ಬದಲಾವಣೆ ಮಾಡದಿರಲು ಕೃಷಿ ಕಾಯ್ದೆ ಧಾರ್ಮಿಕ ಗ್ರಂಥವೇ?; ಅಬ್ದುಲ್ಲಾ
ನವದೆಹಲಿ, ಫೆಬ್ರುವರಿ 10: ಕೇಂದ್ರ ಸರ್ಕಾರ ಪರಿಚಯಿಸಿರುವ ಮೂರು ಕೃಷಿ ಕಾಯ್ದೆಗಳು, ಬದಲಾವಣೆ ಮಾಡಲು ಸಾಧ್ಯವಾಗದ ಧಾರ್ಮಿಕ ಗ್ರಂಥಗಳೇನಲ್ಲ ಎಂದಿರುವ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ, ಹೋರಾಟ ನಡೆಸುತ್ತಿರುವ ರೈತರೊಂದಿಗೆ ಮಾತುಕತೆ ನಡೆಸಿ, ಸರ್ಕಾರ ಶೀಘ್ರವೇ ಒಂದು ಪರಿಹಾರ ಕಂಡುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಮಂಗಳವಾರ ಲೋಕಸಭೆಯಲ್ಲಿ ದೆಹಲಿಯಲ್ಲಿ ರೈತರ ಪ್ರತಿಭಟನೆ ಕುರಿತು ಪ್ರಸ್ತಾಪ ಮಾಡಿದ ಅವರು, "ರೈತರ ಕುರಿತು ನಾನು ಈ ಮನವಿ ಮಾಡುತ್ತಿದ್ದೇನೆ. ನೀವು ಪರಿಚಯಿಸಿರುವ ಈ ಕೃಷಿ ಕಾಯ್ದೆಗಳು ಬದಲಾವಣೆಯನ್ನೇ ಮಾಡಲು ಸಾಧ್ಯವಾಗದ ಧಾರ್ಮಿಕ ಗ್ರಂಥಗಳಲ್ಲ. ಬದಲಾವಣೆ ಮಾಡಬಾರದು ಎಂದೇನೂ ಇಲ್ಲ. ನಾವು ಕಾನೂನನ್ನು ರೂಪಿಸಿದ್ದೇವೆ. ರೈತರಿಗೆ ಅದು ಬೇಡವೆಂದರೆ, ಅವರೊಂದಿಗೆ ಏಕೆ ನೀವು ಸೂಕ್ತ ರೀತಿ ಮಾತನಾಡುತ್ತಿಲ್ಲ?" ಎಂದು ಪ್ರಶ್ನಿಸಿದ್ದಾರೆ.
"ನಿಮ್ಮ ಮುಂದೆ ಕೈಕಟ್ಟಿ ಕೇಳಿಕೊಳ್ಳುತ್ತೇನೆ. ನಮ್ಮ ಪ್ರತಿಷ್ಠೆ ಮೇಲೆ ನಾವು ನಿಲ್ಲಬಾರದು. ಇದು ನಮ್ಮ ದೇಶ. ಈ ದೇಶಕ್ಕೆ ನಾವೆಲ್ಲರೂ ಸೇರಿದ್ದೇವೆ. ನಾವು ಈ ದೇಶದಲ್ಲಿದ್ದ ಮೇಲೆ ಇಲ್ಲಿರುವ ಎಲ್ಲರನ್ನೂ ಗೌರವಿಸುವುದು ನಮ್ಮ ಕರ್ತವ್ಯ. ಹೀಗಾಗಿ ಒಂದು ಪರಿಹಾರ ಕಂಡುಕೊಳ್ಳಿ" ಎಂದು ಮನವಿ ಮಾಡಿದ್ದಾರೆ.

ಶ್ರೀರಾಮನ ಕುರಿತು ಮಾತನಾಡಿದ ಅವರು, "ಶ್ರೀರಾಮ ಎಲ್ಲರಿಗೂ ಸೇರಿದವನು. ಕುರಾನ್ ಕೂಡ ಎಲ್ಲರಿಗೂ ಸೇರಿದ್ದು" ಎಂದು ಪುನರುಚ್ಚರಿಸಿದ್ದಾರೆ. ಭಾರತದಲ್ಲಿನ ಲಸಿಕಾ ಅಭಿಯಾನದ ಕುರಿತು ಶ್ಲಾಘನೆ ವ್ಯಕ್ತಪಡಿಸಿ, ಲಸಿಕೆ ಅಭಿವೃದ್ಧಿಪಡಿಸಿದ ಭಾರತದ ವಿಜ್ಞಾನಿಗಳಿಗೆ ಹಾಗೂ ಸೆರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾಗೆ ಧನ್ಯವಾದ ಸಲ್ಲಿಸಿದರು.
-
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ












Click it and Unblock the Notifications