ರಫೇಲ್ ಒಪ್ಪಂದ : ರಾಹುಲ್‌ಗೆ ಟ್ವೀಟ್ ಮೂಲಕ ಜೇಟ್ಲಿ ತಿರುಗೇಟು

ನವದೆಹಲಿ, ನವೆಂಬರ್ 13 : ರಫೇಲ್ ಒಪ್ಪಂದದ ವಿಚಾರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಮತ್ತೊಂದು ಸುತ್ತಿನ ವಾಕ್ಸಮರ ಆರಂಭವಾಗಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕೇಂದ್ರ ಸಚಿವ ಅರುಣ್ ಜೇಟ್ಲಿ ತಿರುಗೇಟು ನೀಡಿದ್ದಾರೆ.

ಮಂಗಳವಾರ ಈ ಕುರಿತು ಸಾಲು ಸಾಲು ಟ್ವೀಟ್‌ಗಳನ್ನು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮಾಡಿದ್ದಾರೆ. ರಾಹುಲ್ ಗಾಂಧಿ ಅವರ ಸುಳ್ಳು ಆರೋಪಗಳು ಅವರ ಪತನಗೊಂಡ ರಾಜಕೀಯಕ್ಕೆ ಯಾವುದೇ ಲಾಭ ತರುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ದೇಶದ ವಾಯುಸೇನೆಯನ್ನು ಆಧುನೀಕರಣಗೊಳಿಸಲು ರಫೇಲ್ ಒಪ್ಪಂದ ಅಗತ್ಯವಾಗಿತ್ತು. ಆದರೆ, ಯುಪಿಎ ಸರ್ಕಾರ ಈ ಒಪ್ಪಂದವನ್ನು ವಿಳಂಬಗೊಳಿಸಲು ಕಾರಣವೇನು? ಎಂದು ಅರುಣ್ ಜೇಟ್ಲಿ ಅವರು ರಾಹುಲ್ ಗಾಂಧಿ ಅವರನ್ನು ಪ್ರಶ್ನಿಸಿದ್ದಾರೆ.

ರಫೇಲ್ ಒಪ್ಪಂದದಲ್ಲಿ 'ಕಳ್ಳತನ' ಮಾಡಿರುವುದನ್ನು ನರೇಂದ್ರ ಮೋದಿ ಅವರು ಸುಪ್ರೀಂಕೋರ್ಟ್‌ ಮುಂದೆ ಒಪ್ಪಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪ ಮಾಡಿದ್ದರು. ಇದಕ್ಕೆ ಅರುಣ್ ಜೇಟ್ಲಿ ಅವರು ಪ್ರತ್ಯುತ್ತರ ನೀಡಿದ್ದಾರೆ.

ಸುಳ್ಳು ಆರೋಪದ ರಾಜಕೀಯ

ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ರಾಹುಲ್ ಗಾಂಧಿ ಅವರ ಸುಳ್ಳು ಆರೋಪಗಳು ಅವರ ಪತನಗೊಂಡ ರಾಜಕೀಯಕ್ಕೆ ಯಾವುದೇ ಲಾಭ ತರುವುದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಯುಪಿಎಗಿಂತ ಕಡಿಮೆ ದರ

ರಫೇಲ್ ಒಪ್ಪಂದದಲ್ಲಿ ಯುಪಿಎ ಸರ್ಕಾರ ನೀಡಿದ ದರಕ್ಕಿತ ಕಡಿಮೆ ದರದಲ್ಲಿ ವಿಮಾನ ಖರೀದಿಯಾಗಿದೆ.

ವಿಳಂಬ ಮಾಡಿದ್ದು ಏಕೆ?

ರಫೇಲ್ ಯುದ್ಧ ವಿಮಾನ ಖರೀದಿ ವಾಯುಸೇನೆಯ ಆಧುನೀಕರಣಕ್ಕೆ ಅಗತ್ಯವಾಗಿತ್ತು. ಯುಪಿಎ ಸರ್ಕಾರ ಒಪ್ಪಂದವನ್ನು ಏಕೆ ವಿಳಂಬ ಮಾಡಿತು?

ರಾಹುಲ್ ಗಾಂಧಿ ಟ್ವೀಟ್

ರಫೇಲ್ ಒಪ್ಪಂದದಲ್ಲಿ 'ಕಳ್ಳತನ' ಮಾಡಿರುವುದನ್ನು ನರೇಂದ್ರ ಮೋದಿ ಒಪ್ಪಿಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+