ನಕಲಿ ಪಾಸ್ಪೋರ್ಟ್ ಕೇಸ್: ಛೋಟಾ ರಾಜನ್ ಗೆ 7 ವರ್ಷ ಜೈಲು
ನಕಲಿ ಪಾಸ್ಪೋರ್ಟ್ ಪಡೆದ ಪ್ರಕರಣ ಸಾಬೀತಾಗಿರುವ ಹಿನ್ನಲೆಯಲ್ಲಿ ದೆಹಲಿ ಹೈಕೋರ್ಟ್ ಭೂಗತ ಪಾತಕಿ ಛೋಟಾ ರಾಜನ್ ಹಾಗೂ ಇತರ ಮೂವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ.
ನವದೆಹಲಿ, ಏಪ್ರಿಲ್ 25: ನಕಲಿ ಪಾಸ್ಪೋರ್ಟ್ ಪಡೆದ ಪ್ರಕರಣ ಸಾಬೀತಾಗಿರುವ ಹಿನ್ನಲೆಯಲ್ಲಿ ಭೂಗತ ಪಾತಕಿ ಛೋಟಾ ರಾಜನ್ ಹಾಗೂ ಇತರ ಮೂವರಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ದೆಹಲಿ ಹೈಕೋರ್ಟ್ ಈ ಆದೇಶ ನೀಡಿದ್ದು ನಾಲ್ವರ ಮೇಲೆಯೂ ತಲಾ 15,000 ರೂಪಾಯಿ ದಂಡವನ್ನೂ ವಿಧಿಸಿದೆ. ನಕಲಿ ಪಾಸ್ ಪೋರ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ದೊರೆ ಛೋಟಾ ರಾಜನ್ ಹಾಗೂ ಆತನಿಗೆ ನಕಲಿ ಪಾಸ್ ಪೋರ್ಟ್ ನೀಡಿದ್ದ ಮೂವರು ಪಾಸ್ ಪೋರ್ಟ್ ಅಧಿಕಾರಿಗಳನ್ನು ಅಪರಾಧಿಗಳೆಂದು ದೆಹಲಿ ಹೈಕೋರ್ಟ್ ಸೋಮವಾರ ಘೋಷಿಸಿತ್ತು. ಮತ್ತು ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಕಾಯ್ದಿರಿಸಿತ್ತು.

2017ರ ಜನವರಿಯಲ್ಲಿ ಛೋಟಾ ರಾಜನ್ ಹಾಗೂ ಆತನ ಮೂವರು ಸಹಚರರ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಇದಲ್ಲದೆ, ಈ ಪ್ರಕರಣದ ತನಿಖೆ ನಡೆಸಿದ್ದ ಕೇಂದ್ರೀಯ ತನಿಖಾ ದಳ (ಸಿಬಿಐ), ಪಾಸ್ ಪೋರ್ಟ್ ಅಧಿಕಾರಿಗಳಾದ ಜಯಶ್ರೀ ರಾಹಟೆ, ದೀಪಕ್ ನಟವರ್ ಲಾಲ್, ಲಲಿತಾ ಲಕ್ಷ್ಮಣ್ ಅವರು ನಕಲಿ ಪಾಸ್ ಪೋರ್ಟ್ ನೀಡಲು ಸಹಕರಿಸಿದ್ದಾರೆಂದು ಆರೋಪಿಸಿತ್ತಲ್ಲದೆ, ನ್ಯಾಯಾಲಯದಲ್ಲಿ ಅವರ ವಿರುದ್ಧ ಆರೋಪ ಪಟ್ಟಿಯನ್ನೂ ಸಲ್ಲಿಸಿತ್ತು.
ಈ ಪ್ರಕರಣ ನಡೆದಿದ್ದು 90ರ ದಶಕದಲ್ಲಿ. ಆಗ, ಛೋಟಾ ರಾಜನ್ ಗೆ 'ಮೋಹನ್ ಕುಮಾರ್' ಎಂಬ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಪಾಸ್ ಪೋರ್ಟ್ ನೀಡಲಾಗಿತ್ತು. ಹಲವಾರು ಪ್ರಕರಣಗಳಿಗೆ ಸಂಬಂಧಿಸಿದಂತೆ ಹಲವಾರು ದೇಶಗಳಿಗೆ ಬೇಕಿದ್ದ ಛೋಟಾ ರಾಜನ್ ಮೇಲೆ 1995ರಲ್ಲಿ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿತ್ತು. ಈ ಸಂದರ್ಭದಲ್ಲಿ ಆತ ನಕಲಿ ಪಾಸ್ ಪೋರ್ಟ್ ಪಡೆದು ತನಗೆ ಬೇಕಾದಲ್ಲಿಗೆ ಸುತ್ತಾಡಲು ಸಂಚು ರೂಪಿಸಿದ್ದ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications