ಅಸ್ಸಾಂ ಖ್ಯಾತ ಕವಿ ನೀಲ್ಮಣಿ ಫೂಕನ್ರಿಗೆ ಜ್ಞಾನಪೀಠ ಪ್ರಶಸ್ತಿ
ನವದೆಹಲಿ, ಡಿಸೆಂಬರ್ 7: ಖ್ಯಾತ ಅಸ್ಸಾಮಿ ಕವಿ ಹಾಗೂ ಸಾಹಿತಿ ನೀಲ್ಮಣಿ ಫೂಕನ್ ಅವರು ಭಾರತದ ಅತ್ಯುನ್ನತ ಜ್ಞಾನಪೀಠ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ವರ್ಷ 56ನೇ ಜ್ಞಾನಪೀಠ ಪ್ರಶಸ್ತಿಗೆ ನೀಲ್ಮಣಿ ಫೂಕನ್ ಆಯ್ಕೆ ಆಗಿದ್ದಾರೆ. ನೀಲ್ಮಣಿ ಫೂಕನ್ ಜೊತೆಗೆ ಕೊಂಕಣಿ ಬರಹಗಾರ ದಾಮೋದರ್ ಮೌಜೊ ಕೂಡ ಪ್ರತಿಷ್ಠಿತ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಪ್ರತಿಷ್ಠಿತ ಕವಿ ನೀಲ್ಮಣಿ ಫೂಕನ್ ಅಸ್ಸಾಂನ ಜೋರ್ಹತ್ ಬಳಿಯ ದೇರ್ಗಾಂವ್ನಲ್ಲಿ ಜನಿಸಿದರು. ವಿಶೇಷವಾಗಿ ಇವರು ಭಾಷೆ ಮತ್ತು ಕಲಾತ್ಮಕ ಹಿನ್ನೆಲೆಯಿಂದ ಬಂದವರಾಗಿದ್ದಾರೆ. ಹೀಗಾಗಿ ನೀಲ್ಮಣಿ ಶ್ರೀಮಂತ ಜಾನಪದ ಸಂಸ್ಕೃತಿ ಮತ್ತು ಸ್ಥಳೀಯ ಜೀವನದ ಬದಲಾವಣೆಗಳಲ್ಲಿ ತೀವ್ರ ಆಸಕ್ತಿ ಬೆಳೆಸಿಕೊಂಡಿದ್ದರು. ಅವರು ಅಸ್ಸಾಂನ ಪ್ರಮುಖ ಕಲಾ ತಜ್ಞರು ಮತ್ತು ಬುಡಕಟ್ಟು ಹಾಗೂ ಜಾನಪದ ಕಲೆಯ ಪ್ರಜ್ಞಾಪೂರ್ವಕ ವಿಮರ್ಶಕರಲ್ಲಿ ಒಬ್ಬರಾಗಿದ್ದಾರೆ.
ಖ್ಯಾತ ಕವಿ ಎನಿಸಿಕೊಂಡಿರುವ ನೀಲ್ಮಣಿ ಫೂಕನ್ ಅವರು ಐವತ್ತರ ದಶಕದಲ್ಲಿ ಕವನಗಳನ್ನು ಬರೆಯಲು ಪ್ರಾರಂಭಿಸಿದರು. ಆದಾಗ್ಯೂ, ಯುದ್ಧ ನಂತರದಲ್ಲಿ ಅವಧಿಯಲ್ಲಿ ವಿಶಿಷ್ಟ ಕವಿಗಳ ಸಾಲಿನಲ್ಲಿ ಅವರನ್ನು ಗುರುತಿಸಲಾಯಿತು. ಅಸ್ಸಾಮಿ ಕಾವ್ಯದಲ್ಲಿ ಆಧುನಿಕತಾವಾದದ ಪ್ರವರ್ತಕರಲ್ಲಿ ಒಬ್ಬರೆಂದು ನೀಲ್ಮಣಿ ಪೂಕನ್ ಗುರುತಿಸಿಕೊಂಡರು.

ಕಳೆದ 1981ರಲ್ಲಿ ನೀಲ್ಮಣಿ ಪೂಕನ್ ಅವರ ಕವಿತಾ (ಕೋಬಿತಾ) ಕವನ ಸಂಕಲನಕ್ಕಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ನೀಡಲಾಯಿತು. 1990ರಲ್ಲಿ ಪೂಕನ್ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿದ್ದು, 2002ರಲ್ಲಿ ಸಾಹಿತ್ಯ ಅಕಾಡೆಮಿ ಫೆಲೋಶಿಪ್ ಪಡೆದುಕೊಂಡರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications