ಇಸ್ರೋ ಅಧ್ಯಕ್ಷ ಕೆ. ಶಿವನ್ ಹೆಸರಲ್ಲಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ
ಬೆಂಗಳೂರು, ಸೆಪ್ಟೆಂಬರ್ 9: ಇಸ್ರೋ ಅಧ್ಯಕ್ಷ ಕೆ. ಶಿವನ್ ಅವರ ಹೆಸರಿನಲ್ಲಿ ಟ್ವಿಟ್ಟರ್ನಲ್ಲಿ ಕಿಡಿಗೇಡಿಗಳು ನಕಲಿ ಖಾತೆಗಳನ್ನು ತೆರೆದಿದ್ದಾರೆ.
ಚಂದ್ರಯಾನ-2 ನೌಕೆಯನ್ನು ಚಂದ್ರನಲ್ಲಿ ಇಳಿಸುವ ಕಾರ್ಯಾಚರಣೆ ನಡೆಯುವ ಸಂದರ್ಭದಲ್ಲಿ ಕೈಲಾಸವಡಿವೂ ಶಿವನ್ ಎಂಬ ಹೆಸರಿನ ಟ್ವಿಟ್ಟರ್ ಖಾತೆ ಅನೇಕ ವಿಡಿಯೋ, ಟ್ವೀಟ್ ಮತ್ತು ಫೋಟೊಗಳನ್ನು ಹಂಚಿಕೊಂಡಿದೆ. ಈ ಖಾತೆದಾರನ ಮೂಲಕ ಹೆಸರು ಸುಜಿತ್ ಅಗರವಾಲ್ ಎಂದಿದ್ದರೂ ಪ್ರದರ್ಶನವಾಗುವ ಹೆಸರು ಮತ್ತು ಚಿತ್ರ ಕೆ. ಶಿವನ್ ಅವರದ್ದಾಗಿದೆ. ಇದನ್ನು ಅರಿಯದ ಅನೇಕರು ಇದು ಶಿವನ್ ಅವರ ಅಧಿಕೃತ ಟ್ವಿಟ್ಟರ್ ಖಾತೆ ಎಂದು ಅದನ್ನು ಹಿಂಬಾಲಿಸಿದ್ದಾರೆ. ಅವರ ಪೋಸ್ಟ್ಗಳನ್ನು ಲೈಕ್ ಮಾಡುವ, ಕಾಮೆಂಟ್ ಮಾಡುವ ಮತ್ತು ರೀಟ್ವೀಟ್ ಮಾಡುವ ಕಾರ್ಯಗಳನ್ನು ಸಹ ಮಾಡಿದ್ದಾರೆ.
ಅನೇಕ ಪ್ರತಿಷ್ಠಿತ ವ್ಯಕ್ತಿಗಳು ಸಹ ಈ ಖಾತೆಯನ್ನು ಹಿಂಬಾಲಿಸುತ್ತಿದ್ದಾರೆ. ಚಂದ್ರಯಾನ ಕಾರ್ಯಾಚರಣೆಯ ಬಗ್ಗೆ ತಾಂತ್ರಿಕವಾದ ಮಾಹಿತಿಗಳನ್ನು ನೀಡುತ್ತಿರುವುದರಿಂದ ಇದು ಶಿವನ್ ಅವರದೇ ಖಾತೆ ಎಂದು ಅನೇಕರು ನಂಬಿದ್ದಾರೆ. ಇದೇ ರೀತಿ ಅನೇಕ ನಕಲಿ ಖಾತೆಗಳನ್ನು ತೆರೆಯಲಾಗಿದೆ.

ಸೆಲೆಬ್ರಿಟಿಗಳ ಹೆಸರಿನಲ್ಲಿ ನಕಲಿ ಖಾತೆಗಳನ್ನು ತೆರೆಯುವುದು ಸಾಮಾನ್ಯ. ಸಿನಿಮಾ ತಾರೆಯರು, ಕ್ರೀಡಾಪಟುಗಳು, ರಾಜಕಾರಣಿಗಳ ಹೆಸರಿನಲ್ಲಿ ನಕಲಿ ಖಾತೆಗಳು ಸೃಷ್ಟಿಯಾಗುತ್ತಲೇ ಇರುತ್ತವೆ. ಈಗ ಕೆ. ಶಿವನ್ ಅವರ ಹೆಸರಿನಲ್ಲಿಯೂ ಖಾತೆಗಳನ್ನು ತೆರೆದಿರುವುದು ಅವರ ಜನಪ್ರಿಯತೆಯನ್ನು ತೋರಿಸುತ್ತದೆ.
ಇದನ್ನು ಅರಿತ ಇಸ್ರೋ, ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಸ್ಪಷ್ಟೀಕರಣ ನೀಡಿದೆ. ಜತೆಗೆ ಇಸ್ರೋ ಹೊಂದಿರುವ ಅಧಿಕೃತ ಖಾತೆಗಳ ಬಗ್ಗೆ ಕೂಡ ಮಾಹಿತಿ ನೀಡಿದೆ.
'ಕೈಲಾಸವಡಿಯೂ ಶಿವನ್ ಅವರ ಹೆಸರಿನಲ್ಲಿ (ಕೆ. ಶಿವನ್ ಅವರ ಚಿತ್ರಗಳೊಂದಿಗೆ) ಸಾಮಾಜಿಕ ಜಾಲತಾಣಗಳಲ್ಲಿ ಖಾತೆಗಳು ಕಾರ್ಯಾಚರಣೆ ಮಾಡುತ್ತಿರುವುದು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಸಕ್ರಿಯವಾಗಿರುವುದು ಗಮನಕ್ಕೆ ಬಂದಿದೆ. ಈ ಮೂಲಕ ಸ್ಪಷ್ಟಪಡಿಸುವುದೇನೆಂದರೆ ಇಸ್ರೋ ಅಧ್ಯಕ್ಷ ಕೆ. ಶಿವನ್ ಅವರು ಯಾವುದೇ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಯಾವುದೇ ವೈಯಕ್ತಿಕ ಖಾತೆಯನ್ನು ಹೊಂದಿಲ್ಲ. ಹೀಗಾಗಿ ಅಂತಹ ಖಾತೆಗಳಲ್ಲಿ ನೀಡುತ್ತಿರುವ ಮಾಹಿತಿಗಳು ಅಧಿಕೃತವಲ್ಲ' ಎಂದು ಇಸ್ರೋ ತಿಳಿಸಿದೆ.
ಅದರ ಜತೆಯಲ್ಲಿ ಇಸ್ರೋ ತಾನು ಸಕ್ರಿಯವಾಗಿರುವ ಸಾಮಾಜಿಕ ಮಾಧ್ಯಮಗಳ ಪಟ್ಟಿಯನ್ನು ನೀಡಿದೆ. ಟ್ವಿಟ್ಟರ್, ಫೇಸ್ಬುಕ್ ಮತ್ತು ಯೂಟ್ಯೂಬ್ನ ತನ್ನ ತಲಾ ಒಂದು ಖಾತೆಗಳು ಮಾತ್ರ ಅಧಿಕೃತ ಎಂದು ಅದು ತಿಳಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications