ಹಿಂದುಯೇತರರಿಗೆ ಗುರುವಾಯೂರು ದೇಗುಲ ಪ್ರವೇಶ: ಮಹತ್ವದ ನಿರ್ಧಾರ?
ತಿರುವನಂತಪುರಂ, ಅ 25: ರಾಜ್ಯದ ದೇವಸ್ಥಾನಗಳಿಗೆ ದಲಿತ ಅರ್ಚಕರನ್ನು ನೇಮಿಸಿ ಕ್ರಾಂತಿಕಾರಿ ಹೆಜ್ಜೆ ಆರಂಭಿಸಿದ್ದ ಕೇರಳದ ಪಿಣರಾಯಿ ವಿಜಯನ್ ಸರಕಾರ, ರಾಜ್ಯದ ಪುರಾಣ ಪ್ರಸಿದ್ದ ಗುರುವಾಯೂರು ಶ್ರೀಕೃಷ್ಣ ದೇವಾಲಯ ಪ್ರವೇಶಕ್ಕೂ ಹೊಸ ಮುನ್ನುಡಿ ಬರೆಯವ ಸಾಧ್ಯತೆಯಿದೆ.
ದಕ್ಷಿಣ ದ್ವಾರಕೆ ಎಂದೇ ಹೆಸರಾಗಿರುವ ಗುರುವಾಯೂರು ದೇವಾಲಯಕ್ಕೆ ಹಿಂದುಯೇತರರಿಗೆ ಪ್ರವೇಶವಿರಲಿಲ್ಲ. ಈಗ ಇತರ ಕೋಮಿನವರಿಗೂ ದೇವಾಲಯ ಪ್ರವೇಶಕ್ಕೆ ನಮ್ಮದೇನೂ ಅಭ್ಯಂತರವಿಲ್ಲ ಎಂದು ದೇವಾಲಯದ ಅರ್ಚಕ ಮಂಡಳಿ ಮಹತ್ವದ ನಿರ್ಧಾರ ತೆಗೆದುಕೊಂಡು, ಕೇರಳ ಸರಕಾರಕ್ಕೆ ಪತ್ರ ಬರೆದಿದೆ.

ದೇವಾಲಯದ ಪ್ರಧಾನ ಅರ್ಚಕ (ತಂತ್ರಿ) ದಿನೇಶನ್ ನಂಬೂದಿರಿ, ಕೇರಳ ಸರಕಾರಕ್ಕೆ ಪತ್ರ ಬರೆದು, ಹಿಂದುಯೇತರರಿಗೆ ದೇವಾಲಯ ಪ್ರವೇಶಕ್ಕಿದ್ದ ನಿರ್ಬಂಧ ತೆಗೆದುಹಾಕಲು ನಮ್ಮದೇನೂ ತಕರಾರಿಲ್ಲ. ಎಲ್ಲಾ ಕೋಮಿನವರಿಗೂ ದೇವಾಲಯದ ಪ್ರವೇಶ ಮುಕ್ತವಾಗಲಿ, ಈ ಸಂಬಂಧ ರಾಜ್ಯ ಸರಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ದ ಎಂದು ನಂಬೂದಿರಿ ಹೇಳಿದ್ದಾರೆ.
ಹಿಂದೂ ಧರ್ಮದಲ್ಲಿ ನಂಬಿಕೆಯಿರುವ ಎಲ್ಲರಿಗೂ ದೇವಾಲಯ ಪ್ರವೇಶ ಮುಕ್ತವಾಗಿರಬೇಕು. ಹಿಂದಿನ ಪದ್ದತಿಗಳನ್ನು ಇನ್ನೂ ಮುಂದುವರಿಸಿಕೊಂಡು ಹೋಗದೇ, ಕಾಲಕ್ಕೆ ತಕ್ಕಂತೆ ಬದಲಾಗುವ ಅವಶ್ಯಕತೆಯಿದೆ ಎಂದು ದಿನೇಶನ್ ನಂಬೂದಿರಿ, ಅರ್ಚಕ ಮಂಡಳಿಯ ಪರವಾಗಿ ಸರಕಾರಕ್ಕೆ ಬರೆದ ಪತ್ರದಲ್ಲಿ ಹೇಳಿದ್ದಾರೆ.
ಗುರುವಾಯೂರು ಅರ್ಚಕ ಮಂಡಳಿಯ ನಿರ್ಧಾರಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದ್ದು, ಯಾವ ಧರ್ಮದವರಾದರೇನು, ಎಲ್ಲರಿಗೂ ದೇವಾಲಯಕ್ಕೆ ಪ್ರವೇಶವಿರಬೇಕು. ಅರ್ಚಕರ ನಿರ್ಧಾರ ಶ್ಲಾಘನೀಯ ಎಂದು ಕಮ್ಯೂನಿಸ್ಟ್ ಮುಖಂಡರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
ಅರ್ಚಕ ಮಂಡಳಿಯ ಪತ್ರದ ಆಧಾರದ ಮೇಲೆ, ರಾಜ್ಯ ಸರಕಾರ ದೇವಾಲಯ ಪ್ರವೇಶ ಎಲ್ಲರಿಗೂ ಮುಕ್ತ ಎಂದು ಘೋಷಿಸುವ ಸಾಧ್ಯತೆಯಿದೆ. ವಿದೇಶಿಯರಿಗೆ ಮತ್ತು ಹಿಂದೂ ಧರ್ಮಕ್ಕೆ ಸೇರದ ಅನ್ಯಧರ್ಮೀಯರಿಗೆ ಗುರುವಾಯೂರು ಕೃಷ್ಣ ದೇಗುಲದಲ್ಲಿ ಪ್ರವೇಶ ನಿಷಿದ್ಧವಾಗಿದೆ.
ಹುಟ್ಟಿನಿಂದ ಕ್ರೈಸ್ತ ಧರ್ಮಕ್ಕೆ ಸೇರಿರುವ ಹೆಸರಾಂತ ಗಾಯಕ ಡಾ. ಕೆ ಜೆ ಯೇಸುದಾಸ್ ಅವರನ್ನೂ ಕೂಡಾ ಈ ಹಿಂದೆ ಗುರುವಾಯೂರು ದೇಗುಲದ ಒಳಗೆ ಬಿಟ್ಟಿರಲಿಲ್ಲ. ಹಿಂದೂ ಧರ್ಮದ ಮೇಲೆ ನನಗೆ ನಂಬಿಕೆಯಿದೆ ಎಂದು ಯೇಸುದಾಸ್ ಅಫಿಡವಿಟ್ ಸಲ್ಲಿಸಿದ ನಂತರ ದೇವಾಲಯ ಪ್ರವೇಶಕ್ಕೆ ಅನುಮತಿ ನೀಡಲಾಗಿತ್ತು.
ಮಾಜಿ ಪ್ರಧಾನಿ ಇಂದಿರಾ ಗಾಂಧಿ, ಪಾರ್ಸಿ ಮೂಲದ ವ್ಯಕ್ತಿಯನ್ನು ಮದುವೆಯಾಗಿದ್ದಾರೆ ಎಂಬ ಕಾರಣಕ್ಕೆ ಗುರುವಾಯೂರು ದೇವಳಕ್ಕೆ ಪ್ರವೇಶ ನಿರಾಕರಿಸಿದ್ದು ಭಾರಿ ಸುದ್ದಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications