FASTag KYC; ವಾಹನ ಸವಾರರು ಕೊಂಚ ನಿರಾಳ
ಬೆಂಗಳೂರು, ಫೆಬ್ರವರಿ 01: ಒಂದು ವಾಹನ ಒಂದು ಫಾಸ್ಟ್ ಟ್ಯಾಗ್ ನೀತಿಯ ಅನ್ವಯ ವಾಹನಗಳ ಮಾಲೀಕರು ತಮ್ಮ ವಾಹನದ ಫಾಸ್ಟ್ ಟ್ಯಾಗ್ ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಬೇಕಿದೆ. ಈಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಾಹನ ಸವಾರರಿಗೆ ಸಿಹಿಸುದ್ದಿಯನ್ನು ನೀಡಿದೆ.
ಈ ಹಿಂದಿನ ಆದೇಶದಂತೆ ಫಾಸ್ಟ್ ಟ್ಯಾಗ್ ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಜನವರಿ 31 ಕೊನೆಯ ದಿನವಾಗಿತ್ತು. ಈಗ ಅದನ್ನು 2024ರ ಫೆಬ್ರವರಿ 29ರ ತನಕ ವಿಸ್ತರಣೆ ಮಾಡಲಾಗುತ್ತದೆ. ಈ ಕುರಿತು ಎನ್ಹೆಚ್ಎಐ ಶೀಘ್ರದಲ್ಲೇ ಆದೇಶವನ್ನು ಹೊರಡಿಸಲಿದೆ.

ಎನ್ಹೆಚ್ಎಐನ ಹಿರಿಯ ಅಧಿಕಾರಿಯೊಬ್ಬರು ಈ ಕುರಿತು ಮಾಹಿತಿ ನೀಡಿದ್ದಾರೆ. ಫಾಸ್ಟ್ ಟ್ಯಾಗ್ ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಇದ್ದ ಗಡುವು ವಿಸ್ತರಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಫೆಬ್ರವರಿ ಅಂತ್ಯದ ತನಕ ಸಮಯ ದೊರೆಯಲಿದೆ.
ಅಕ್ರಮ ಫಾಸ್ಟ್ ಟ್ಯಾಗ್; ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮಾಹಿತಿ ಪ್ರಕಾರ ಇರುವ ಅಕ್ರಮ ಫಾಸ್ಟ್ ಟ್ಯಾಗ್ 1.27 ಕೋಟಿ. ಇದರಲ್ಲಿ 7 ಲಕ್ಷ ಫಾಸ್ಟ್ ಟ್ಯಾಗ್ ಮಾತ್ರ ಇ ಕೆವೈಸಿ ಆಗಿದೆ. ಈ ಹಿನ್ನಲೆಯಲ್ಲಿ ಇ ಕೆವೈಸಿ ಅಪ್ಡೇಟ್ ಮಾಡಲು ಇದ್ದ ಗಡುವು ವಿಸ್ತರಣೆ ಮಾಡಲಾಗುತ್ತಿದೆ.
ವಾಹನ ಸವಾರರು ಹೆದ್ದಾರಿಗಳ ಟೋಲ್ಗಳಲ್ಲಿ, ತಮ್ಮ ಬ್ಯಾಂಕ್ಗಳಲ್ಲಿ, ಎನ್ಹೆಚ್ಎಐ ವೆಬ್ಸೈಟ್ಗಳಿಗೆ ಭೇಟಿ ನೀಡಿ ಕೆವೈಸಿ ಅಪ್ ಡೇಟ್ ಮಾಡಲು ವ್ಯವಸ್ಥೆ ಮಾಡಲಾಗಿದೆ. ಒಂದೇ ಫಾಸ್ಟ್ ಟ್ಯಾಗ್ ಅನ್ನು ಹಲವು ವಾಹನಗಳಲ್ಲಿ ಬಳಕೆ ಮಾಡುವುದನ್ನು ತಪ್ಪಿಸಲು ಕೆವೈಸಿ ಅಪ್ಡೇಟ್ ಮಾಡಲಾಗುತ್ತಿದೆ.
ಒಂದು ವಾಹನಕ್ಕೆ ಒಂದು ಫಾಸ್ಟ್ ಟ್ಯಾಗ್ ಎಂಬುದು ಸರ್ಕಾರದ ನಿಯಮವಾಗಿದೆ. ಆದರೆ ಕೆಲವು ವಾಹನ ಮಾಲೀಕರು ಒಂದೇ ಫಾಸ್ಟ್ ಟ್ಯಾಗ್ ಅನ್ನು ಹಲವಾರು ವಾಹನಗಳಿಗೆ ಬಳಕೆ ಮಾಡುತ್ತಿದ್ದಾರೆ. ಆದ್ದರಿಂದ ಮಾಲೀಕರು ತಮ್ಮ ವಾಹನದ ಫಾಸ್ಟ್ ಟ್ಯಾಗ್ ಕೆವೈಸಿ ಮಾಡಿಸುವಂತೆ ಎನ್ಹೆಚ್ಎಐ ಸೂಚನೆ ನೀಡಿದೆ.
ಈ ಹಿಂದೆ ಜನವರಿ 31ರೊಳಗೆ ಫಾಸ್ಟ್ ಟ್ಯಾಗ್ ಕೆವೈಸಿ ಮಾಡಿಸಬೇಕು. ಇಲ್ಲವಾಲ್ಲಿ ಫಾಸ್ಟ್ ಟ್ಯಾಗ್ ರದ್ದುಗೊಳಿಸಲಾಗುತ್ತದೆ ಎಂದು ಎನ್ಹೆಚ್ಎಐ ಹೇಳಿತ್ತು. ಈಗ ವಾಹನ ಮಾಲೀಕರ ಬೇಡಿಕೆಯಂತೆ ಕೆವೈಸಿ ಮಾಡಿಸುವ ಅವಧಿಯನ್ನು ಒಂದು ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ.
ಹೆದ್ದಾರಿಗಳಲ್ಲಿ ಸಂಚಾರ ನಡೆಸುವ ವಾಹನಗಳಿಗೆ ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಲಾಗಿದೆ. ಟೋಲ್ಗಳಲ್ಲಿ ಕಾಯುವ ಸಮಯವನ್ನು ಇದು ಉಳಿತಾಯ ಮಾಡಿದೆ. ವಾಹನಗಳ ಮಾಲೀಕರ ಫಾಸ್ಟ್ ಟ್ಯಾಗ್ನಿಂದ ಹಣ ಕಡಿತವಾಗುವ ವ್ಯವಸ್ಥೆ ಮಾಡಲಾಗಿದೆ.
-
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ವಾಹನ ಸವಾರರಿಗೆ ಗುಡ್ನ್ಯೂಸ್: ಕರ್ನಾಟಕದ 66 RTOಗಳಲ್ಲಿ Geo-Fencing ಆಧಾರಿತ mVahan ಅಪ್ಲಿಕೇಷನ್ ಆರಂಭ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್












Click it and Unblock the Notifications