ಅಸ್ಸಾಂ ಖ್ಯಾತ ಕವಿ ನೀಲ್ಮಣಿ ಫೂಕನ್ರಿಗೆ ಜ್ಞಾನಪೀಠ ಪ್ರಶಸ್ತಿ
ನವದೆಹಲಿ, ಡಿಸೆಂಬರ್ 7: ಖ್ಯಾತ ಅಸ್ಸಾಮಿ ಕವಿ ಹಾಗೂ ಸಾಹಿತಿ ನೀಲ್ಮಣಿ ಫೂಕನ್ ಅವರು ಭಾರತದ ಅತ್ಯುನ್ನತ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ವರ್ಷ 56ನೇ ಜ್ಞಾನಪೀಠ ಪ್ರಶಸ್ತಿಗೆ ನೀಲ್ಮಣಿ ಫೂಕನ್ ಆಯ್ಕೆ ಆಗಿದ್ದಾರೆ. ನೀಲ್ಮಣಿ ಫೂಕನ್ ಜೊತೆಗೆ ಕೊಂಕಣಿ ಬರಹಗಾರ ದಾಮೋದರ್ ಮೌಜೊ ಕೂಡ ಪ್ರತಿಷ್ಠಿತ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಪ್ರತಿಷ್ಠಿತ ಕವಿ ನೀಲ್ಮಣಿ ಫೂಕನ್ ಅಸ್ಸಾಂನ ಜೋರ್ಹತ್ ಬಳಿಯ ದೇರ್ಗಾಂವ್ನಲ್ಲಿ ಜನಿಸಿದರು. ವಿಶೇಷವಾಗಿ ಇವರು ಭಾಷೆ ಮತ್ತು ಕಲಾತ್ಮಕ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ಹೀಗಾಗಿ ನೀಲ್ಮಣಿ ಶ್ರೀಮಂತ ಜಾನಪದ ಸಂಸ್ಕೃತಿ ಮತ್ತು ಸ್ಥಳೀಯ ಜೀವನದ ಬದಲಾವಣೆಗಳಲ್ಲಿ ತೀವ್ರ ಆಸಕ್ತಿ ಬೆಳೆಸಿಕೊಂಡಿದ್ದರು. ಅವರು ಅಸ್ಸಾಂನ ಪ್ರಮುಖ ಕಲಾ ತಜ್ಞರು ಮತ್ತು ಬುಡಕಟ್ಟು ಹಾಗೂ ಜಾನಪದ ಕಲೆಯ ಪ್ರಜ್ಞಾಪೂರ್ವಕ ವಿಮರ್ಶಕರಲ್ಲಿ ಒಬ್ಬರಾಗಿದ್ದಾರೆ.
ಖ್ಯಾತ ಕವಿ ಎನಿಸಿಕೊಂಡಿರುವ ನೀಲ್ಮಣಿ ಫೂಕನ್ ಅವರು ಐವತ್ತರ ದಶಕದಲ್ಲಿ ಕವನಗಳನ್ನು ಬರೆಯಲು ಪ್ರಾರಂಭಿಸಿದರು. ಆದಾಗ್ಯೂ, ಯುದ್ಧ ನಂತರದಲ್ಲಿ ಅವಧಿಯಲ್ಲಿ ವಿಶಿಷ್ಟ ಕವಿಗಳ ಸಾಲಿನಲ್ಲಿ ಅವರನ್ನು ಗುರುತಿಸಲಾಯಿತು. ಅಸ್ಸಾಮಿ ಕಾವ್ಯದಲ್ಲಿ ಆಧುನಿಕತಾವಾದದ ಪ್ರವರ್ತಕರಲ್ಲಿ ಒಬ್ಬರೆಂದು ನೀಲ್ಮಣಿ ಪೂಕನ್ ಗುರುತಿಸಿಕೊಂಡರು.

ಕಳೆದ 1981ರಲ್ಲಿ ನೀಲ್ಮಣಿ ಪೂಕನ್ ಅವರ ಕವಿತಾ (ಕೋಬಿತಾ) ಕವನ ಸಂಕಲನಕ್ಕಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ನೀಡಲಾಯಿತು. 1990ರಲ್ಲಿ ಪೂಕನ್ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿದ್ದು, 2002ರಲ್ಲಿ ಸಾಹಿತ್ಯ ಅಕಾಡೆಮಿ ಫೆಲೋಶಿಪ್ ಪಡೆದುಕೊಂಡರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications