ನಕಲಿ ಛಾಪಾ ಕಾಗದ ಕೇಸ್: ತೆಲಗಿ ಹಾಗೂ ಏಳು ಮಂದಿಗೆ ಖುಲಾಸೆ
ನಾಸೀಕ್(ಮಹಾರಾಷ್ಟ್ರ), ಜನವರಿ 01 : ಬಹುಕೋಟಿ ಛಾಪಾ ಕಾಗದ ಹಗರಣದ ರೂವಾರಿ ಕರೀಂ ಲಾಲಾ ತೆಲಗಿ ಸೇರಿದಂತೆ ಏಳು ಮಂದಿಗೆ ಖುಲಾಸೆಯಾಗಿದೆ. ಸರಿಯಾದ ಸಾಕ್ಷ್ಯಾಧಾರಗಳಿಲ್ಲದ ಕಾರಣ ಎಲ್ಲರನ್ನು ಖುಲಾಸೆಗೊಳಿಸಿರುವುದಾಗಿ ಮಹಾರಾಷ್ಟ್ರದ ನಾಸೀಕ್ ಕೋರ್ಟ್ ತೀರ್ಪು ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ತೆಲಗಿ ಹಾಗೂ ಅವನ ಸಹಚರರ ವಿರುದ್ಧ 42 ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ 9 ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಗೊಂಡಿದೆ. 9ರ ಪೈಕಿ ಕೆಲವು ಪ್ರಕರಣಗಳಲ್ಲಿ ತೆಲಗಿಗೆ ಜೀವಾವಧಿ ಶಿಕ್ಷೆಯಾಗಿತ್ತು.
ಛಾಪಾ ಕಾಗದ ಹಗರಣದಲ್ಲಿ 2006 ರಿಂದ ಜೈಲಿನಲ್ಲಿ ತೆಲಗಿಗೆ 30 ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. 11 ವರ್ಷಗಳ ಶಿಕ್ಷೆ ಪೂರೈಸಿದ್ದ 56 ವರ್ಷ ವಯಸ್ಸಿಕ ಕರೀಂ ಲಾಲಾ ತೆಲಗಿ 2017ರಲ್ಲಿ ಬಹು ಅಂಗಾಂಗ ವೈಫಲ್ಯದಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದ.

ಬೆಳಗಾವಿಯ ಖಾನಾಪುರ ಮೂಲದ ತೆಲಗಿ ಸೇರಿದಂತೆ ಏಳು ಮಂದಿಯ ವಿರುದ್ಧ 2004ರಲ್ಲಿ ಸಿಬಿಐ ದೋಷಾರೋಪಣ ಪಟ್ಟಿ ಸಲ್ಲಿಸಿತ್ತು. ಆದರೆ, ಆರೋಪಿಗಳ ವಿರುದ್ಧ ಸರಿಯಾದ ಸಾಕ್ಷಿ ಒದಗಿಸುವಲ್ಲಿ ವಿಫಲವಾದ ಕಾರಣ, ಎಲ್ಲರನ್ನು ಖುಲಾಸೆಗೊಳಿಸಲಾಗಿದೆ ಎಂದು ಸೆಷನ್ಸ್ ಕೋರ್ಟ್ ಜಡ್ಜ್ ಪಿಆರ್ ದೇಶ್ ಮುಖ್ ಅವರು ಆದೇಶ ನೀಡಿದ್ದಾರೆ.
ತೆಲಗಿ, ಆರ್ ಪಿಎಫ್ ಅಧಿಕಾರಿಗಳಾದ ರಂಬಾವು ಪವಾರ್, ಬ್ರಿಜ್ ಕಿಶೋರ್ ತಿವಾರಿ, ವಿಲಾಸ್ ಚಂದ್ರ ಜೋಶಿ, ಧ್ಯಾನೇಶ್ವರ್ ಬರ್ಕೆ, ಪ್ರಮುಖ ಸಹಾಗೆ, ಮೊಹಮ್ಮದ್ ಸರ್ವಾರ್ ಹಾಗೂ ವಿಲಾಸ್ ಮೋರೆ ಅವರಿಗೆ ಈ ಪ್ರಕರಣದಿಂದ ಖುಲಾಸೆಯಾಗಿದೆ.(ಪಿಟಿಐ)
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications