Kangana Ranaut: ಕಂಗನಾ ರನೌತ್ ಕೆನ್ನೆಗೆ ಬಾರಿಸಿದ ಕುಲ್ವಿಂದರ್ ಕೌರ್ಗೆ ರೈತರ ಬೆಂಬಲ
ಗುರುವಾರ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಬಿಜೆಪಿ ನೂತನ ಸಂಸದರಾಗಿ ಆಯ್ಕೆಯಾಗಿರುವ ಕಂಗನಾ ರನೌತ್ಗೆ ಕಪಾಳಮೋಕ್ಷ ಮಾಡಿದ ಸಿಐಎಸ್ಎಫ್ ಕಾನ್ಸ್ಟೆಬಲ್ಗೆ ಬೆಂಬಲ ಸೂಚಿಸಿ ಹಲವು ರೈತ ಸಂಘಗಳು ಪ್ರತಿಭಟನಾ ರ್ಯಾಲಿಯನ್ನು ಆಯೋಜಿಸಲು ಯೋಜಿಸಿವೆ.
ಕಾನ್ಸ್ಟೇಬಲ್ ಕುಲ್ವಿಂದರ್ ಕೌರ್ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳದಂತೆ ಒತ್ತಾಯಿಸಿ ರೈತರ ಸಂಘಟನೆಗಳು ಜೂನ್ 9 ರಂದು ಪಂಜಾಬ್ನ ಮೊಹಾಲಿಯಲ್ಲಿ ಇನ್ಸಾಫ್ (ನ್ಯಾಯ) ಮೆರವಣಿಗೆಯನ್ನು ಯೋಜಿಸಿವೆ. ವಿಮಾನ ನಿಲ್ದಾಣದಲ್ಲಿ ಘಟನೆಗೆ ಕಾರಣವಾದ ಘಟನೆಗಳ ಸಂಪೂರ್ಣ ಸೂಕ್ತ ತನಿಖೆ ನಡೆಸಬೇಕೆಂದು ಒತ್ತಾಯ ಮಾಡಿದ್ದಾರೆ.

ರೈತರ ಬಗ್ಗೆ ಹೇಳಿಕೆ ನೀಡಿದ್ದಕ್ಕೆ ಏಟು
ಚಂಡೀಗಢ ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆ ವೇಳೆ ಮಹಿಳಾ ಪೇದೆಯೊಬ್ಬರು ತನಗೆ ಕಪಾಳಮೋಕ್ಷ ಮಾಡಿದ್ದಾರೆ ಎಂದು ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿಯಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದೆ ಕಂಗನಾ ರನೌತ್ ಗುರುವಾರ ಆರೋಪಿಸಿದ್ದಾರೆ.
ರೈತರ ಪ್ರತಿಭಟನೆ ಸಂದರ್ಭದಲ್ಲಿ ಭಾಗವಹಿಸಿದ್ದ ಮಹಿಳೆಯರ ಬಗ್ಗೆ ಕಂಗನಾ ರನೌತ್ ಅವರು ನೀಡಿದ್ದ ಹೇಳಿಕೆ ಈ ಘಟನೆಗೆ ಕಾರಣವಾಗಿದೆ. 100 ರೂಪಾಯಿ ಹಣ ಪಡೆದು ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ, ಎಂದು ಕಂಗನಾ ರನೌತ್ಗೆ ಹೇಳಿದ್ದರು, ಆ ಪ್ರತಿಭಟನೆಯಲ್ಲಿ ನನ್ನ ತಾಯಿ ಕೂಡ ಇದ್ದರು ಎಂದು ಕುಲ್ವಿಂದರ್ ಕೌರ್ ವಿಡಿಯೋದಲ್ಲಿ ಹೇಳಿದ್ದರು.
ಪ್ರಮುಖ ರೈತ ಸಂಘಟನೆಗಳಾದ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಶುಕ್ರವಾರ ಕುಲ್ವಿಂದರ್ ಕೌರ್ ಅವರ ಬೆಂಬಲಕ್ಕೆ ನಿಂತಿವೆ. ಎಸ್ಕೆಎಂ (ರಾಜಕೀಯೇತರ) ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸರ್ವಾನ್ ಸಿಂಗ್ ಪಂಧೇರ್ ಅವರು ಪಂಜಾಬ್ನ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಗೌರವ್ ಯಾದವ್ ಅವರನ್ನು ಭೇಟಿ ಮಾಡಲು ಯೋಜಿಸುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ನಾವು ಸೂಕ್ತ ತನಿಖೆಗೆ ಒತ್ತಾಯಿಸುತ್ತೇವೆ ಮತ್ತು ಮಹಿಳಾ ಕಾನ್ಸ್ಟೆಬಲ್ಗೆ ಯಾವುದೇ ಅನ್ಯಾಯವಾಗಬಾರದು ಎಂದು ನಾವು ಅವರಿಗೆ ಹೇಳುತ್ತೇವೆ ಎಂದು ದಲ್ಲೆವಾಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಜೂನ್ 9 ರಂದು ಮೊಹಾಲಿಯಲ್ಲಿ, ಮೊಹಾಲಿಯಲ್ಲಿ ಹಿರಿಯ ಪೊಲೀಸ್ ಅಧೀಕ್ಷಕರ ಕಚೇರಿಗೆ ನ್ಯಾಯ ಮೆರವಣಿಗೆ ನಡೆಸಲಾಗುವುದು, ಕುಲ್ವಿಂದರ್ ಕೌರ್ ಅವರಿಗೆ ಯಾವುದೇ ಅನ್ಯಾಯವಾಗದಂತೆ ಒತ್ತಾಯಿಸುತ್ತೇವೆ ಎಂದರು.
ಕಾನ್ಸ್ಟೆಬಲ್ನ ಸಹೋದರ ಶೇರ್ ಸಿಂಗ್ ಕೂಡ ರೈತ ಮುಖಂಡ ಮತ್ತು ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯ ಸಂಘಟನಾ ಕಾರ್ಯದರ್ಶಿ ಆಗಿದ್ದಾರೆ. ಸಿಐಎಸ್ಎಫ್ ಕಾನ್ಸ್ಟೇಬಲ್ ಕುಲ್ವಿಂದರ್ ಕೌರ್ ಅವರನ್ನು ಅಮಾನತುಗೊಳಿಸಿದ್ದು, ಕಪಾಳಮೋಕ್ಷ ಘಟನೆಯ ತನಿಖೆಗಾಗಿ ತನಿಖಾ ಸಮಿತಿಯನ್ನು ರಚನೆ ಮಾಡಿದೆ.












Click it and Unblock the Notifications