ಪ್ರಜಾಪ್ರಭುತ್ವದ ದೇವಾಲಯ, ಹೊಸ ಸಂಸತ್ತಿನ ಕಟ್ಟಡದ ಬಗ್ಗೆ ತಿಳಿಯಿರಿ
ನವದೆಹಲಿ, ಮೇ. 28: ನೂತನ ಸಂಸತ್ ಭವನವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಲೋಕಾರ್ಪಣೆ ಮಾಡಿದ್ದಾರೆ. ಲೋಕಸಭಾ ಸ್ಪೀಕರ್ ಕುರ್ಚಿ ಬಳಿ ಐತಿಹಾಸಿಕ ರಾಜದಂಡ 'ಸೆಂಗೊಲ್' ಅನ್ನು ಸ್ಥಾಪಿಸಿದ್ದಾರೆ. ಇದೇ ಸಂದರ್ಭದಲ್ಲಿ ಪೂಜೆ ಹಾಗೂ ಸರ್ವಧರ್ಮ ಪ್ರಾರ್ಥನೆ ನಡೆದಿದೆ. ಇದರ ಜೊತೆಗೆ ನಾವು ನಮ್ಮ ಪ್ರಜಾಪ್ರಭುತ್ವದ ದೇಗುಲಲ ಬಗ್ಗೆ ತಿಳಿದಿರಬೇಕಾದ ಅಂಶಗಳು ಇಲ್ಲಿವೆ.
ಪ್ರಧಾನಿ ನೂತನ ಕಟ್ಟಡದ ಸ್ಮರಣ ಫಲಕವನ್ನು ಅನಾವರಣಗೊಳಿಸಿದ್ದಾರೆ. ಸಮಾರಂಭದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ಗಣ್ಯರು ಉಪಸ್ಥಿತರಿದ್ದರು. ಸಂಸತ್ತಿನ ಹೊಸ ಕಟ್ಟಡಕ್ಕೆ ಕಾಲಿಟ್ಟ ಪ್ರಧಾನಿ ಮೋದಿಗೆ 'ಸೆಂಗೊಲ್' ಹಸ್ತಾಂತರಿಸಿದ ನಂತರ ಅದನ್ನು ಸ್ಥಾಪಿಸಿದ್ದಾರೆ.

* ಈ ಹೊಸ ಸಂಸತ್ತಿನ ಒಳಭಾಗವು ಮೂರು ರಾಷ್ಟ್ರೀಯ ಚಿಹ್ನೆಗಳಾದ ಕಮಲ, ನವಿಲು ಮತ್ತು ಆಲದ ಮರವನ್ನು ಅದರ ಮುಖ್ಯ ಥೀಮ್ ಆಗಿ ಹೊಂದಿದೆ.
* ಹೊಸ ಸಂಸತ್ ಕಟ್ಟಡವನ್ನು ಟಾಟಾ ಪ್ರಾಜೆಕ್ಟ್ ಲಿಮಿಟೆಡ್ ನಿರ್ಮಿಸಿದೆ.
* ಹೊಸ ಸಂಸತ್ತಿನ ಕಟ್ಟಡವು ಭಾರತದ ಪ್ರಜಾಪ್ರಭುತ್ವ ಪರಂಪರೆಯನ್ನು ಪ್ರದರ್ಶಿಸಲು ಭವ್ಯವಾದ ಸಂವಿಧಾನ ಭವನವನ್ನು ಹೊಂದಿದೆ
* ಸಂಸದರಿಗೆ ವಿಶ್ರಾಂತಿ ಕೋಣೆ, ಗ್ರಂಥಾಲಯ, ಬಹು ಕಮಿಟಿ ಕೊಠಡಿಗಳು, ಊಟದ ಪ್ರದೇಶಗಳು ಮತ್ತು ಸಾಕಷ್ಟು ಪಾರ್ಕಿಂಗ್ ಸ್ಥಳವನ್ನು ಹೊಂದಿದೆ.

* ತ್ರಿಕೋನ ಆಕಾರದ ನಾಲ್ಕು ಅಂತಸ್ತಿನ ಕಟ್ಟಡವು 64,500 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿದೆ.
* ಸಂಸತ್ ಭವನ ಇದು ಮೂರು ಮುಖ್ಯ ದ್ವಾರಗಳನ್ನು ಹೊಂದಿದೆ. ಜ್ಞಾನ ದ್ವಾರ, ಶಕ್ತಿ ದ್ವಾರ ಮತ್ತು ಕರ್ಮ ದ್ವಾರ
* ಸಂಸತ್ ಭವನದಲ್ಲಿ ವಿಐಪಿಗಳು, ಸಂಸದರು ಮತ್ತು ಸಂದರ್ಶಕರಿಗೆ ಪ್ರತ್ಯೇಕ ಪ್ರವೇಶದ್ವಾರಗಳಿವೆ
* ಹೊಸ ಕಟ್ಟಡಕ್ಕೆ ಬಳಸಲಾದ ವಸ್ತುಗಳನ್ನು ದೇಶದ ವಿವಿಧ ಭಾಗಗಳಿಂದ ಸ್ವಾಧೀನಪಡಿಸಿಕೊಳ್ಳಲಾಗಿದೆ.
* ಈ ಕಟ್ಟಡದ ಲೋಕಸಭೆಯಲ್ಲಿ 888 ಸದಸ್ಯರು ಮತ್ತು ರಾಜ್ಯಸಭಾ ಕೊಠಡಿಯಲ್ಲಿ 300 ಸದಸ್ಯರು ಆರಾಮವಾಗಿ ಕುಳಿತುಕೊಳ್ಳಬಹುದು.
* ಉಭಯ ಸದನಗಳ ಜಂಟಿ ಅಧಿವೇಶನಕ್ಕಾಗಿ, 1,280 ಸಂಸದರಿಗೆ ಲೋಕಸಭೆಯ ಕೊಠಡಿಯಲ್ಲಿ ಅವಕಾಶ ಕಲ್ಪಿಸಲಾಗಿದೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications