ಪ್ರಸಿದ್ಧ ಆಯುರ್ವೇದ ವೈದ್ಯ ಪಿ.ಕೆ. ವಾರಿಯರ್ ನಿಧನ
ಮಲಪ್ಪುರಂ, ಜುಲೈ 10: ಸುಪ್ರಸಿದ್ಧ ಆಯುರ್ವೇದ ವೈದ್ಯ, ಕೊಟ್ಟಕ್ಕಲ್ ಆರ್ಯ ವೈದ್ಯ ಶಾಲೆಯ ಟ್ರಸ್ಟಿ ಡಾ. ಪಿ.ಕೆ. ವಾರಿಯರ್ ಅವರು ಶನಿವಾರ ಮಧ್ಯಾಹ್ನ ನಿಧನರಾಗಿರುವುದಾಗಿ ಕುಟುಂಬ ಮೂಲಗಳು ತಿಳಿಸಿವೆ. ಅವರಿಗೆ 100 ವರ್ಷವಾಗಿತ್ತು.
ವಿಶ್ವದಾದ್ಯಂತ ಆಯುರ್ವೇದ ಚಿಕಿತ್ಸಾ ಪದ್ಧತಿಯನ್ನು ಜನಪ್ರಿಯಗೊಳಿಸಿದ ಕೀರ್ತಿ ವಾರಿಯರ್ ಅವರದ್ದು. ತಮ್ಮ ಜೀವಿತಾವಧಿಯಲ್ಲಿ ಜಗತ್ತಿನಾದ್ಯಂತ ಸಾವಿರಾರು ಜನರಿಗೆ ಆಯುರ್ವೇದ ಚಿಕಿತ್ಸೆ ನೀಡಿ ಗುಣಮುಖರನ್ನಾಗಿ ಮಾಡಿದ್ದರು. ಪ್ರಪಂಚದ ಹಲವು ಕಡೆಗಳಿಂದ ಇವರ ಬಳಿ ಚಿಕಿತ್ಸೆಗೆ ಬರುತ್ತಿದ್ದರು.
1921ರ ಜೂನ್ 5ರಂದು ಪನ್ನಿಯಂಪಿಲ್ಲಿ ಕೃಷ್ಣಂಕುಟ್ಟಿ ವಾರಿಯರ್ ಅವರು ಜನಿಸಿದರು. ಆಯುರ್ವೇದ ಚಿಕಿತ್ಸಾ ಪದ್ಧತಿಯಲ್ಲಿ ಪ್ರಾವೀಣ್ಯ ಗಳಿಸಿದ್ದ ವಾರಿಯರ್ ಅವರು ವಿಶ್ವದಾದ್ಯಂತ ಆಯುರ್ವೇದ ಪದ್ಧತಿ ಪ್ರಚುರಪಡಿಸುವಲ್ಲಿ ಶ್ರಮವಹಿಸಿದ್ದರು.

20ನೇ ವಯಸ್ಸಿಗೆ ಕೊಟ್ಟಕ್ಕಲ್ ಆರ್ಯವೈದ್ಯ ಶಾಲೆಗೆ ಸೇರಿದರು. ಸ್ವಾತಂತ್ರ್ಯ ಚಳವಳಿಯಲ್ಲೂ ವಾರಿಯರ್ ಭಾಗವಹಿಸಿದ್ದರು. ನಂತರ ತಮ್ಮ 24ನೇ ವಯಸ್ಸಿನಲ್ಲಿ ಕೊಟ್ಟಕ್ಕಲ್ ಆರ್ಯ ವೈದ್ಯ ಶಾಲೆಗೆ ಟ್ರಸ್ಟಿ ಆಗಿ ಸೇರಿದರು.
ಭಾರತ ಸರ್ಕಾರ 1999ರಲ್ಲಿ ಪದ್ಮಶ್ರೀ ಹಾಗೂ 2010ರಲ್ಲಿ ಪದ್ಮಭೂಷಣ ನೀಡುವ ಮೂಲಕ ವಾರಿಯರ್ ಅವರನ್ನು ಗೌರವಿಸಿದೆ.
ವಾರಿಯರ್ ಅವರ ನಿಧನಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್, ರಾಜ್ಯಪಾಲ ಅರಿಫ್ ಮೊಹಮದ್ ಖಾನ್, ಆರೋಗ್ಯ ಸಚಿವೆ ವೀಣಾ ಜಾರ್ಜ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
"ವಾರಿಯರ್ ಅವರು ಕೇರಳದ ಆಯುರ್ವೇದದ ಪಿತಾಮಹರಾಗಿದ್ದರು" ಎಂದು ಸಿಎಂ ಪಿಣರಾಯಿ ವಿಜಯನ್ ಸ್ಮರಿಸಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications