ್ ನ ಪುಟ ಅಚ್ಚರಿಯ ರೀತಿಯಲ್ಲಿ ಬದಲಾಗಿದೆ. ಅವರ ಟ್ವಿಟ್ಟರ್ ಪರಿಚಯ ಪುಟದಿಂದ 'ವಿದೇಶಾಂಗ ಖಾತೆ' ಮಾಯವಾಗಿದೆ. ಲಲಿತ್ ಮೋದಿ ಹಗರಣದಲ್ಲಿ ಸಿಲುಕಿರುವ ಸುಷ್ಮಾ ಅವರು ಕೊನೆಗೂ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರಬಹುದೇ? ಎಂಬ ಅನುಮಾನ ದಟ್ಟವಾಗಿ ಹಬ್ಬುತ್ತಿದೆ.
ಸಂಸತ್ತಿನಲ್ಲಿ ಮುಂಗಾರು ಅಧಿವೇಶನ ಆರಂಭವಾದಾಗಿನಿಂದ ಲಲಿತ್ ಗೇಟ್ ಹಗರಣ ಕಲಾಪವನ್ನು ನುಂಗಿ ಹಾಕಿದೆ. ದೆಹಲಿಯಲ್ಲಿ ಮಹಾತ್ಮಾ ಗಾಂಧೀಜಿ ಪ್ರತಿಮೆ ಎದುರು ವಿಪಕ್ಷಗಳು ಪ್ರತಿಭಟನೆ ನಡೆಸಿ ಸುಷ್ಮಾ ಸ್ವರಾಜ್ ರಾಜೀನಾಮೆಗೆ ಆಗ್ರಹಿಸಿದ್ದಾರೆ. [ಲಮೋ ಎಂದರೇನು? ರಾಜಕಾರಣಿಗಳು ಏಕೆ ಹೆದರುತ್ತಾರೆ?]
ಸುಷ್ಮಾ ಅವರು ಕೂಡಾ ಟ್ವಿಟ್ಟರ್ ಮೂಲಕವೇ ಕಾಂಗ್ರೆಸ್ಸಿಗರಿಗೆ ತಕ್ಕ ಉತ್ತರ ನೀಡುತ್ತಾ ಬಂದಿದ್ದರು. ಆದರೆ. ಈಗ ಅವರ ಅಧಿಕೃತ ಟ್ವಿಟ್ಟರ್ ಖಾತೆಯಿಂದ 'ವಿದೇಶಾಂಗ ಸಚಿವೆ' ತೆಗೆದು ಹಾಕಲಾಗಿದೆ. [ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದ ನಾಲ್ಕು ಘಟವಾಣಿಯರು]
ಸಂಸತ್ ಮಳೆಗಾಲದ ಅಧಿವೇಶನದಲ್ಲಿ ಆಡಳಿತಾರೂಢ ಬಿಜೆಪಿಯನ್ನು ಕಾಂಗ್ರೆಸ್ ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಟ್ವಿಟರ್ ನಲ್ಲಿ ಬಾಂಬ್ ಸಿಡಿಸಿದ್ದರು.

ಸಂತೋಷ್ ಬರ್ಗೋಡಿಯಾ ಹೆಸರೆತ್ತಿದ ಸುಷ್ಮಾ
ಕಲ್ಲಿದ್ದಲು ಹಗರಣದ ಪ್ರಮುಖ ಆರೋಪಿ ಸಂತೋಷ್ ಬರ್ಗೋಡಿಯಾ ಹೆಸರೆತ್ತಿದ ಸುಷ್ಮಾ ಅವರು ಕಲ್ಲಿದ್ದಲು ಪ್ರಕರಣದ ಬಗ್ಗೆ ಟ್ವೀಟ್ ಮಾಡಿ ಕಾಂಗ್ರೆಸ್ ನಿಂದ ವಿರುದ್ಧ ಕಿಡಿಕಾರಿದ್ದರು.
|
ಸುಷ್ಮಾ ಟ್ವಿಟ್ಟರ್ ಪುಟ ಬದಲಾಯಿಕೊಳ್ಳಲಿ
ಸುಷ್ಮಾ ಟ್ವಿಟ್ಟರ್ ಪುಟ ಬದಲಾಯಿಕೊಳ್ಳಲಿ ಕನಸುಗಾರ್ತಿ, ಫೋಟೋಗ್ರಾಫರ್ ಎಂದು ನಮೂದಿಸಲಿ.
|
ಸುಷ್ಮಾ ಅವರೇ ನೀವು ಕೇಂದ್ರ ಸಚಿವೆ ಅಲ್ಲವೇ?
ಸುಷ್ಮಾ ಅವರೇ ನೀವು ಕೇಂದ್ರ ಸಚಿವೆ ಅಲ್ಲವೇ?, ವಿದೇಶಾಂಗ ಖಾತೆ ಕೈ ತಪ್ಪಿತೇ?
|
ಟ್ವಿಟ್ಟರ್ ಖಾತೆ ಪರಿಚಯ ಬದಲಾದ ಚಿತ್ರಗಳು
ಟ್ವಿಟ್ಟರ್ ಖಾತೆ ಪರಿಚಯ ಬದಲಾದ ಚಿತ್ರಗಳನ್ನು ನೀಡಿದ ಸಾರ್ವಜನಿಕರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications