ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರ ಪ್ರತಿಭಟನೆ 9ನೇ ದಿನಕ್ಕೆ; 6ನೇ ಸುತ್ತಿನ ಮಾತುಕತೆ ಡಿ.9ಕ್ಕೆ

|
Google Oneindia Kannada News

ನವದೆಹಲಿ, ಡಿಸೆಂಬರ್ 6: ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಕೇಂದ್ರ ಸರ್ಕಾರದ ಜೊತೆಗಿನ 5ನೇ ಸುತ್ತಿನ ಮಾತುಕತೆ ವಿಫಲವಾಗಿದೆ. ರೈತರ ಪ್ರತಿಭಟನೆ 9ನೇ ದಿನಕ್ಕೆ ಕಾಲಿಟ್ಟಿದ್ದು, ಡಿಸೆಂಬರ್ 8ರಂದು ಭಾರತ್ ಬಂದ್‌ಗೆ ಸಹ ಕರೆ ನೀಡಲಾಗಿದೆ.

ಉತ್ತರ ಪ್ರದೇಶ-ದೆಹಲಿ ಗಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಡಿಸೆಂಬರ್ 9ರಂದು ರೈತರ ಜೊತೆ 6ನೇ ಸುತ್ತಿನ ಮಾತುಕತೆಗೆ ಕೇಂದ್ರ ಸರ್ಕಾರ ದಿನಾಂಕ ನಿಗದಿ ಮಾಡಿದೆ.

ಸರ್ಕಾರಕ್ಕೆ ಇದು ಕೊನೆ ಅವಕಾಶ: ರೈತ ಸಂಘಟನೆಗಳ ಎಚ್ಚರಿಕೆಸರ್ಕಾರಕ್ಕೆ ಇದು ಕೊನೆ ಅವಕಾಶ: ರೈತ ಸಂಘಟನೆಗಳ ಎಚ್ಚರಿಕೆ

Farmers Protest Enteres 9th Day

ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುತ್ತೀರೋ?, ಇಲ್ಲವೋ? ಎಂಬುದಕ್ಕೆ ಹೌದು ಅಥವ ಇಲ್ಲ ಎಂಬ ಉತ್ತರವನ್ನು ಮಾತ್ರ ನೀಡಬೇಕು ಎಂದು ರೈತರು ಪಟ್ಟು ಹಿಡಿದರು. ಇದರಿಂದಾಗಿ ಶನಿವಾರ ನಡೆದ ಮಾತುಕತೆ ವಿಫಲವಾಗಿದೆ.

ನಾವು ಅಧಿಕಾರಕ್ಕೆ ಬಂದರೆ 3 ರೈತ ವಿರೋಧಿ ಕಾನೂನುಗಳು ರದ್ದು: ಕಾಂಗ್ರೆಸ್ ನಾವು ಅಧಿಕಾರಕ್ಕೆ ಬಂದರೆ 3 ರೈತ ವಿರೋಧಿ ಕಾನೂನುಗಳು ರದ್ದು: ಕಾಂಗ್ರೆಸ್

ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಕುರಿತು ಸಮಗ್ರವಾದ ಚರ್ಚೆ ಆಗಬೇಕಿದೆ. ಅದಕ್ಕೆ ಸ್ವಲ್ಪ ಸಮಯ ಬೇಕು ಎಂದು ಸರ್ಕಾರದ ಪ್ರತಿನಿಧಿಗಳು ಹೇಳಿದ್ದಾರೆ. ಆದ್ದರಿಂದ, ರೈತರ ಜೊತೆಗಿನ ಮಾತುಕತೆ ವಿಫಲವಾಗಿದ್ದು, ಡಿಸೆಂಬರ್ 9ರಂದು ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ.

ರೈತ ಸಂಘಟನೆಗಳ ಒಕ್ಕೂಟದಿಂದ ಪ್ರಧಾನಿ ಮೋದಿಗೆ ಪತ್ರರೈತ ಸಂಘಟನೆಗಳ ಒಕ್ಕೂಟದಿಂದ ಪ್ರಧಾನಿ ಮೋದಿಗೆ ಪತ್ರ

ಡಿಸೆಂಬರ್ 8ರಂದು ರೈತರು ಭಾರತ್ ಬಂದ್‌ಗೆ ಕರೆ ನೀಡಿದ್ದಾರೆ. ರೈತರ ಜೊತೆಗಿನ ಮಾತುಕತೆ ವಿಫಲವಾದ ಹಿನ್ನಲೆಯಲ್ಲಿ ಭಾರತ್ ಬಂದ್ ನಡೆಯುವುದು ಬಹುತೇಕ ಖಚಿತವಾಗಿದೆ. ಎಡಪಕ್ಷಗಳು ಸಹ ಭಾರತ್ ಬಂದ್‌ಗೆ ಬೆಂಬಲ ನೀಡಿವೆ.

English summary
Farmers protest entered Day 9th. Farmers at Uttar Pradesh-New Delhi border. 6 round of talks between farmers and the union government is scheduled to take place on December 9.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X