ಫೆ.29ರ ತನಕ ಫಾಸ್ಟ್ ಟ್ಯಾಗ್ ಶುಲ್ಕ ಪಾವತಿಸದೆ ಮುನ್ನಡೆಯಿರಿ
ನವದೆಹಲಿ, ಫೆಬ್ರವರಿ 13: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ದಿಂದ ಫಾಸ್ಟ್ ಟ್ಯಾಗ್ ಬಳಕೆಯನ್ನು ಹೆಚ್ಚಿಸಲು ಮುಂದಾಗಿದೆ. ಫೆಬ್ರವರಿ 29ರ ತನಕ ಫಾಸ್ಟ್ ಟ್ಯಾಗ್ ಶುಲ್ಕವಿಲ್ಲದೆ ವಾಹನ ಚಾಲಕರು ಪ್ರಯಾಣಿಸಬಹುದಾಗಿದೆ.
ಫೆಬ್ರವರಿ 15ರಿಂದ ಫೆಬ್ರವರಿ 29ರ ತನಕ ಈ ಸೌಲಭ್ಯ ಲಭ್ಯವಾಗಲಿದೆ. ಹೆದ್ದಾರಿಗಳ ಟೋಲ್ ಗಳಲ್ಲಿ ಡಿಜಿಟಲ್ ಸುಂಕ ಪಾವತಿ ಉತ್ತೇಜಿಸಲು ಸರ್ಕಾರ ಈ ಕ್ರಮ ಕೈಗೊಂಡಿದೆ. ಫಾಸ್ಟ್ ಟ್ಯಾಗ್ ಶುಲ್ಕ 100 ರುಪಾಯಿಗೆ ವಿನಾಯತಿ ನೀಡಲಾಗುತ್ತಿದೆ.
ಆದರೆ, ಫಾಸ್ಟ್ ಟ್ಯಾಗ್ ಖರೀದಿ ಸಂದರ್ಭದಲ್ಲಿನ ಠೇವಣಿ ಹಾಗೂ ಕನಿಷ್ಠ ಮೊತ್ತದಲ್ಲಿ ಯಾವುದೇ ಬದಲಾವ್ವಣೆ ಮಾಡಿಲ್ಲ. ಅಧಿಕೃತ ಮಾರಾಟ ಕೇಂದ್ರ, ಬ್ಯಾಂಕ್ ಗಳ ಮೂಲಕ ವಾಹನ ನೋಂದಣಿ ಪತ್ರ (RC) ತೋರಿಸಿ ಫಾಸ್ಟ್ ಟ್ಯಾಗ್ ಪಡೆಯಬಹುದಾಗಿದೆ.

ದೇಶದ 527 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಫಾಸ್ಟ್ ಟ್ಯಾಗ್ ಆಧಾರಿತ ಸುಂಕ ವ್ಯವಸ್ಥೆಯನ್ನು ಸರ್ಕಾರ ಜಾರಿಗೆ ತಂದಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಪ್ರಕಟಣೆ ಹೊರಡಿಸಿದೆ.
ಫಾಸ್ಟ್ ಟ್ಯಾಗ್ ವಿತರಣೆ ಕೇಂದ್ರ ಸಮೀಪದಲ್ಲಿ ಎಲ್ಲಿದೆ ಎಂದು ತಿಳಿಯಲು MyFASTag ಆಪ್ ಡೌನ್ಲೋಡ್ ಮಾಡಿಕೊಳ್ಳಬಹುದು.
ಫಾಸ್ಟ್ಯಾಗ್ ಬ್ರ್ಯಾಂಡ್ ಹೆಸರು ಭಾರತೀಯ ರಾಷ್ಟ್ರೀಯ ಹೆದ್ದಾರಿ ನಿರ್ವಹಣಾ ಕಂಪೆನಿ ನಿಯಮಿತದ (ಐಎಚ್ಎಂಸಿಎಲ್) ಸ್ವಾಮ್ಯಕ್ಕೆ ಒಳಪಟ್ಟಿದೆ. 2014ರಲ್ಲಿ ಪ್ರಾಯೋಗಿಕವಾಗಿ ಜಾರಿಗೊಂಡಿದ್ದು, 2019ರ ಡಿಸೆಂಬರ್ ತಿಂಗಳು ಫಾಸ್ಟ್ ಟ್ಯಾಗ್ ಪಡೆಯಲು ಅಂತಿಮ ಗಡುವು ನೀಡಲಾಗಿತ್ತು. ನಂತರ ಅವಧಿಯನ್ನು ವಿಸ್ತರಿಸಲಾಯಿತು.
ರಾಷ್ಟ್ರೀಯ ವಿದ್ಯುನ್ಮಾನ ಸುಂಕ ಸಂಗ್ರಹ(ಎನ್ ಇಟಿಸಿ) ವ್ಯವಸ್ಥೆಯಡಿಯಲ್ಲಿ ಎಲ್ಲಾ ಟೋಲ್ ಪ್ಲಾಜಾಗಳಲ್ಲೂ ಫಾಸ್ಟ್ ಟ್ಯಾಗ್ ಬಳಸಬಹುದಾಗಿದೆ. ಒಂದು ಬಾರಿ ದೇಶದೆಲ್ಲೆಡೆ ಫಾಸ್ಟ್ ಟ್ಯಾಗ್ ಸುಂಕ ವ್ಯವಸ್ಥೆ ಜಾರಿಗೆ ಬಂದರೆ ಪ್ರತಿ ದಿನ 100 ಕೋಟಿ ರು ಗೂ ಅಧಿಕ ಮೊತ್ತ ಸರ್ಕಾರದ ಬೊಕ್ಕಸ ಸೇರಲಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications