Fact Check: ಗಾಲ್ವಾನ್ ಕಣಿವೆಯಲ್ಲಿ ಇಂದಿರಾಗಾಂಧಿ ಭಾಷಣ ಚಿತ್ರ?
ನವದೆಹಲಿ, ಜೂನ್ 23: ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ತಮ್ಮ ಆಡಳಿತಾವಧಿಯಲ್ಲಿ ಸೇನೆಯನ್ನು ಉದ್ದೇಶಿಸಿ ಮಾತನಾಡಲು ಕಾಶ್ಮೀರದ ಕಣಿವೆಗೆ ಭೇಟಿ ನೀಡಿದ್ದರು, ಗಾಲ್ವಾನ್ ಕಣಿವೆಯಲ್ಲಿ ಸೈನಿಕರನ್ನು ಹುರಿದುಂಬಿಸಿ ಭಾಷಣ ಮಾಡಿದ್ದರು ಎಂದು ಸುದ್ದಿ ಈಗ ಹರಿದಾಡುತ್ತಿದೆ. ಇದಕ್ಕೆ ಪೂರಕವಾಗಿ ಚಿತ್ರವೊಂದು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ.
Recommended Video
ಉತ್ತರಪ್ರದೇಶದ ಕಾಂಗ್ರೆಸ್ ಘಟಕ ಸೇರಿದಂತೆ ಅನೇಕ ಮಂದಿ ಟ್ವಿಟ್ಟರ್ ನಲ್ಲಿ ಈ ಚಿತ್ರವನ್ನು ಹಂಚಿಕೊಂಡಿದ್ದಾರೆ. ಗಾಲ್ವಾನ್ ಕಣಿವೆಯಲ್ಲಿ ಸೈನಿಕರನ್ನು ಉದ್ದೇಶಿಸಿ ಮಾತನಾಡಿದ ಚಿತ್ರ ಎಂದು ಹೇಳಲಾಗಿದೆ.
ಜೂನ್ 15/16ರಂದು ಲಡಾಕ್ ಪೂರ್ವ ಭಾಗದ ಇದೇ ಗಾಲ್ವಾನ್ ಕಣಿವೆಯಲ್ಲಿ ಭಾರತ ಹಾಗೂ ಚೀನಾದಲ್ಲಿ ಉಭಯ ದೇಶಗಳ ಸೈನಿಕರ ನಡುವೆ ನಡೆದ ಸಂಘರ್ಷದಲ್ಲಿ ಸಾವು ನೋವುಗಳು ಸಂಭವಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಸತ್ಯಾಸತ್ಯತೆ: 1971ರಲ್ಲಿ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (ಪಿಟಿಐ) ತೆಗೆದ ಚಿತ್ರ ಇದಾಗಿದ್ದು, ಗಾಲ್ವಾನ್ ಕಣಿವೆಯಿಂದ ಸುಮಾರು 200ಕ್ಕೂ ಅಧಿಕ ಕಿ. ಮೀ ದೂರದ ಲೆಹ್ ನಲ್ಲಿ ತೆಗೆದ ಚಿತ್ರವಾಗಿದೆ.
ಸಾಮಾಜಿಕ ಜಾಲ ತಾಣಗಳಲ್ಲಿ ಹೇಳಿದಂತೆ ಇದು ಗಾಲ್ವಾನ್ ಕಣಿವೆಯಲ್ಲಿ ತೆಗೆದ ಚಿತ್ರವಲ್ಲ ಎಂದು ಸುದ್ದಿ ಸಂಸ್ಥೆ ಸ್ಪಷ್ಟಪಡಿಸಿದೆ. ಈ ಚಿತ್ರದ ಮೂಲ ಲೇಖನದ ಲಿಂಕ್ ಇಲ್ಲಿದೆ ಗಾಲ್ವಾನ್ ಕಣಿವೆಯಲ್ಲಿನ ಹಳೆ ಚಿತ್ರ, ವಿಡಿಯೋಗಳನ್ನು ಈಗ ಹಂಚಲಾಗುತ್ತಿದ್ದು, ಸತ್ಯಾಸತ್ಯತೆ ಪರಿಶೀಲಿಸದೆ ಸಾಮಾಜಿಕ ಜಾಲ ತಾಣದಲ್ಲಿ ಹಂಚಿಕೊಳ್ಳಬೇಡಿ ಎಂದು ಪಿಐಬಿ ಕೂಡಾ ಎಚ್ಚರಿಕೆ ನೀಡಿದೆ.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್








Click it and Unblock the Notifications