Fact Check: ಸಿಬಿಎಸ್ಇ ಕ್ಲಾಸ್ 10, 12 ರ ಪರೀಕ್ಷೆ ದಿನಾಂಕ ಘೋಷಣೆ?
ನವದೆಹಲಿ, ಏಪ್ರಿಲ್ 3: ಸಿಬಿಎಸ್ಇ ಕ್ಲಾಸ್ 10 ಹಾಗೂ 12ರ ಪರೀಕ್ಷೆ ದಿನಾಂಕಗಳು ಘೋಷಣೆಯಾಗಿವೆ. ಏಪ್ರಿಲ್ 22ರಿಂದ ಪರೀಕ್ಷೆ ನಡೆಯಲಿದೆ ಎಂಬ ಸಂದೇಶ ಸಾಮಾಜಿಕ ಜಾಲ ತಾಣಗಳಲ್ಲಿ ಹಬ್ಬಿದೆ. ಆದರೆ, ಇದು ಸತ್ಯಕ್ಕೆ ದೂರವಾಗಿದೆ ಎಂಬ ಸ್ಪಷ್ಟಣೆ ಸಿಕ್ಕಿದೆ.
ಏಪ್ರಿಲ್ 25ರಿಂದ ಉತ್ತರಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ ಎಂದು ಕೂಡಾ ಪ್ರಕಟಣೆಯಲ್ಲಿ ಹೇಳಲಾಗಿದೆ. ಆದರೆ, ಸಿಬಿಎಸ್ಇ ಈ ರೀತಿ ಯಾವುದೇ ಪ್ರಕಟಣೆ ಹೊರಡಿಸಿಲ್ಲ.
ಈ ಬಗ್ಗೆ ಸ್ಪಷ್ಟಣೆ ಕೊಟ್ಟಿರುವ ಸಿಬಿಎಸ್ಇ, ಕೇಂದ್ರ ಸರ್ಕಾರ, ಉನ್ನತ ಶಿಕ್ಷಣ, ಶಾಲಾ ಶಿಕ್ಷಣ ಇಲಾಖೆ, ಗೃಹ ಸಚಿವಾಲಯ ನೀಡಿರುವ ಸೂಚನೆ(ಮಾರ್ಚ್ 18ರ ಆದೇಶ)ಯಂತೆ, ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮಾರ್ಚ್ 18 ರಿಂದ ಮಾರ್ಚ್ 31ರ ತನಕ ಪರೀಕ್ಷೆಗಲು ನಿಗದಿಯಾಗಿತ್ತು. ಪರೀಕ್ಷಾ ದಿನಾಂಕ ಪರಿಷ್ಕರಣೆಗೊಂಡ ಬಳಿಕ ಬದಲಿ ದಿನಾಂಕ ಕುರಿತಂತೆ ಬೋರ್ಡ್ ವೆಬ್ ಸೈಟ್, ಟ್ವಿಟ್ಟರ್ ಸೇರಿದಂತೆ ಎಲ್ಲಾ ಲಭ್ಯ ಮಾಧ್ಯಮಗಳ ಮೂಲಕ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ.

ಕೊವಿಡ್19 ಸಂದರ್ಭದಲ್ಲಿ ಶಾಲಾ ಸಿಬ್ಬಂದಿ, ವಿದ್ಯಾರ್ಥಿ, ಪೋಷಕರ ಆತಂಕವನ್ನು ಗಮನದಲ್ಲಿಟ್ಟುಕೊಂಡು ಬೋರ್ಡ್ ತನ್ನ ನಿರ್ಣಯವನ್ನು ತೆಗೆದುಕೊಳ್ಳಲಿದೆ.
1 ರಿಂದ 8 ನೇ ಕ್ಲಾಸ್ ತನಕದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸದೆ ಪಾಸ್ ಮಾಡಿ ಮುಂದಿನ ತರಗತಿಗೆ ಕಳಿಸಬಹುದು. 9 ರಿಂದ 11 ರ ತನಕ ವಿದ್ಯಾರ್ಥಿಗಳ ಪ್ರಾಜೆಕ್ಟ್ ವರ್ಕ್, ಅಸೈನ್ಮೆಂಟ್, ಟರ್ಮ್ ಎಕ್ಸಾಂ ಆಧಾರದ ಮೇಲೆ ಮುಂದಿನ ತರಗತಿಗೆ ಕಳಿಸಬಹುದು. 10 ಹಾಗೂ 12ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದು ಅನಿವಾರ್ಯವಾಗಿದ್ದು, ದಿನಾಂಕವನ್ನು ಮುಂದಿನ ಪ್ರಕಟಣೆಯಲ್ಲಿ ತಿಳಿಸಲಾಗುತ್ತದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications