ಅಂತೂ ಇಂತೂ ವಂಜಾರಾಗೆ ಸಿಕ್ತು ಜಾಮೀನು
ಮುಂಬಯಿ, ಸೆ. 11 : ನಕಲಿ ಎನ್ಕೌಂಟರ್ ಆರೋಪದಡಿ ಜೈಲು ಸೇರಿದ್ದ ನಿವೃತ್ತ ಐಪಿಎಸ್ ಅಧಿಕಾರಿ, ಗುಜರಾತ್ ನ ಮಾಜಿ ಡಿಐಜಿ ಡಿಜಿ ವಂಜಾರಾಗೆ ಮುಂಬಯಿ ಹೈಕೋರ್ಟ್ ಗುರುವಾರ ಜಾಮೀನು ನೀಡಿದೆ.
ಕಳೆದ ಏಳು ವರ್ಷಗಳಿಂದ ಸಾಬರಮತಿ ಕೇಂದ್ರ ಕಾರಾಗೃಹದಲ್ಲಿ ಬಂಧಿಯಾಗಿದ್ದ ವಂಜಾರಾಗೆ ಅಂತೂ ಜಾಮೀನು ಸಿಕ್ಕಿದೆ. 2005 ರ ಸೋಹ್ರಾಬುದ್ದೀನ್ ಶೇಖ್ ಮತ್ತು ಆತನ ಪತ್ನಿ ಎನ್ಕೌಂಟರ್ ಹಾಗೂ 2006ರ ತುಳಸಿರಾಮ್ ಪ್ರಜಾಪತಿ, ಇಶ್ರಾಂತ್ ಜಹಾನ್, ಸಾದಿಕ್ ಜಾಮಾಲ್, ಮತ್ತಿತರ ಎನ್ಕೌಂಟರ್ಗೆ ಸಂಬಂಧಿಸಿ ವಂಜಾರಾ ಅವರನ್ನು ಬಂಧಿಸಲಾಗಿತ್ತು.

ಸೋಹ್ರಾಬುದ್ದೀನ್ ಮತ್ತು ಆತನ ಪತ್ನಿ ಎನ್ಕೌಂಟರ್ಗೆ ಸಂಬಂಧಿಸಿ ಒಟ್ಟು 13 ಜನ ಪೊಲೀಸ್ ಅಧಿಕಾರಿಗಳನ್ನು ಬಂಧಿಸಲಾಗಿತ್ತು.
2007 ರ, ಏಪ್ರಿಲ್ 24ರಲ್ಲಿ ಬಂಧಿತರಾಗಿದ್ದ 59 ವರ್ಷದ ವಂಜಾರಾ ಜೈಲಿನಲ್ಲಿರುವಾಗಲೇ ರಾಜೀನಾಮೆ ನೀಡಿದ್ದರು. ಅವರ ಜತೆ ಇನ್ನಿಬ್ಬರು ಐಪಿಎಸ್ ಅಧಿಕಾರಿಗಳಾದ ರಾಜ್ ಕುಮಾರ್ ಪಂಡಿನ್, ದಿನೇಶ್ ಸಹ ರಾಜೀನಾಮೆ ನೀಡಿದ್ದರು.(ಗುಜರಾತ್ ಎನ್ ಕೌಂಟರ್ ಅಮಾನವೀಯ ಕೃತ್ಯ)
ಕಳೆದ ಏಳು ವರ್ಷಗಲಿಂದ ವಂಜಾರಾ ಜಾಮೀನಿಗಾಗಿ ಪ್ರಯತ್ನ ಮಾಡುತ್ತಲೇ ಬಂದಿದ್ದರು. 2008ರ ಫೆಬ್ರವರಿ 24 ರಂದು ಸೋದರಳಿಯನ ಮದುವೆ ನಿಮಿತ್ತ ವಂಜಾರಾಗೆ 72 ಗಂಟೆ ಕಾಲ ಜಾಮೀನು ನೀಡಲಾಗಿತ್ತು.
ಸುಪ್ರೀಂ ಕೋರ್ಟ್ ಆದೇಶದಂತೆ ಗುಜರಾತ್ ಸರ್ಕಾರ ಈ ಪ್ರಕರಣದ ತನಿಖೆಗೆ ಐಜಿಪಿ ಗೀತಾ ಜೋಹಾರಿ ನೇತೃತ್ವದಲ್ಲಿ ಸಿಐಡಿ ತಂಡ ರಚಿಸಿತ್ತು.
ಯಾರು ಈ ವಂಜಾರಾ?
ಗುಜರಾತ್ ಪೊಲೀಸ್ನಲ್ಲಿ ಸಂಚಲನ ಮೂಡಿಸಿದ್ದ ವಂಜಾರಾ ಮೇಲೆ ನರೇಂದ್ರ ಮೋದಿ ಮುಖ್ಯಮಂತ್ರಿಯಾಗಿದ್ದಾಗಲೇ ಎನ್ಕೌಂಟರ್ ಆರೋಪ ಬಂದಿತ್ತು. ವಂಜಾರಾ 1987ರ ಐಎಎಸ್ ಬ್ಯಾಚ್ನಿಂದ ಸೇವೆಗೆ ಧುಮುಕಿದ್ದರು. ಅಲ್ಲದೇ ಜೈಲಿನಲ್ಲಿದ್ದ ವಂಜಾರಾ 'ನಾನು ನರೇಂದ್ರ ಮೋದಿ ಮೇಲಿನ ಗೌರವದಿಂದ ಸುಮ್ಮನಿದ್ದೇನೆ' ಎಂಬ ಹೇಳಿಕೆ ನೀಡಿದ್ದು ಕೋಲಾಹಲಕ್ಕೆ ಕಾರಣವಾಗಿತ್ತು. ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ಮೋದಿ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಆಗ್ರಹಿಸಿತ್ತು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications