Fact Check: App ಬಳಸಿ ಆನ್ಲೈನ್ ನಲ್ಲಿ ಸಿಬಿಎಸ್ ಇ ಪರೀಕ್ಷೆ?
ನವದೆಹಲಿ, ಜೂನ್ 2: ಕೊರೊನಾಸೋಂಕು ಹರಡದಂತೆ ಲಾಕ್ಡೌನ್ ಜಾರಿಯಲ್ಲಿರುವಾಗಲೇ ಜೂನ್ ತಿಂಗಳಿನಲ್ಲಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಈ ನಡುವೆ ಈ ಕುರಿತಂತೆ ಮಾರ್ಗಸೂಚಿ ಹೊರಡುವ ಮೊದಲೇ ನಕಲಿ ಸಂದೇಶಗಳು ಹಬ್ಬುತ್ತಿವೆ. ಸಿಬಿಎಸ್ ಇ ಪರೀಕ್ಷೆಗಳು ಆನ್ ಲೈನ್ ನಲ್ಲಿ ನಡೆಯಲಿದ್ದು, ಇದಕ್ಕಾಗಿ ಪ್ರತ್ಯೇಕ ಮೊಬೈಲ್ ಅಪ್ಲಿಕೇಷನ್ ಬಳಸಿ ಎಂಬ ಸುದ್ದಿ ಸಾಮಾಜಿಕ ಜಾಲ ತಾಣದಲ್ಲಿ ಹರಿದಾಡುತ್ತಿದೆ.
"ಆನ್ ಲೈನ್ ಪರೀಕ್ಷೆಗಳನ್ನು ನಡೆಸಲು ಶಾಲೆಗಳಿಗೆ ಸಿಬಿಎಸ್ ಇ ನಿರ್ದೇಶಿಸಿದೆ. ವಿಎಚ್ ಸಾಫ್ಟ್ ವೇರ್ ಸಂಸ್ಥೆ ಹೊರ ತಂದಿರುವ ಮೊಬೈಲ್ ಫೋನ್ ಅಪ್ಲಿಕೇಷನ್ ಎಲ್ಲರೂ ಡೌನ್ ಲೋಡ್ ಮಾಡಿಕೊಳ್ಳಬೇಕು, ಈ ಆಪ್ ಮೂಲಕ ಆನ್ ಲೈನ್ ಪರೀಕ್ಷೆ ನಡೆಸಲಾಗುತ್ತದೆ, ಪರೀಕ್ಷೆ ಮೇಲ್ವಿಚಾರಿಕೆಗಾಗಿ ಸಾಹಿಲ್ ಗೆಹ್ಲೋಟ್ ಅವರನ್ನು ಒಎಸ್ ಡಿಯಾಗಿ ನೇಮಿಸಲಾಗಿದೆ" ಎಂಬ ಸುದ್ದಿ ಹಬ್ಬಿದೆ.
ಸಂದೇಶದಲ್ಲಿ ಏನಿದೆ?: "ಹಲವು ರಾಜ್ಯಗಳಲ್ಲಿ ಆನ್ ಲೈನ್ ಪರೀಕ್ಷೆ ನಡೆಸಲು ಯೋಜನೆ ಹಾಕಿಕೊಳ್ಳಲಾಗಿದೆ. ಮಹಾರಾಷ್ಟ್ರದ ಪರಿಸ್ಥಿತಿ ಬಗ್ಗೆ ಬೋರ್ಡಿಗೆ ಅರಿವಿದೆ. ಆನ್ ಲೈನ್ ಪರೀಕ್ಷೆ ನಡೆಸುವುದು ಬಹಳ ಕಷ್ಟಕರ ಕೆಲಸ. ಇದಕ್ಕಾಗಿ ಆನ್ ಲೈನ್ ಪರೀಕ್ಷಾ ವಿಧಾನವಾದ ಇ-ಪರೀಕ್ಷಾ ವ್ಯವಸ್ಥೆ ತರಲಾಗಿದೆ. ಈ ಸಾಫ್ಟ್ ವೇರ್ ಮೂಲಕ ಯಾವುದೇ ವಂಚನೆ ಇಲ್ಲದೆ, ವಿದ್ಯಾರ್ಥಿಗಳ ಆಡಿಯೋ, ವಿಡಿಯೋ ಚಲನವಲನ ಮೇಲೆ ನಿಗಾವಹಿಸಬಹುದಾಗಿದೆ. ಈ ಅಪ್ಲಿಕೇಷನ್ ಎಲ್ಲರೂ ಬಳಸಿ'' ಎಂದು ಸುದ್ದಿ ಹಬ್ಬಿದೆ.

ಸತ್ಯಾಸತ್ಯತೆ: ಇದು ಸಂಪೂರ್ಣವಾಗಿ ಸುಳ್ಳು ಸುದ್ದಿಯಾಗಿದೆ. ಸಿಬಿಎಸ್ ಇ ಇಂಥ ಯಾವುದೇ ಅಪ್ಲಿಕೇಷನ್ ಬಳಸಲು ಸೂಚಿಸಿಲ್ಲ, ಆನ್ ಲೈನ್ ಪರೀಕ್ಷಾ ವಿಧಾನ ಬಗ್ಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ವಿಎಚ್ ಸಾಫ್ಟ್ ವೇರ್ ಅಥವಾ ವಿಎಸ್ ಸ್ಟಡೀಸ್ ಸಂಸ್ಥೆಯಿಂದ ಹೊರ ಬಂದಿರುವ ಅಪ್ಲಿಕೇಷನ್ ಬಳಸುವಂತೆ ಸೂಚಿಸಿಲ್ಲ. ಈ ಬಗ್ಗೆ ಯಾವುದೇ ಸುದ್ದಿ ಬಂದರೂ ವಿದ್ಯಾರ್ಥಿಗಳು, ಶಾಲಾ ಸಿಬ್ಬಂದಿ ನಂಬುವುದು ಬೇಡ ಎಂದು ಸಿಬಿಎಸ್ ಇ ಹೇಳಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications