ನಮೋ ಆಪ್ ಸಂಬಂಧಿಸಿದ ಸಂಸ್ಥೆಯ 15 FBಪುಟಗಳು ಬಂದ್
ನವದೆಹಲಿ, ಏಪ್ರಿಲ್ 02: ಸಾಮಾಜಿಕ ಜಾಲ ತಾಣ ದಿಗ್ಗಜ ಫೇಸ್ ಬುಕ್ ಆರಂಭಿಸಿರುವ ಸ್ವಚ್ಛತಾ ಅಭಿಯಾನಕ್ಕೆ ಕಾಂಗ್ರೆಸ್ ಪಕ್ಷದ ಐಟಿ ಸೆಲ್ ಗೆ ಸೇರಿದ ಅನೇಕ ಪುಟಗಳಷ್ಟೇ ಬಲಿಯಾಗಿಲ್ಲ, ಬಿಜೆಪಿ ಬೆಂಬಲಿತ ಪುಟಗಳು ಮಾಯವಾಗಿವೆ.
ಸುಳ್ಳು ಸುದ್ದಿ, ಐಡೆಂಡೆಟಿ ಇಲ್ಲದ ಖಾತೆಗಳ ಬಗ್ಗೆ ಫೇಸ್ ಬುಕ್ ಬಹಳ ಮುಂಚಿತವಾಗಿ ಅಭಿಯಾನ ನಡೆಸಿದೆ. ಚುನಾವಣೆ ಸಂದರ್ಭದಲ್ಲಿ ಇದು ಕೈಗೊಂಡ ಕ್ರಮ ಎನ್ನಲಾಗುವುದಿಲ್ಲ. ಈ ಹಿಂದೆ ಬಿಜೆಪಿ ಬೆಂಬಲಿತ ಫೇಸ್ ಬುಕ್ ಪುಟಗಳಿಗೂ ಚುರುಕು ಮುಟ್ಟಿಸಲಾಗಿತ್ತು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಈಗ ಪ್ರಧಾನಿ ಮೋದಿ ಅವರ ನಮೋ ಮೊಬೈಲ್ ಅಪ್ಲಿಕೇಷನ್ ಜತೆ ಹೊಂದಾಣಿಕೆ ಹೊಂದಿರುವ ಸಿಲ್ವರ್ ಟಚ್ ಟೆಕ್ನಾಲಜೀಸ್ ಕಂಪನಿಗೆ ಸೇರಿದೆ ಎನ್ನಲಾದ 15 ಫೇಸ್ ಬುಕ್ ಗಳನ್ನು ತೆಗೆದು ಹಾಕಲಾಗಿದೆ ಎಂದು ಫೇಸ್ ಬುಕ್ ಕ್ರಿಪ್ಟೋಸೆಕ್ಯುರಿಟಿ ಪಾಲಿಸಿ ಮುಖ್ಯಸ್ಥರಾದ ನಾಥನಿಯಲ್ ಗ್ಲೆಶೆರ್ ಹೇಳಿದ್ದಾರೆ.

ಇಂಡಿಯಾ ಐ ಹೆಸರಿನ ಫೇಸ್ ಬುಕ್ ಪುಟವು ಗುಜರಾತ್ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವಿವಿಧ ಇಲಾಖೆ ಜತೆ ಕಾರ್ಯನಿರ್ವಹಿಸಿದ ಮಾಹಿತಿಯಿದೆ ಎಂದು ಫೇಸ್ ಬುಕ್ ಹೇಳಿದೆ.
ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಸುಮಾರು 687 ಪುಟ ಹಾಗೂ ಖಾತೆಗಳನ್ನು ಬಂದ್ ಮಾಡಲಾಗಿದೆ ಎಂದು ಫೇಸ್ ಬುಕ್ ಹೇಳಿದೆ ಎಂಬ ಸುದ್ದಿಯ ಬಗ್ಗೆ ಪ್ರತಿಕ್ರಿಯಿಸಿರುವ ಮನೀಶ್ ತಿವಾರಿ, ಈ ಸುದ್ದಿಯ ಸತ್ಯಾಸತ್ಯತೆ ಬಗ್ಗೆ ನಿಖರ ಮಾಹಿತಿಯಿಲ್ಲ ಎಂದು ಕಾಂಗ್ರೆಸ್ ವಕ್ತಾರರಾದ ಮನೀಶ್ ತಿವಾರಿ ಹೇಳಿದ್ದಾರೆ.
ಆಗಸ್ಟ್ 2014ರಿಂದ ಮಾರ್ಚ್ 2019ರ ಅವಧಿಯಲ್ಲಿ ಸುಮಾರು 39000 ಡಾಲರ್ ಮೊತ್ತವನ್ನು ಜಾಹೀರಾತು ರೂಪದಲ್ಲಿ ಈ ಪುಟಗಳು ಖರ್ಚು ಮಾಡಿವೆ. ಈ ಪುಟಗಳು ಹಾಗೂ ಖಾತೆಗಳು ಫೇಕ್ ಸುದ್ದಿ ಹಬ್ಬಿಸುತ್ತಿವೆ ಎಂಬ ಕಾರಣಕ್ಕೆ ಮಾತ್ರ ಬಂದ್ ಮಾಡಿಲ್ಲ. ಬದಲಿಗೆ ದೃಢಪಡದ ಸುದ್ದಿಗಳನ್ನು ಸ್ಪಾಮ್ ಮಾದರಿ ಪ್ರಸಾರ ಮಾಡಿದ ಕಾರಣ ನೀಡಲಾಗಿದೆ.
-
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ












Click it and Unblock the Notifications